ಸೈನಿಕರ ಸೇವೆಗೆ ಗೌರವ ಸಲ್ಲಿಸಿ: ಯೋಧ ಸುರೇಶ್

KannadaprabhaNewsNetwork |  
Published : Aug 17, 2026, 02:00 AM IST
16ಕೆಎಂಎನ್ ಡಿ23 | Kannada Prabha

ಸಾರಾಂಶ

ಇಂದಿನ ಸೈನಿಕರು ದೇಶದ ಗಡಿ ರಕ್ಷಣೆಯಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿದ್ದು, ಅವರ ಸೇವೆಗೆ ಪ್ರತಿಯೊಬ್ಬ ನಾಗರಿಕರೂ ಗೌರವ ಸಲ್ಲಿಸಬೇಕು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಬಲಿದಾನ ಇಂದಿನ ಯುವ ಜನಾಂಗಕ್ಕೆ ಸ್ಫೂರ್ತಿಯಾಗಬೇಕು.

ಕೆ.ಎಂ.ದೊಡ್ಡಿ:

ಸಮೀಪದ ಮೆಣಸಗೆರೆ ಗ್ರಾಮದ ಜ್ಞಾನಮುದ್ರ ವಿದ್ಯಾಮಂದಿರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣ ನೆರವೇರಿಸಿದ ಯೋಧ ಸುರೇಶ್, ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರ ಹೋರಾಟಗಳು, ತ್ಯಾಗ ಮತ್ತು ಬಲಿದಾನ ಕಾರಣವಾಗಿದೆ ಎಂದರು.

ಇಂದಿನ ಸೈನಿಕರು ದೇಶದ ಗಡಿ ರಕ್ಷಣೆಯಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿದ್ದು, ಅವರ ಸೇವೆಗೆ ಪ್ರತಿಯೊಬ್ಬ ನಾಗರಿಕರೂ ಗೌರವ ಸಲ್ಲಿಸಬೇಕು ಎಂದು ತಿಳಿಸಿದರು. ಈ ವೇಳೆ ಶಾಲೆ ಅಧ್ಯಕ್ಷೆ ಡಾ.ಸೌಮ್ಯ ರಾಜೇಶ್, ಕಾರ್ಯದರ್ಶಿ ಶಿವಮ್ಮ ಶಿವಕುಮಾರ್, ಟ್ರಸ್ಟಿಯಾದ ತೇಜಸ್ವಿನಿ ತಿಪ್ಪಾರೇಗೌಡ , ಆಡಳಿತ ಅಧಿಕಾರಿ ಪ್ರಭಾವತಿ ಸುರೇಶ್ ಮತ್ತು ಪ್ರಾಂಶುಪಾಲೆ ಕೆ.ಎಸ್. ಶೃತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಹನೀಯರ ಆದರ್ಶ ಯುವ ಜನಾಂಗಕ್ಕೆ ಸ್ಫೂರ್ತಿ: ಚಿಕ್ಕ ಬೋರಯ್ಯ

ದೇವಲಾಪುರ:

ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಬಲಿದಾನ ಇಂದಿನ ಯುವ ಜನಾಂಗಕ್ಕೆ ಸ್ಫೂರ್ತಿ ಯಾಗಬೇಕು ಎಂದು ಮುಖ್ಯ ಶಿಕ್ಷಕ ಚಿಕ್ಕ ಬೋರಯ್ಯ ತಿಳಿಸಿದರು.

ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವದಲ್ಲಿ ಮಾತನಾಡಿ, ಭವ್ಯ ಭಾರತವನ್ನು ಕಟ್ಟುವ ಜವಾಬ್ದಾರಿ ಇಂದಿನ ಯುವ ಪೀಳಿಗೆ ಮೇಲಿದೆ ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ್ ಧ್ವಜಾರೋಹಣ ನೆರವೇರಿಸಿದರು. ಎಚ್.ಎಲ್.ನಾಗರಾಜು ಸಮಾರಂಭ ಉದ್ಘಾಟಿಸಿದರು.

ಇದೇ ವೇಳೆ ಎಸ್ ಡಿಎಂಸಿ ಸದಸ್ಯ, ಪೋಷಕರಾದ ಅಶೋಕ್ ಬ್ಯಾಡರಹಳ್ಳಿ ಶಾಲೆಗೆ ಕುರ್ಚಿಗಳನ್ನು ಮತ್ತು ಸ್ವರಾಜ್

ಟ್ರ್ಯಾಕ್ಟರ್ ಶೋ ರೂಮ್ ಮಾಲೀಕ ಮದನ್ ಅವರು ಶಾಲಾ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಶೂಟ್ ವಿತರಿಸಿದರು.

ಸಭೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಹಿರಿಯ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕರಾದ ಸುನಿತಾ, ಮುಸ್ತಾನ್, ಸ್ಪೂರ್ತಿರಾಜಕುಮಾರ್, ಮಂಜುನಾಥ್ , ಸಾಧಿಕ್ ಅಹಮದ್ , ಕಚೇರಿ ಸಹಾಯಕ ಮಂಜಣ್ಣ ರವರು ಮತ್ತು ಯಶವಂತ ಕುಮಾರ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೈಸ್‌ ರಸ್ತೇಲಿ ಟೋಲ್‌ ಸಂಗ್ರಹ ತಕ್ಷಣ ನಿಷೇಧಿಸಿ: ಸಚಿವ ಎಚ್‌ಡಿಕೆ
ಬಿ.ವೈ. ರಾಘವೇಂದ್ರ ಪ್ರಯತ್ನದಿಂದ ಜಿಲ್ಲೆ ಅಭಿವೃದ್ಧಿ: ಶಾಸಕ‌ ಆರಗ ಜ್ಞಾನೇಂದ್ರ