ಯಲಬುರ್ಗಾ: ದೈವ ಭಕ್ತಿಯಿಂದ ಮನಸ್ಸಿಗೆ ನೆಮ್ಮದಿ ಲಭಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಹೇಳಿದರು.
ಚಿಕ್ಕದಾದ ಗ್ರಾಮಗಳಲ್ಲಿ ಒಗ್ಗಟ್ಟು ಇರುವುದರಿಂದ ದೇವಸ್ಥಾನ ನಿರ್ಮಾಣದಂತ ಕಾರ್ಯಗಳ ಸರಳವಾಗಿ ಸಾಗಲು ಸಾಧ್ಯವಾಗುತ್ತದೆ. ದೇವಸ್ಥಾನ ನಿರ್ಮಾಣದ ಜತೆಗೆ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸಿಗೆ ಸಂತೃಪ್ತ ಭಾವ ಹೆಚ್ಚುತ್ತದೆ.ಪ್ರತಿಯೊಬ್ಬ ಪಾಲಕರು, ಹಿರಿಯರು ತಮ್ಮ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಕೊಡಿಸುವ ಮೂಲಕ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಕಲಿಕೆಯ ಕಾಳಜಿ ವಹಿಸಬೇಕು ಎಂದರು.
ಶ್ರೀಧರ ಮುರಡಿ ಹಿರೇಮಠದ ಶ್ರೀಬಸವಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿ ದೇವಸ್ಥಾನ ಲೋಕಾರ್ಪಣೆಗೊಂಡಿರುವುದು ಸಂತಸದ ಸಂಗತಿ. ಎಂಎಲ್ಸಿ ಅನುದಾನ ನೀಡುವ ಮೂಲಕ ಗ್ರಾಮದ ದೈವ ಭಕ್ತಿಗೆ ಕಾರಣವಾದ ಹೇಮಲತಾ ನಾಯಕರಿಗೆ ಇನ್ನೂ ಹೆಚ್ಚು ಸೇವೆ ಮಾಡುವ ಶಕ್ತಿ ಭಗವಂತ ನೀಡಲಿ ಎಂದರು.ಜಿಪಂ ಮಾಜಿ ಸದಸ್ಯೆ ಗಂಗಮ್ಮ ಈಶಣ್ಣ ಗುಳಗಣ್ಣನವರ ಅಧ್ಯಕ್ಷತೆ ವಹಿಸಿದ್ದರು. ತಾಪಂ ಮಾಜಿ ಉಪಾಧ್ಯಕ್ಷ ಕಳಕಪ್ಪ ಕಂಬಳಿ, ಸಮಾಜ ಸೇವಕ ಬಸಲಿಗಂಪ್ಪ ಭೂತೆ ಮಾತನಾಡಿದರು. ಕಲ್ಲಪ್ಪ ತೊಂಡಿಹಾಳ ಪ್ರಾಸ್ತಾವಿಕ ಮಾತನಾಡಿದರು. ಇದೆ ವೇಳೆ ೨೦ನೇ ವರ್ಷದ ಶ್ರೀ ಶರಣಬಸವೇಶ್ವರರ ಪುರಾಣ ಪ್ರವಚನ ಪ್ರಾರಂಭಗೊಂಡಿತು.