ಧರ್ಮದ ತಿರುಳು ಅರಿತು ಬಾಳಿದರೆ ಶಾಂತಿ ನೆಲೆಸಲು ಸಾಧ್ಯ: ಶ್ರೀ ಸಿದ್ಧಲಿಂಗಮಹಾಸ್ವಾಮಿ

KannadaprabhaNewsNetwork |  
Published : Apr 01, 2026, 02:00 AM IST
ಬಳ್ಳಾರಿಯ ಗಾಂಧಿಭವನದಲ್ಲಿ ಜಮಾತೆ ಇಸ್ಲಾಮಿ ಹಿಂದ್ ಬಳ್ಳಾರಿ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ದ ಈದ್ ಮಿಲನ್ ಸೌಹಾರ್ದ ಕೂಟ ಸಮಾರಂಭದಲ್ಲಿ ಸೋಮಸಮುದ್ರ ಗ್ರಾಮದ ಕೊಟ್ಟೂರು ಸ್ವಾಮಿ ಶಾಖಾ ಮಠದ ಶ್ರೀ ಸಿದ್ಧಲಿಂಗಮಹಾಸ್ವಾಮಿ ಮಾತನಾಡಿದರು. | Kannada Prabha

ಸಾರಾಂಶ

ಧರ್ಮದ ತಿರುಳು ಅರಿತು, ಪರಸ್ಪರ ಗೌರವದಿಂದ ಬದುಕಿದಾಗ ಸಮಾಜದಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉದ್ಭವಿಸುವುದಿಲ್ಲ ಎಂದು ಸೋಮಸಮುದ್ರ ಗ್ರಾಮದ ಕೊಟ್ಟೂರು ಸ್ವಾಮಿ ಶಾಖಾ ಮಠದ ಶ್ರೀ ಸಿದ್ಧಲಿಂಗಮಹಾಸ್ವಾಮಿ ತಿಳಿಸಿದರು.

ಬಳ್ಳಾರಿ: ಧರ್ಮದ ತಿರುಳು ಅರಿತು, ಪರಸ್ಪರ ಗೌರವದಿಂದ ಬದುಕಿದಾಗ ಸಮಾಜದಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉದ್ಭವಿಸುವುದಿಲ್ಲ ಎಂದು ಸೋಮಸಮುದ್ರ ಗ್ರಾಮದ ಕೊಟ್ಟೂರು ಸ್ವಾಮಿ ಶಾಖಾ ಮಠದ ಶ್ರೀ ಸಿದ್ಧಲಿಂಗಮಹಾಸ್ವಾಮಿ ತಿಳಿಸಿದರು.

ನಗರದ ಗಾಂಧಿಭವನದಲ್ಲಿ ಜಮಾತೆ ಇಸ್ಲಾಮಿ ಹಿಂದ್ ಬಳ್ಳಾರಿ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ದ ಈದ್ ಮಿಲನ್ ಸೌಹಾರ್ದ ಕೂಟ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಎಲ್ಲ ಧರ್ಮಗಳಲ್ಲಿಯೂ ಮಾನವೀಯತೆ, ಪ್ರೀತಿ ಮತ್ತು ಸಹಾನುಭೂತಿ ಎಂಬ ಮೂಲ ಮೌಲ್ಯಗಳು ಅಡಗಿವೆ. ಅವುಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ. ಧರ್ಮ ಎಂದರೆ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವ ಸಾಧನವಾಗಬೇಕೇ ಹೊರತು, ವಿಭಜನೆಗೆ ಕಾರಣವಾಗಬಾರದು ಎಂದು ಹೇಳಿದರು.

ಯುವಜನತೆ ಧಾರ್ಮಿಕ ಸಹಿಷ್ಣುತೆ ಬೆಳೆಸಿಕೊಳ್ಳಬೇಕು. ಪರಸ್ಪರ ನಂಬಿಕೆ ಮತ್ತು ಗೌರವದಿಂದ ನಡೆದುಕೊಂಡರೆ ದೇಶದ ಏಕತೆ ಮತ್ತಷ್ಟು ಬಲವಾಗುತ್ತದೆ. ಭಾರತ ಮತ್ತಷ್ಟು ಶಕ್ತಿಯುತ ರಾಷ್ಟ್ರವಾಗಿ ಬೆಳೆಯಬೇಕಾದರೆ ಎಲ್ಲ ಸಮುದಾಯಗಳು ಒಗ್ಗೂಡಿ ಐಕ್ಯತೆಯಿಂದ ಬದುಕು ಕಟ್ಟಿಕೊಳ್ಳುವಂತಾಗಬೇಕು ಎಂದು ಶ್ರೀಗಳು ತಿಳಿಸಿದರು.

ಕ್ರೈಸ್ತ ಧರ್ಮಗುರು ಐವಾನ್ ಪಿಂಟೋ ಮಾತನಾಡಿ, ಸಂವಿಧಾನ ಚೌಕಟ್ಟಿನಲ್ಲಿ ಮತ ಹಾಗೂ ಧರ್ಮಗಳನ್ನು ಪಾಲಿಸಿದಾಗ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ದೇಶದ ಏಕತೆ ಮತ್ತು ಸೌಹಾರ್ದ ಕಾಪಾಡಲು ಪ್ರತಿಯೊಬ್ಬ ನಾಗರಿಕನು ಸಂವಿಧಾನದ ಮೌಲ್ಯಗಳನ್ನು ಗೌರವಿಸಬೇಕು. ಧರ್ಮಗಳ ನಡುವೆ ಪರಸ್ಪರ ಗೌರವ ಮತ್ತು ಸಹಿಷ್ಣುತೆ ಬೆಳೆಸಿಕೊಳ್ಳುವುದು ಅತ್ಯವಶ್ಯಕವಾಗಿದ್ದು, ಇದೇ ಸಮಾಜದಲ್ಲಿ ಶಾಂತಿ ಮತ್ತು ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ನಿಷ್ಠಿ ರುದ್ರಪ್ಪ, ಸಮಾಜದಲ್ಲಿ ಶಾಂತಿ, ಸೌಹಾರ್ದ ಮತ್ತು ಸಮಾನತೆ ಬೆಳೆಸಲು ವ್ಯಕ್ತಿಗಳು ಶ್ರೇಷ್ಠತೆಯ ಭ್ರಮೆಯಿಂದ ಹೊರಬಂದು ಪರಸ್ಪರ ಗೌರವದಿಂದ ಒಂದಾಗಿ ಬದುಕಬೇಕು ಎಂದು ಅಭಿಪ್ರಾಯಪಟ್ಟರು.ಮಾನವನ ನಡುವೆ ಉಂಟಾಗುವ ಅಸಮಾನತೆ, ಅಹಂಕಾರ ಮತ್ತು ಭೇದ-ಭಾವಗಳು ಸಮಾಜದ ಶಾಂತಿಗೆ ಧಕ್ಕೆಯನ್ನುಂಟು ಮಾಡುತ್ತವೆ. “ನಾವು ಎಲ್ಲರೂ ಒಂದೇ ಸಮಾಜದ ಅಂಗಗಳು ಎಂಬ ಅರಿವು ಮೂಡಿದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯ” ಎಂದು ಹೇಳಿದರು.

ಜಾತಿ, ಧರ್ಮ, ಭಾಷೆ ಎಂಬ ಹೆಸರಿನಲ್ಲಿ ಉಂಟಾಗುವ ವಿಭಜನೆಗಳನ್ನು ದೂರ ಮಾಡುವ ಹೊಣೆಗಾರಿಕೆ ಪ್ರತಿಯೊಬ್ಬ ನಾಗರಿಕರ ಮೇಲಿದೆ. ಇವುಗಳನ್ನು ಮೀರಿ ಸಹಬಾಳ್ವೆಯ ಮನೋಭಾವವನ್ನು ಬೆಳೆಸುವುದು ಕಾಲದ ಅಗತ್ಯವಾಗಿದೆ. ಶ್ರೇಷ್ಠತೆ ಎಂಬ ಭ್ರಮೆ ಮಾನವ ಸಂಬಂಧಗಳನ್ನು ದುರ್ಬಲಗೊಳಿಸುತ್ತದೆ. ಅದರಿಂದ ಹೊರಬಂದು ವಿನಯ, ಸಹಾನುಭೂತಿ ಮತ್ತು ಸಹಕಾರದ ಮನೋಭಾವವನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ ಎಂದು ಡಾ. ನಿಷ್ಠಿ ರುದ್ರಪ್ಪ ಪ್ರತಿಪಾದಿಸಿದರು.

ಸೈಯದ್ ಮಿಸಾಜುದ್ದೀನ್ ಖಾದ್ರಿ ಅವರು ರಂಜಾನ್ ಮಾಸಾಚರಣೆಯ ಮಹತ್ವವನ್ನು ತಿಳಿಸಿಕೊಟ್ಟರು. ಜಮಾತೆ ಇಸ್ಲಾಂ ಹಿಂದ್ ನ ಮುಖ್ಯಸ್ಥ ಡಾ. ಜೈನುಲ್ ಅಬಿದ್ದೀನ್ ಖಾದ್ರಿ, ನಿಜಾಮುದ್ದೀನ್ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಗುಲ್ಪಂ ಅಲಿ, ಸೈಯದ್ ನಾಸೀರ್ ಅಲಿ ಹಾಗೂ ಸಿರಾಜ್ ಅಹಮದ್ ಕಾರ್ಯಕ್ರಮ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ತೊಳಲಾಟ-ಅಪವಾದಗಳೇ ಅಕ್ಷರ ತಾಳಿವೆ
ಮಹಿಳಾ ಕಾದಂಬರಿ ಅಸಮಾನತೆ ಪ್ರಶ್ನಿಸುವ ಅಸ್ತ್ರ