ಆಧ್ಯಾತ್ಮ ಸಾಧನೆಯಿಂದ ನೆಮ್ಮದಿ: ರಂಭಾಪುರಿ ಶ್ರೀಗಳು

KannadaprabhaNewsNetwork |  
Published : Feb 06, 2024, 01:37 AM IST
ಪೊಟೋ ಪೈಲ್ ನೇಮ್ ೫ಎಸ್‌ಜಿವಿ೨   ತಾಲೂಕಿನ ಬಂಕಾಪುರ ಅರಳೆಲೆ ಹಿರೇಮಠದ ಆವರಣದಲ್ಲಿ ನಿರ್ಮಿಸಿದ ಶ್ರೀ ಗುರು ರುದ್ರಮುನೀಶ್ವರ ಸಮುದಾಯ ಭವನದಲ್ಲಿ ಇಷ್ಟಲಿಂಗ ಮಹಾಪೂಜೆ ನೆರವೇರಿಸಿ ನಂತರ ನಡೆದ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು, ೫ಎಸ್‌ಜಿವಿ೨-೧   ತಾಲೂಕಿನ ಬಂಕಾಪುರ ಅರಳೆಲೆ ಹಿರೇಮಠದ ಆವರಣದಲ್ಲಿ ನಿರ್ಮಿಸಿದ ಶ್ರೀ ಗುರು ರುದ್ರಮುನೀಶ್ವರ ಸಮುದಾಯ ಭವನದಲ್ಲಿ ಇಷ್ಟಲಿಂಗ ಮಹಾಪೂಜೆ ನೆರವೇರಿಸಿ ನಂತರ ನಡೆದ ಧರ್ಮ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರನ್ನು ಸನ್ಮಾನಿಸಿ ಗೌರವಿಸಿದರು.    | Kannada Prabha

ಸಾರಾಂಶ

ಆಧುನಿಕ ಜಗದಲ್ಲಿ ಮನುಷ್ಯ ಬಹಳಷ್ಟು ಒತ್ತಡದಲ್ಲಿ ಸಿಲುಕಿದ್ದಾನೆ. ಮಾನಸಿಕವಾಗಿ ಮನಸ್ಸು ದುರ್ಬಲಗೊಳ್ಳುತ್ತದೆ.

ಕನ್ನಡಪ್ರಭ ವಾರ್ತೆ ಶಿಗ್ಗಾಂವಿ

ಆಧುನಿಕ ಜಗದಲ್ಲಿ ಮನುಷ್ಯ ಬಹಳಷ್ಟು ಒತ್ತಡದಲ್ಲಿ ಸಿಲುಕಿದ್ದಾನೆ. ಮಾನಸಿಕವಾಗಿ ಮನಸ್ಸು ದುರ್ಬಲಗೊಳ್ಳುತ್ತದೆ. ಶಾಂತಿ, ನೆಮ್ಮದಿಗಾಗಿ ಜೀವನದಲ್ಲಿ ಒಂದಿಷ್ಟಾದರೂ ಆಧ್ಯಾತ್ಮ ಚಿಂತನೆ ಮಾಡುವ ಅವಶ್ಯಕತೆ ಇದೆಯೆಂದು ರಂಭಾಪುರಿ ಡಾ. ವೀರಸೋಮೇಶ್ವರ ಶ್ರೀಗಳು ಹೇಳಿದರು.

ತಾಲೂಕಿನ ಬಂಕಾಪುರ ಅರಳೆಲೆ ಹಿರೇಮಠದ ಆವರಣದಲ್ಲಿ ನಿರ್ಮಿಸಿದ ಶ್ರೀ ಗುರು ರುದ್ರಮುನೀಶ್ವರ ಸಮುದಾಯ ಭವನದಲ್ಲಿ ಇಷ್ಟಲಿಂಗ ಮಹಾಪೂಜೆ ನೆರವೇರಿಸಿ ನಂತರ ನಡೆದ ಧರ್ಮ ಸಮಾರಂಭದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಜೀವನದಲ್ಲಿ ಹಣ ಸಂಪಾದನೆಯೊಂದೇ ಗುರಿಯಲ್ಲ. ಹಣದ ಜೊತೆಗೆ ಒಂದಿಷ್ಟಾದರೂ ಆಧ್ಯಾತ್ಮ ಚಿಂತನೆ ಬೆಳೆಸಿಕೊಳ್ಳಬೇಕು. ಆಡುವ ಮಾತು, ನಡೆಯುವ ದಾರಿ ಬೇರೆ ಬೇರೆ ಆದ ಕಾರಣ ಜೀವನದಲ್ಲಿ ಇರಬೇಕಾದಷ್ಟು ಶಾಂತಿಯಿಲ್ಲ. ಸತ್ಯ ಮತ್ತು ಧರ್ಮದ ವಾತಾವರಣದಲ್ಲಿ ಬೆಳೆದು ಬಲಗೊಳ್ಳಬೇಕಾದರೆ ಗುರುವೇ ಮೂಲನಾಗಿದ್ದಾನೆ. ಜೀವನ ವಿಕಾಸ ಮತ್ತು ಅಭ್ಯುದಯ ಧರ್ಮದ ಆಚರಣೆಯಿಂದ ದೊರಕುತ್ತದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ಮೌಲ್ಯಾಧಾರಿತ ಬದುಕಿಗೆ ಧರ್ಮದ ದಶವಿಧ ಸೂತ್ರಗಳನ್ನು ಬೋಧಿಸಿದ್ದಾರೆ. ಅಷ್ಟಾವರಣ, ಪಂಚಾಚಾರ ಮತ್ತು ಷಟ್‌ಸ್ಥಲ ಚಿಂತನೆಗಳಿಂದ ಬದುಕು ಬಲಗೊಳ್ಳಲು ಸಾಧ್ಯ. ಶಿವನನ್ನು ಪೂಜಿಸಿದರೆ ಸಕಲ ದೇವಾನುದೇವತೆಗಳನ್ನು ಪೂಜಿಸಿದ ಫಲ ಪ್ರಾಪ್ತವಾಗುತ್ತದೆ ಎಂದರು.

ನೇತೃತ್ವ ವಹಿಸಿದ್ದ ಪಟ್ಟಾಧ್ಯಕ್ಷ ರೇವಣಸಿದ್ಧೇಶ್ವರ ಶಿವಾಚಾರ್ಯರು, ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯರು ಮಾತನಾಡಿ, ಲಿಂಗೈಕ್ಯ ಶ್ರೀ ಗುರು ರುದ್ರಮುನಿ ಶಿವಾಚಾರ್ಯರು ಭಕ್ತರ ಒಳಿತಿಗಾಗಿ ಬಹಳಷ್ಟು ಶ್ರಮಿಸಿದ್ದನ್ನು ಮರೆಯಲಾಗದು. ಭೌತಿಕ ಬದುಕು ಶ್ರೀಮಂತಗೊಂಡಂತೆ ಆಂತರಿಕ ಬದುಕು ಪರಿಶುದ್ಧಗೊಳ್ಳಬೇಕಾಗಿದೆ. ಅರಿವಿನ ದಾರಿಯಲ್ಲಿ ನಡೆಸುವುದೇ ನಿಜವಾದ ಗುರುವಿನ ಕರ್ತವ್ಯ ಎಂದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಆಧ್ಯಾತ್ಮದ ತವರು ಮನೆಯಂತಿರುವ ಭಾರತ ದೇಶದಲ್ಲಿ ಸಂಸ್ಕಾರ ಮತ್ತು ಸಂಸ್ಕೃತಿ ಬೆಳೆದು ಬಂದಿದೆ. ಈ ಪುಣ್ಯದ ನಾಡಿನ ಆಚಾರ್ಯರು, ಋಷಿ ಮುನಿಗಳು ಧರ್ಮದ ಮೂಲಕ ಮನುಷ್ಯನ ಬದುಕಿಗೆ ಭಾವೈಕ್ಯತೆಯ ಬೆಸುಗೆಯನ್ನು ಬೆಸೆದಿದ್ದಾರೆ. ಇಡೀ ವಿಶ್ವವೇ ಇಂದು ಭಾರತದತ್ತ ಮುಖ ಮಾಡಿ ನೋಡಲು ಇಲ್ಲಿನ ಧರ್ಮ ಸಂಸ್ಕೃತಿಯೇ ಕಾರಣ ಎಂಬುದನ್ನ ಮರೆಯಬಾರದು. ನಾಡಿನ ಮಠಗಳು ಜನಮಾನಸಕ್ಕೆ ಅವಶ್ಯಕವಾದ ಆಧ್ಯಾತ್ಮದ ಬೆಳಗನ್ನಿತ್ತು ಮುನ್ನಡೆಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿಗಾಗಿ ಮಕ್ಕಳಿಂದ ಪತ್ರ: ₹490 ಕೋಟಿ ಕೊಟ್ಟ ಸಿಎಂ!
ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ : ಬಿಯರ್‌, ವೈನ್‌ ಅಗ್ಗ?