ಕಾಟಾಚಾರದ ಜನಸ್ಪಂದನಾ ಸಭೆಗೆ ಜನರ ನಿರ್ಲಕ್ಷ್ಯ

KannadaprabhaNewsNetwork |  
Published : Apr 05, 2026, 01:30 AM IST
4ಎಚ್ಎಸ್ಎನ್4 : ಹೊಳೆನರಸೀಪುರದ ತಾ. ಕಚೇರಿಯಲ್ಲಿ ಆಯೋಜಿಸಿದ್ದ ಜನಸ್ಪಂದನಾ ಸಭೆಯಲ್ಲಿ ನೊಂದವರು ಅರ್ಜಿ ಸಲ್ಲಿಸಿದರು. | Kannada Prabha

ಸಾರಾಂಶ

ತಹಸೀಲ್ದಾರ್ ವೈ.ಎಂ.ರೇಣುಕುಮಾರ್ ಅಧ್ಯಕ್ಷತೆಯಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ತಹಸೀಲ್ದಾರ್‌ ವೈ. ಎಂ. ರೇಣುಕುಮಾರ್‌ ಮಾತನಾಡಿ, ಜನಸ್ಪಂದನಾ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ೬ ಅರ್ಜಿಗಳು, ಪುರಸಭೆಗೆ ಸಂಬಂಧಿಸಿದಂತೆ ೪ ಅರ್ಜಿಗಳು, ಕೃಷಿ ಇಲಾಖೆ ಸಂಬಂಧಿಸಿದಂತೆ ೧ ಮತ್ತು ಹೇಮಾವತಿ ನೀರಾವರಿ ಇಲಾಖೆ ಸಂಬಂಧಿಸಿದಂತೆ ೧ ಅರ್ಜಿ ಸಲ್ಲಿಕೆಯಾಗಿದ್ದು, ಒಟ್ಟು ೧೨ ಅರ್ಜಿಗಳು ಸಲ್ಲಿಕೆಯಾಗಿದೆ. ಇಲಾಖಾವಾರು ಲಭ್ಯವಾದ ಅರ್ಜಿಗಳ ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ವರದಿ ನೀಡುವ ಜತೆಗೆ ಅಧಿಕಾರಿಗಳು ಜನರಿಂದ ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲನೆ ನಡೆಸಿ, ನಿಯಮದಂತೆ ಇತ್ಯರ್ಥ ಪಡಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ಪಟ್ಟಣದಲ್ಲಿ ಶನಿವಾರ ನಡೆದ ಜನಸ್ಪಂದನಾ ಸಭೆಗೆ ನಾಗರಿಕರು ನೀರಸ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ತಾಲೂಕಿನಲ್ಲಿ ಇರುವ ೩೨ ಇಲಾಖೆಗಳ ಪೈಕಿ ೪ ಇಲಾಖೆ ಸಂಬಂಧಿಸಿದಂತೆ ಕೇವಲ ೧೨ ಅರ್ಜಿಗಳನ್ನು ಮಾತ್ರ ನೊಂದವರು ನೀಡಿದ್ದು, ಈ ರೀತಿಯ ಸಭೆಯ ಅಗತ್ಯತೆ ಇದೆಯಾ ಎಂದು ಪ್ರಶ್ನಿಸುವಂತಹ ಸನ್ನಿವೇಶದ ಜತೆಗೆ ಆಡಳಿತ ವ್ಯವಸ್ಥೆಯನ್ನು ಅಣಕಿಸುವಂತಿದೆ.

ಪಟ್ಟಣದ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ವೈ.ಎಂ.ರೇಣುಕುಮಾರ್ ಅಧ್ಯಕ್ಷತೆಯಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ತಹಸೀಲ್ದಾರ್‌ ವೈ. ಎಂ. ರೇಣುಕುಮಾರ್‌ ಮಾತನಾಡಿ, ಜನಸ್ಪಂದನಾ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ೬ ಅರ್ಜಿಗಳು, ಪುರಸಭೆಗೆ ಸಂಬಂಧಿಸಿದಂತೆ ೪ ಅರ್ಜಿಗಳು, ಕೃಷಿ ಇಲಾಖೆ ಸಂಬಂಧಿಸಿದಂತೆ ೧ ಮತ್ತು ಹೇಮಾವತಿ ನೀರಾವರಿ ಇಲಾಖೆ ಸಂಬಂಧಿಸಿದಂತೆ ೧ ಅರ್ಜಿ ಸಲ್ಲಿಕೆಯಾಗಿದ್ದು, ಒಟ್ಟು ೧೨ ಅರ್ಜಿಗಳು ಸಲ್ಲಿಕೆಯಾಗಿದೆ. ಇಲಾಖಾವಾರು ಲಭ್ಯವಾದ ಅರ್ಜಿಗಳ ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ವರದಿ ನೀಡುವ ಜತೆಗೆ ಅಧಿಕಾರಿಗಳು ಜನರಿಂದ ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲನೆ ನಡೆಸಿ, ನಿಯಮದಂತೆ ಇತ್ಯರ್ಥ ಪಡಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮತ ಹಾಕಲು ತವರಿಗೆ ವಲಸೆ ಕಾರ್ಮಿಕರು
ವೈದ್ಯನಾಥಪುರ ನಾಲಾ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ