ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರು
ಎಂ.ಕೆ. ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಟನ್ ಕಬ್ಬಿಗೆ ₹3 ಸಾವಿರ ದರದಂತೆ ನ.30ರವರೆಗಿನ ಪೂರ್ತಿ ಬಿಲ್ ಈಗಾಗಲೇ ಪಾವತಿಸಲಾಗಿದೆ. ಡಿ.31ರವರೆಗಿನ ಒಂದು ತಿಂಗಳ ಕಬ್ಬಿನ ಬಿಲ್, ಕಟಾವು ಮತ್ತು ಸಾರಿಗೆ ಬಿಲ್ ಬಿಡುಗಡೆ ಮಾಡುತ್ತಿದ್ದು, ವಾರದೊಳಗೆ ರೈತರ ಖಾತೆಗೆ ಜಮಾ ಆಗಲಿದೆ. ಕಾರ್ಮಿಕರ ಎರಡು ತಿಂಗಳ ವೇತನ ಸಹ ಪಾವತಿಯಾಗಲಿದೆ ಎಂದು ಹೇಳಿದರು.
ಪ್ರಸಕ್ತ ಹಂಗಾಮಿನಲ್ಲಿ ನಮ್ಮ ಮೇಲೆ ವಿಶ್ವಾಸವಿಟ್ಟು ರೈತರು ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಪೂರೈಸುತ್ತಿದ್ದಾರೆ. ಆದರೆ, ಏಕಾಏಕಿ ಕಾರ್ಖಾನೆಗೆ ಸರ್ಕಾರಿ ಎಂಡಿಯನ್ನು ನೇಮಿಸಿದ್ದರಿಂದ ಕಬ್ಬಿನ ಬಿಲ್ ಬಗ್ಗೆ ರೈತರಲ್ಲಿ ಆತಂಕ,ಗೊಂದಲ ಮೂಡಿತ್ತು. ಇದನ್ನರಿತ ಆಡಳಿತ ಮಂಡಳಿಯವರು ಶಾಸಕ ಬಾಬಾಸಾಹೇಬ ಪಾಟೀಲ ಅವರ ಮೂಲಕ ಸರ್ಕಾರ ಹಾಗೂ ಸಕ್ಕರೆ ಆಯುಕ್ತರಿಗೆ ಎಂಡಿ ಬದಲಾಯಿಸದಂತೆ ಮನವಿ ಮಾಡಿದ್ದಾರೆ. ನ್ಯಾಯಾಲಯದ ಮೊರೆ ಹೋಗಿದ್ದರಿಂದ ನ್ಯಾಯಾಲಯ ಸರ್ಕಾರಿ ಎಂಡಿ ನೇಮಕಕ್ಕೆ ತಡೆಯಾಜ್ಞೆ ನೀಡಿದೆ. ಹೀಗಾಗಿ ನಾನೇ ಎಂಡಿ ಆಗಿ ಮುಂದುವರಿಯುತ್ತಿದ್ದು, ರೈತರು ಮೊದಲಿನಂತೆ ಹೆಚ್ಚಿನ ಪ್ರಮಾಣದಲ್ಲಿ ಕಾರ್ಖಾನೆಗೆ ಕಬ್ಬು ಪೂರೈಸಬೇಕೆಂದು ಮನವಿ ಮಾಡಿದ ಅವರು, ಆರ್ಥಿಕ ಸಂಕಷ್ಟದಲ್ಲಿರುವ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಸರಿಯಾಗಿ ಮುನ್ನಡೆಸುವ ಉದ್ದೇಶದಿಂದ ಕಿತ್ತೂರುಶಾಸಕ ಬಾಬಾಸಾಹೇಬ ಪಾಟೀಲ ಹಾಗೂ ಖಾನಾಪುರ ಶಾಸಕ ವಿಠ್ಠಲ ಹಲಗೇಕರ ನನ್ನನ್ನು ಎಂಡಿಯಾಗಿ ನೇಮಿಸಿದ್ದಾರೆ. ವಿಠ್ಠಲ ಹಲಗೇಕರ ಅವರು ತಮ್ಮ ಮಹಾಲಕ್ಷ್ಮೀ ಮಲ್ಟಿಪರ್ಪಜ್ ಸೊಸೈಟಿಯಿಂದ ಹಂಗಾಮು ಆರಂಭಕ್ಕೆ ₹23 ಕೋಟಿ ಸಾಲ ನೀಡಿದ್ದಾರೆಂದು ಮಾಹಿತಿ ನೀಡಿದರು.ನಿರ್ದೇಶಕರಾದ ಲಕ್ಷ್ಮಣ ಎಮ್ಮಿ, ಬಸವರಾಜ ಬೆಂಡಿಗೇರಿ, ಅಶೋಕ ಬೆಂಡಿಗೇರಿ, ಬಸವರಾಜ ಪುಂಡಿ, ಭರತೇಶ ಸೇಬಣ್ಣವರ, ಸಂಜೀವ ಹುಬಳೆಪ್ಪನವರ ಉಪಸ್ಥಿತರಿದ್ದರು.