ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಲಕ್ಷ್ಮೇಗೌಡನದೊಡ್ಡಿ ಗ್ರಾಮದಲ್ಲಿ ಶ್ರೀಮಾರಮ್ಮ ಶ್ರೀಪಟ್ಟಲದಮ್ಮ ಮತ್ತು ಶ್ರೀಮದ್ದೆನಟ್ಟಿಯಮ್ಮನವರ ಅಭಿವೃದ್ಧಿ ಸೇವಾ ಟ್ರಸ್ಟ್ನಿಂದ ನಿರ್ಮಾಣವಾಗಿರುವ ಶ್ರೀಮದನಟ್ಟಿ ದೇವಾಲಯದ ಪ್ರತಿಷ್ಠಾನದ ಮಹೋತ್ಸವದ ಮಂಡಲ ಪೂಜಾ ಕಾರ್ಯಕ್ರಮದಲ್ಲಿ ಅಭಿನಂಧನೆ ಸ್ವೀಕರಿಸಿ ಮಾತನಾಡಿ, ಪ್ರತಿ ಗ್ರಾಮಗಳಲ್ಲಿ ದೇವಾಲಯ ಇವೆ. ದೇವರ ಉತ್ಸವಕ್ಕೆ ಎಲ್ಲರು ಒಟ್ಟಾಗಿ ಸೇರಿ ಆಚರಿಸುತ್ತಾರೆ. ಗ್ರಾಮಸ್ಥರು ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಅವುಗಳಿಂದ ದೂರ ಉಳಿದು ದೇವರನ್ನು ಪ್ರಾರ್ಥಸಿದರೆ ಗ್ರಾಮಕ್ಕೆ ಒಳಿತಾಗಲಿದೆ ಎಂದರು.
ಗ್ರಾಮದ ದೇವಾಲಯ ಕಳೆದ ಎರಡು ತಿಂಗಳ ಹಿಂದೆ ಲೋಕಾರ್ಪಣೆಗೊಂಡಿದೆ. ದೇವತೆಗೆ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕ್ಷೇತ್ರದ ಜನತೆಗೆ ಮದನಟ್ಟಿಯಮ್ಮ ಒಳಿತು ಮಾಡಲಿ ಎಂದು ಕೋರಿದರು.ಈ ವೇಳೆ ಜಿಪಂ ಮಾಜಿ ಸದಸ್ಯ ಎ.ಎಸ್.ರಾಜೀವ್, ಅರ್ಚಕರಾದ ಪೂಜಾರಿ ಶಿವನಂಜೇಗೌಡ, ಸಮಿತಿ ಅಧ್ಯಕ್ಷ ಎಲ್.ಎನ್. ನಂಜೇಗೌಡ, ಕಾರ್ಯದರ್ಶಿ ಎಲ್.ಕೆ.ಚಿಕ್ಕಮಂಚೇಗೌಡ, ಖಜಾಂಚಿ ಕೃಷ್ಣೇಗೌಡ, ಮುಖಮಡರಾದ ಎಂ. ಮಂಚೇಗೌಡ, ಚಿಕ್ಕೇಗೌಡ ಸೇರಿದಂತೆ ಮತ್ತಿತರಿದ್ದರು.
ಮಂಡ್ಯ:
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಬೆಳಗ್ಗೆ 10.30ಕ್ಕೆ ನಡೆಯುವ ಸಮಾರಂಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಗುರುಪ್ರಸಾದ್ ಕೆರಗೋಡು ಅಧ್ಯಕ್ಷತೆ ವಹಿಸುವರು. ಗಾಂಧಿ ಸ್ಮಾರಕ ನಿಧಿಯ ಕಾರ್ಯಾಧ್ಯಕ್ಷ ಎನ್.ವಿಶುಕುಮಾರ್ ಅವರು ಲೇಖಕ ಸಿದ್ದನಗೌಡ ಪಾಟೀಲ ಅವರಿಗೆ ಪ್ರಶಸ್ತಿ ಪ್ರದಾನ ಮಾಡುವರು. ಪ್ರಶಸ್ತಿ ಪುರಸ್ಕೃತರ ಕುರಿತು ಕನ್ನಡ ಪ್ರಾಧ್ಯಾಪಕಿ ಹಾಗೂ ವಿಮರ್ಶಕಿ ಎಂ.ಎಸ್.ಆಶಾದೇವಿ ಮಾತನಾಡಲಿದ್ದಾರೆ ಎಂದರು.