ಆದಾಯ ತೆರಿಗೆಯನ್ನು ಸರಿಯಾದ ಕ್ರಮದಲ್ಲಿ ಲೆಕ್ಕಾಚಾರ ಮಾಡಬೇಕು ಮತ್ತು ನಿಗದಿತ ಅವಧಿಯೊಳಗೆ ಇ-ಫೈಲಿಂಗ್ ಮಾಡಬೇಕು. ಇವುಗಳ ಬಗ್ಗೆ ಯಾವುದೇ ಪ್ರಶ್ನೆಗಳು, ಸಮಸ್ಯೆಯಿದ್ದಲ್ಲಿ, ಸಂಪನ್ಮೂಲ ವ್ಯಕ್ತಿಗಳಲ್ಲಿ ಹೇಳಿ ಇತ್ಯರ್ಥ ಪಡಿಸಿಕೊಳ್ಳಬೇಕು.
ಕೊಪ್ಪಳ:
ಯಾವುದೇ ತಪ್ಪಿಲ್ಲದಂತೆ ಸರಿಯಾದ ಕ್ರಮದಲ್ಲಿ ಆದಾಯ ತೆರಿಗೆ ಪಾವತಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು. ಅವರು ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ಆದಾಯ ತೆರಿಗೆ ಲೆಕ್ಕಾಚಾರ ಮಾಡುವ ಮತ್ತು ಇ-ಫೈಲಿಂಗ್ ಕ್ರಮದ ಬಗ್ಗೆ ಡಿಡಿಒಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ವಿವಿಧ ಇಲಾಖೆಗಳಲ್ಲಿನ ಡಿಡಿಒಗಳು ಹಾಗೂ ಸಿಬ್ಬಂದಿಗೆ ಆದಾಯ ತೆರಿಗೆ ಮತ್ತು ಇ-ಫೈಲಿಂಗ್ ಬಗ್ಗೆ ಮಾಹಿತಿ ಇರಬೇಕು. ಇದರಿಂದ ವೈಯಕ್ತಿಕ ಮತ್ತು ಕಚೇರಿಯ ಕಾರ್ಯನಿರ್ವಹಣೆಗೂ ಅನುಕೂಲವಾಗುತ್ತದೆ. ಇಂತಹ ತರಬೇತಿ ಅತ್ಯವಶ್ಯಕವಾಗಿದೆ. ಇದರ ಸದುಪಯೋಗ ಪಡೆದುಕೊಂಡು, ಆದಾಯ ತೆರಿಗೆಯನ್ನು ಸರಿಯಾದ ಕ್ರಮದಲ್ಲಿ ಲೆಕ್ಕಾಚಾರ ಮಾಡಬೇಕು ಮತ್ತು ನಿಗದಿತ ಅವಧಿಯೊಳಗೆ ಇ-ಫೈಲಿಂಗ್ ಮಾಡಬೇಕು. ಇವುಗಳ ಬಗ್ಗೆ ಯಾವುದೇ ಪ್ರಶ್ನೆಗಳು, ಸಮಸ್ಯೆಯಿದ್ದಲ್ಲಿ, ಸಂಪನ್ಮೂಲ ವ್ಯಕ್ತಿಗಳಲ್ಲಿ ಹೇಳಿ ಇತ್ಯರ್ಥ ಪಡಿಸಿಕೊಳ್ಳಬೇಕು ಎಂದರು.
ಈ ವೇಳೆ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ, ಸಂಪನ್ಮೂಲ ವ್ಯಕ್ತಿ ಹಾಗೂ ಆದಾಯ ತೆರಿಗೆ ಅಧಿಕಾರಿಗಳಾದ ಎಂ.ವಿ. ಪ್ರಸನ್ನಕುಮಾರ ಮತ್ತು ಗದಗ ಜಿಲ್ಲೆಯ ಮಹೇಶ ಮಂತ್ರಶೆಟ್ಟಿ, ಕೊಪ್ಪಳದ ಚಾರ್ಟಡ್ ಅಕೌಂಟೆಂಟ್ ಶ್ರಿನಿವಾಸ, ನಿರೀಕ್ಷಕರಾದ ವೆಂಕೋಬ ನಾಡಿಗೇರ ಹಾಗೂ ಸುನೀಲ್ ಕುಮಾರ, ಜಿಲ್ಲಾ ತರಬೇತಿ ಸಂಸ್ಥೆಯ ಬೋಧಕರಾದ ಶ್ರೀಧರ, ನರ್ಮದಾ ಸೇರಿದಂತೆ ಮತ್ತಿತರರಿದ್ದರು.
ಕಾರ್ಯಾಗಾರದಲ್ಲಿ ವೇತನದಲ್ಲಿ ಆದಾಯ ತೆರಿಗೆ, ಟಿಡಿಎಸ್ಸಿ ಮೂಲದಲ್ಲಿ ತೆರಿಗೆ ಕಟಾವಣೆ, ಆದಾಯ ತೆರಿಗೆ ರೀಟರ್ನ್ ಸಲ್ಲಿಕೆ ಕುರಿತು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. 100ಕ್ಕೂ ಅಧಿಕ ಡಿಡಿಒಗಳು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.