ಶ್ರೀ ಚಾಮುಂಡೇಶ್ವರಿ ಅಮ್ಮನವರಿಗೆ ಕಡಲೆಕಾಯಿ ಅಲಂಕಾರ

KannadaprabhaNewsNetwork |  
Published : Jul 05, 2025, 12:18 AM IST
4ಕೆಎಂಎನ್ ಡಿ23 | Kannada Prabha

ಸಾರಾಂಶ

ದೇವಾಲಯದ ಮುಖ್ಯ ಅರ್ಚಕ ಲಕ್ಷ್ಮೀಶ್ ಅವರ ತಂಡ ಗುರುವಾರ ರಾತ್ರಿಯಿಂದಲೇ ದೇವಾಲಯದಲ್ಲಿ ಕಡಲೆಕಾಯಿ ತರಿಸಿ ಹೂವಿನೊಂದಿಗೆ ಗರ್ಭಗುಡಿ ಸೇರಿದಂತೆ ದೇವಿಗೆ ವಿಶೇಷ ಅಲಂಕಾರ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಎರಡನೇ ಆಷಾಢ ಶುಕ್ರವಾರದ ಪ್ರಯುಕ್ತ ಪಟ್ಟಣದ ಶ್ರೀ ಚಾಮುಂಡೇಶ್ವರಿ ಅಮ್ಮನವರಿಗೆ ಮಂಗಳ ದ್ರವ್ಯ ಸಹಿತ ಫಲಪಂಚಾಮೃತ ಅಭಿಷೇಕ ನಡೆಸಿ ಕಡಲೆ ಕಾಯಿಯಿಂದ ವಿಶೇಷವಾಗಿ ಅಲಂಕರಿಸಲಾಯಿತು.

ದೇವಾಲಯದ ಮುಖ್ಯ ಅರ್ಚಕ ಲಕ್ಷ್ಮೀಶ್ ಅವರ ತಂಡ ಗುರುವಾರ ರಾತ್ರಿಯಿಂದಲೇ ದೇವಾಲಯದಲ್ಲಿ ಕಡಲೆಕಾಯಿ ತರಿಸಿ ಹೂವಿನೊಂದಿಗೆ ಗರ್ಭಗುಡಿ ಸೇರಿದಂತೆ ದೇವಿಗೆ ವಿಶೇಷ ಅಲಂಕಾರ ಮಾಡಲಾಯಿತು.

ದೇವಾಲಯದ ಪಕ್ಕದಲ್ಲಿ ಹೋಮ- ಹವನಗಳ ನಡೆಸಿ ಶುಕ್ರವಾರ ಲೋಕ ಕಲ್ಯಾಣಾರ್ಥ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಪಟ್ಟಣ ಮಾತ್ರವಲ್ಲದೆ ಅಕ್ಕ ಪಕ್ಕದ ಗ್ರಾಮಗಳಿಂದ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿ ದರ್ಶನ ಮಾಡಿ ಪುನೀತರಾದರು. ಬಂದ ಭಕ್ತರಿಗೆ ಮಂಗಳಾರತಿ, ತೀರ್ಥ, ಪ್ರಸಾದವನ್ನು ವಿತರಿಸಲಾಯಿತು.

ಪಟ್ಟಣದ ಶ್ರೀ ಲಕ್ಷ್ಮೀ ದೇವಿ ದೇವಾಲಯ, ಟಿ.ಎಂ ಹೊಸೂರು ಗೇಟ್ ಬಳಿ ಇರುವ ಮಹಾ ಕಾಳಿ ದೇವಾಲಯದಲ್ಲೂ ಆಷಾಢ ಮಾಸದ ಎರಡನೇ ಶುಕ್ರವಾರದ ಅಂಗವಾಗಿ ವಿಶೇಷ ಪೂಜೆಗಳು ಜರುಗಿದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ