ಬಡ್ಡಿ ಸಹಿತ ಕಬ್ಬಿನ ಬಾಕಿ ಬಿಲ್‌ ಪಾವತಿಸಿ

KannadaprabhaNewsNetwork |  
Published : Jun 12, 2024, 12:37 AM IST
ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರ ಶಂತಕುಮಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದರು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಪ್ರಸಕ್ತ ಸಾಲಿನ ಕಬ್ಬಿನ ಎಫ್ಆರ್‌ಪಿ ದರ 10.25 ಇಳುವರಿಗೆ ₹ 3400 ನ್ಯಾಯ ಸಮ್ಮತವಲ್ಲ. ಅಲ್ಲದೇ, ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಾಕಿಯನ್ನು ಬಡ್ಡಿ ಸಮೇತ ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ ಶಾಂತಕುಮಾರ ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಪ್ರಸಕ್ತ ಸಾಲಿನ ಕಬ್ಬಿನ ಎಫ್ಆರ್‌ಪಿ ದರ 10.25 ಇಳುವರಿಗೆ ₹ 3400 ನ್ಯಾಯ ಸಮ್ಮತವಲ್ಲ. ಅಲ್ಲದೇ, ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಾಕಿಯನ್ನು ಬಡ್ಡಿ ಸಮೇತ ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ ಶಾಂತಕುಮಾರ ಆಗ್ರಹಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗಾಲದಿಂದ ತತ್ತರಿಸಿ, ಅಂತರ್ಜಲಮಟ್ಟ ಕುಸಿತವಾಗಿ ಕಬ್ಬಿನ ಇಳುವರಿ ಶೇಕಡ 30ರಷ್ಟು ಕಡಿಮೆಯಾಗಿರುವ ಸಮಯದಲ್ಲಿ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಕಬ್ಬಿನ ಎಫ್‌ಆರ್‌ಪಿ ಬೆಲೆ ನಿಗದಿ ಮಾಡಿರುವುದು ನ್ಯಾಯ ಸಮ್ಮತವಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ಕಡಿಮೆ ತೋರಿಸುವ ಕಾರಣ ಹೆಚ್ಚಿನ ಬೆಲೆ ಸಿಗಲು ಸಾಧ್ಯವಾಗುತ್ತಿಲ್ಲ. ಕೇಂದ್ರ ಸರ್ಕಾರ ಕಬ್ಬು ಬೆಳೆಯುವ ರೈತರ ಗಾಯದ ಮೇಲೆ ತುಪ್ಪ ಸವರಿ ಬರೆ ಎಳೆದಿವೆ ಎಂದು ಆರೋಪಿಸಿದರು.

ಕಳೆದ ಎಂಟು ತಿಂಗಳಿಂದ ಸಕ್ಕರೆ ಕಾರ್ಖಾನೆಗಳು ಸುಮಾರು ₹ 700 ಕೋಟಿ ಕಬ್ಬಿನ ಹಣ ರೈತರಿಗೆ ಪಾವತಿಸಿಲ್ಲ. ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ಇಂಥ ಕಾರ್ಖಾನೆಗಳನ್ನು ಸರ್ಕಾರ ಮುಟ್ಟುಗೋಲು ಹಾಕಬೇಕು. ಇಂತಹ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ರೈತರಿಗೆ ಹಾಲಿನ ಪ್ರೋತ್ಸಾಹ ಧನ ಲೀ.ಗೆ ಐದು ರು. ಎಂಟು ತಿಂಗಳಿಂದ ಬಿಡುಗಡೆಯಾಗಿಲ್ಲ. ಸುಮಾರು ₹ 750 ಕೋಟಿ ಹಣ ಕೂಡಲೇ ಬಿಡುಗಡೆ ಮಾಡಿ ಹೈನುಗಾರಿಕೆ ಮಾಡುವ ರೈತರನ್ನು ರಕ್ಷಿಸಬೇಕು. ಹಸುಗಳ ತಿಂಡಿ, ಆಹಾರ, ದುಬಾರಿಯಾಗಿದೆ. ಇದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಕಳಪೆ ರಸಗೊಬ್ಬರ ಕೀಟನಾಶಕ, ಬಿತ್ತನೆ ಬೀಜ ಮಾರಾಟಗಾರರ ವಿರುದ್ಧ ಜಾಮೀನು ರಹಿತ ಬಂಧನ ಮಾಡುವ ಕಠಿಣ ಕಾನೂನು ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಮನವಿ ಮಾಡಿದರು.

ಬೆಳಗಾವಿ ಜಿಲ್ಲೆಯ ತೋಟಗಾರಿಕೆ ಇಲಾಖೆ ಅಧಿಕಾರಿಗಳು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ಹಣವನ್ನು ರೈತರಿಗೆ ಮೋಸ ಮಾಡಿ ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಅವ್ಯವಹಾರ ಮಾಡಿರುವ ಅಧಿಕಾರಿಗಳ ವಿರುದ್ಧ ರೈತ ಸಂಘಟನೆ ಹೋರಾಟ ನಡೆಸಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ ಕುರಿತು ತನಿಖೆ ನಡೆಸಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ಸುರೇಶ್ ಪಾಟೀಲ್. ಜಿಲ್ಲಾಧ್ಯಕ್ಷ ಗುರುಸಿದ್ದಪ್ಪ ಕೋಟಗಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್, ಜಿಲ್ಲಾ ಕಾರ್ಯದರ್ಶಿ ಎಸ್.ಬಿ.ಸಿದ್ದಾಳ್, ಧಾರವಾಡ ಜಿಲ್ಲೆ ಕಾರ್ಯದರ್ಶಿ ಪರಶುರಾಮ ಎತ್ತಿನಗುಡ್ಡ, ರಮೇಶ್ ಹಿರೇಮಠ, ಶಾಸಪ್ಪ ನಾವಿ ಇತರರು ಇದ್ದರು.------------

ಕೋಟ್

ರಾಜ್ಯ ಸರ್ಕಾರ ರೈತರಿಗೆ ನೀಡುವ ಸವಲತ್ತುಗಳನ್ನು ಆಪ್‌ಗಳ ಮೂಲಕ ವಿತರಿಸುತ್ತಿದೆ. ಆದರೆ ₹ 25 ಸಾವಿರ ಕೋಟಿ ವಹಿವಾಟು ನಡೆಸುವ ಸಕ್ಕರೆ ಕಾರ್ಖಾನೆಗಳ ವ್ಯವಹಾರ ಆಪ್ ಮೂಲಕ ಯಾಕೆ ಮಾಡುತ್ತಿಲ್ಲ. ಕಬ್ಬು ಬೆಳೆಗಾರರ ದ್ವಿಪಕ್ಷೀಯ ಒಪ್ಪಂದ, ಕಬ್ಬಿನ ತೂಕ ಸಂದೇಶ, ಕಬ್ಬಿನ ಹಣ ಪಾವತಿ ಸಂದೇಶ, ಸಕ್ಕರೆ ಇಳುವರಿ ಸಂದೇಶ ನೀಡುವ ಆಪನ್ನು ಸಿದ್ದಗೊಳಿಸಲಾಗಿದ್ದರೂ, ರಾಜ್ಯ ಸರ್ಕಾರ ಯಾಕೆ ಜಾರಿ ಮಾಡಿಲ್ಲ.

ಕುರುಬೂರು ಶಾಂತಕುಮಾರ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ.

-----------------------------

ಬಾಕ್ಸ್‌

ಬೆಳೆಸಾಲ ಮನ್ನಾ ಮಾಡುವ ನೀತಿ ಜಾರಿ ಮಾಡಿ

ಕೃಷಿ ಪಂಪ್‌ಸೆಟ್‌ಗಳಿಗೆ ಸಂಪರ್ಕ ಪಡೆಯಲು ಅಕ್ರಮ ಸಕ್ರಮ ಯೋಜನೆಯಲ್ಲಿ ದುಪ್ಪಟ್ಟು ದಂಡ ವಸೂಲಿ ಮಾಡುವ ವಿದ್ಯುತ್ ನಿಗಮಗಳು ₹ 2 ಲಕ್ಷ ಖರ್ಚು ಮಾಡಿ ರೈತರೇ ಸ್ವಂತ ಟಿಸಿ ಖರೀದಿಸಬೇಕೆಂಬ ನಿಯಮ ಜಾರಿ ಮಾಡಿ ಅಘಾತ ನೀಡಿದ್ದಾರೆ. ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗೆ ಬರೆ ಹಾಕುವುದು ಬೇಡ. ಕೂಡಲೇ ಇದನ್ನು ವಾಪಸ್ ಪಡೆಯಬೇಕು. ಕೇಂದ್ರ ಸರ್ಕಾರ ಬರ, ಮಳೆಹಾನಿ, ಅತಿವೃಷ್ಟಿ ಹಾನಿ ಮಳೆ ವಿಪತ್ತು ನಷ್ಟ ಪರಿಹಾರದ ಎನ್ ಡಿಆರ್‌ಎಫ್ ಮಾನದಂಡ ತಿದ್ದುಪಡಿ ಮಾಡಿ ಬೆಳೆ ನಷ್ಟದ ಸಂಪೂರ್ಣ ಹಣ ನೀಡಬೇಕು. ಇಲ್ಲದಿದ್ದರೆ ಬರ, ಅತಿವೃಷ್ಟಿ ಮಳೆ ಹಾನಿಗೊಳಗಾದ ರೈತರ ಬೆಳೆ ಸಾಲ ಸಂಪೂರ್ಣ ಮನ್ನಾ ಮಾಡುವ ನೀತಿಯನ್ನು ಜಾರಿಗೆ ತರಬೇಕು. ಎಲ್ಲಾ ರೀತಿಯ ಬೆಳೆಗಳಿಗೂ ಅನ್ವಯವಾಗುವಂತೆ ಪರಿಹಾರ ನೀಡುವ ನೀತಿ ಜಾರಿಗೆ ತರಬೇಕು .ಈ ಬಗ್ಗೆ ರಾಜ್ಯದ ನೂತನ ಸಂಸದರು ಒತ್ತಾಯಿಸಬೇಕು ಎಂದು ಆಗ್ರಹ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಾಮ ಯುವಜನತೆ ಸ್ವಂತಿಕೆಗೆ ಕೇಂದ್ರ ಯೋಜನೆ: ಬಿ.ವೈ.ರಾಘವೇಂದ್ರ
ಸಮಾನತೆಯ ಅರಿವಿನ ಡಾ.ಅಂಬೇಡ್ಕರ್‌ ಹಬ್ಬ: ಡಾ.ಶಿವಾನಂದ