ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಅಭಿಮಾನೋತ್ಸವದ ಹಿನ್ನಲೆ ಗುರುವಾರ ಪೂರ್ವ ಸಿದ್ಧತೆ ಪರಿಶೀಲಿಸಿದ ನಂತರ ಮಾತನಾಡಿದ ಅವರು, ರಾಜ್ಯದ ವಿವಿಧ ಮೂಲೆಗಳಿಂದ 8 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳಲಿದ್ದಾರೆ. ಇಡೀ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ. ಊಟ ಸೇರಿದಂತೆ ಎಲ್ಲವನ್ನು ನಿರ್ವಹಿಸಲಾಗುತ್ತಿದೆ ಎಂದರು.
ಯಡಿಯೂರಪ್ಪ ಎಂದರೆ ರೈತ ಹೋರಾಟಗಾರ ಎಂದೇ ರಾಜ್ಯದ ಜನತೆ ಗುರುತಿಸುತ್ತಾರೆ. ಹಿಂದುಳಿದವರು, ರೈತರು, ಶೋಷಿತರ ಪರವಾಗಿ ಹೋರಾಟ ಮಾಡಿಕೊಂಡು ಬಂದ ಬಹು ದೊಡ್ಡ ಶಕ್ತಿ ಅವರು. ಹೋರಾಟಗಾರ ರಾಜಕೀಯವಾಗಿಯೂ ಯಶ ಕಾಣಬಹುದೆಂಬುದಕ್ಕೆ ಯಡಿಯೂರಪ್ಪ ತಾಜಾ ಉದಾಹರಣೆ. ಜನ ಸೇವೆಗಾಗಿಯೇ ತಮ್ಮ ಜೀವನನ್ನೇ ಮುಡುಪಾಗಿ ಇಟ್ಟಿದ್ದಾರೆ. ತಮ್ಮ ಅಧಿಕಾರದ ಅವಧಿಯಲ್ಲಿ ದಲಿತರು, ಪರಿಶಿಷ್ಟ ಜಾತಿ ಮತ್ತು ಪಂಗಡ, ಮಹಿಳೆಯರಿಗೆ ಧ್ವನಿಯಾಗಿ ಕೆಲಸ ಮಾಡಿದ್ದಾರೆ. ಬಡವರ ಪರವಾಗಿ ಕೆಲಸ ಮಾಡುವಾಗ ಎದುರಾದ ಅನೇಕ ಸವಾಲುಗಳ ಸಮರ್ಥವಾಗಿ ನಿರ್ವಹಿಸಿದ್ದಾರೆಂದು ಹೇಳಿದರು.ಕಾರ್ಯಕ್ರಮಕ್ಕೆ ಬರಲು ರಾಜ್ಯದ 29,000 ಹಳ್ಳಿಗಳಿಂದ ಜನತೆ ಉತ್ಸುಕರಾಗಿದ್ದಾರೆ. ರೈತರು, ದೇವದಾಸಿಯರು, ದಲಿತರು ಕಾರ್ಮಿಕರು, ಅಭಿಮಾನಿಗಳು ಹಿತೈಷಿಗಳು ಪಾಲ್ಗೊಳ್ಳಲು ಪಾಸ್ಗಳ ಕೇಳುತ್ತಿದ್ದಾರೆ. ಚಿತ್ರದುರ್ಗದಲ್ಲಿ ಮೇ 8ರ ಸಂಜೆ ಯಡಿಯೂರಪ್ಪರವರ ಪುರಪ್ರವೇಶವಾಗಲಿದೆ. ಈ ಸಮಯದಲ್ಲಿ ನಮ್ಮ ಕಲೆ, ಸಾಹಿತ್ಯ, ಸಂಸ್ಕೃತಿ ಆನಾವರಣ ಮಾಡುವಂತಹ ಕಾರ್ಯಕ್ರಮ ಇದಾಗಲಿದೆ. ಚಿತ್ರದುರ್ಗ ಐತಿಹಾಸಿಕ ನಾಡಾಗಿದೆ. ಸುಮಾರು 76 ಎಕರೆ ಪ್ರದೇಶದಲ್ಲಿ ಈ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಕುಡಿಯುವ ನೀರು, ಉಪಹಾರ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಜನತೆ ಸ್ವಯಂ ಪ್ರೇರಣೆಯಿಂದ ಬಂದು ಕೆಲಸವನ್ನು ಮಾಡುತ್ತಿದ್ದಾರೆ ಎಂದರು.