ಕನ್ನಡಪ್ರಭ ವಾರ್ತೆ ಜಮಖಂಡಿ
ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ವಿಜಯಲಕ್ಷ್ಮೀ ತುಂಗಳ ಮಾತನಾಡಿ, ಬಿಹಾರದ ಪ್ರಜ್ಞಾವಂತ ಮತದಾರರು ಪ್ರಭುದ್ಧತೆಯಿಂದ ಮತ ಚಲಾಯಿಸಿದ್ದಾರೆ. ಅಭಿವೃದ್ಧಿಗೆ ಮತಗಳು ದೊರೆತಿವೆ. ನಿತೀಶ್ಕುಮಾರ ಅವರ ಜನಪರ ಆಡಿತಕ್ಕೆ ಮತ್ತೆ ಮತದಾರರು ಅವಕಾಶ ನೀಡಿದ್ದಾರೆ ಎಂದು ಹೇಳಿದರು.
ಮುಖಂಡರಾದ ಏಗಪ್ಪ ಸವದಿ ಮಾತನಾಡಿ ಕಾಂಗ್ರೆಸ್ ಮುಖಂಡರ ಶತ ಪ್ರಯತ್ನಕ್ಕೆ ಬಿಹಾರದ ಪ್ರಜ್ಞಾವಂತ ಜನರು ಸೊಪ್ಪು ಹಾಕಿಲ್ಲ ಎಂಬುದನ್ನು ಕಾಂಗ್ರೆಸ್ ಅರ್ಥ ಮಾಡಿಕೊಳ್ಳಬೇಕು. ಭಾರತ ಹಿಂದು ರಾಷ್ಟ್ರವಾಗಿದೆ ಹಾಗೂ ಉಳಿಯುತ್ತದೆ. ದೇಶದ ಸಮಗ್ರ ಅಭಿವೃದ್ಧಿ ಕೆವಲ ಬಿಜೆಪಿಯಿಂದ ಮಾತ್ರಸಾಧ್ಯ ಎಂಬುದು ಎಲ್ಲರಿಗೂ ತಿಳಿದಿದೆ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಅಭಿವೃದ್ಧಿಯತ್ತ ಗಮನ ಹರಿಸಿಲ್ಲ. ಹಗಲು ದರೋಡೆ ನಡೆದಿದೆ ಎಂದು ಆರೋಪಿಸಿದರು.ಮುಖಂಡರಾದ ಸಿ.ಟಿ.ಉಪಾಧ್ಯಾಯ ಅಜಯ ಕಡಪಟ್ಟಿ,ರಾಜಾಸಾಬ ಕಡಕೋಳ, ಶಂಕರ ಕಾಳೆ, ಗಣೇಶ ಶಿರಗಣ್ಣವರ ಮುಂತಾದವರು ಮಾತನಾಡಿದರು. ಗ್ರಾಮೀಣ ಮಂಡಲ ಅಧ್ಯಕ್ಷ ಮಲ್ಲು ದಾನಗೌಡ, ಗೀತಾ ಸೂರ್ಯವಂಶಿ, ನಾಗರಾಜ, ಶ್ರೀಧರ ಕಂಬಿ, ಸುನೀಲ, ವಿನಾಯಕ ಗವಳಿ, ಗುರುಪಾದಪ್ಪ ಮೆಂಡಿಗೇರಿ, ಸೇರಿದಂತೆ ಅನೇಕ ಕಾರ್ಯಕರ್ತರು ಮುಖಂಡರು ಇದ್ದರು. ನಗರದ ಹನುಮಾನ ಚೌಕ್ನಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.