ಜನರ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ

KannadaprabhaNewsNetwork |  
Published : Mar 24, 2025, 12:31 AM IST

ಸಾರಾಂಶ

ರಾಜ್ಯದಲ್ಲಿ ಅಧಿಕಾರ ನಡೆಸಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ ಜನರ ಜಲ್ವಂತ ಸಮಸ್ಯೆಗಳಿಗೆ ಪರಿಹಾರ ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ಜನರು ತಮ್ಮ ಕಷ್ಟಗಳಿಗೆ ತಾವೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನವಕರ್ನಾಟಕ ನಿರ್ಮಾಣ ಆಂದೋಲನದ ಹೆಸರಿನಲ್ಲಿ ಜನರ ನಡುವೆ ಜನತಾ ಪ್ರಣಾಳಿಕೆ ಚರ್ಚೆ ನಡೆಸುವ ನಿಟ್ಟಿನಲ್ಲಿ ಮಾರ್ಚ್ 27 ರಂದು ಕನ್ನಡ ಭವನದಲ್ಲಿ ಸಮಾನ ಮನಸ್ಕರ ಸಭೆಯೊಂದನ್ನು ಆಯೋಜಿಸಿರುವುದಾಗಿ ಭರತಕುಮಾರ್ ಬೆಲ್ಲದಮಡು ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ, ತುಮಕೂರು

ರಾಜ್ಯದಲ್ಲಿ ಅಧಿಕಾರ ನಡೆಸಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ ಜನರ ಜಲ್ವಂತ ಸಮಸ್ಯೆಗಳಿಗೆ ಪರಿಹಾರ ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ಜನರು ತಮ್ಮ ಕಷ್ಟಗಳಿಗೆ ತಾವೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನವಕರ್ನಾಟಕ ನಿರ್ಮಾಣ ಆಂದೋಲನದ ಹೆಸರಿನಲ್ಲಿ ಜನರ ನಡುವೆ ಜನತಾ ಪ್ರಣಾಳಿಕೆ ಚರ್ಚೆ ನಡೆಸುವ ನಿಟ್ಟಿನಲ್ಲಿ ಮಾರ್ಚ್ 27 ರಂದು ಕನ್ನಡ ಭವನದಲ್ಲಿ ಸಮಾನ ಮನಸ್ಕರ ಸಭೆಯೊಂದನ್ನು ಆಯೋಜಿಸಿರುವುದಾಗಿ ಭರತಕುಮಾರ್ ಬೆಲ್ಲದಮಡು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಚುನಾವಣಾ ಪೂರ್ವದಲ್ಲಿ ಅಧಿಕಾರಕ್ಕೆ ಬರಲು ಪಕ್ಷಗಳು ನಾನಾ ರೀತಿಯ ಭರವಸೆಗಳನ್ನು ನೀಡಿ, ತದನಂತರ ಅತ್ತ ಕಡೆ ತಿರುಗಿಯೂ ನೋಡುವುದಿಲ್ಲ. 2023ರ ಚುನಾವಣೆಯಲ್ಲಿ ಒಳಮೀಸಲಾತಿ ಜಾರಿ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವ ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷ ಇದುವರೆಗೂ ಆ ಬಗ್ಗೆ ಕ್ರಮ ವಹಿಸಿಲ್ಲ. ಜೆಡಿಎಸ್, ಬಿಜೆಪಿಯೂ ಇದಕ್ಕೆ ಹೊರತಾಗಿಲ್ಲ. ಹಾಗಾಗಿ ಈ ಎಲ್ಲಾ ಪಕ್ಷಗಳನ್ನು ತಿರಸ್ಕರಿಸಿ, ಪರ್ಯಾಯ ರಾಜಕಾರಣವನ್ನು ಹಟ್ಟುಹಾಕುವ ನಿಟ್ಟಿನಲ್ಲಿ ಮಾರ್ಚ 27ರ ಸಭೆ ಮಹತ್ವದಾಗಿದೆ ಎಂದರು.

ಕನ್ನಡ ನಾಡಿನಲ್ಲಿಯೇ ಕನ್ನಡಿಗರು ಒಂದೆಡೆ ಮರಾಠಿ,ಮತ್ತೊಂದು ಕಡೆ ತಮಿಳು, ತೆಲುಗು ಭಾಷಿಕರಿಗೆ ಹೆದರಿ ಜೀವನ ನಡೆಸಬೇಕಾದ ಪರಿಸ್ಥಿತಿಯನ್ನು ನಮ್ಮ ರಾಜಕಾರಣಿಗಳು ಸೃಷ್ಟಿಸಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಎಲ್ಲಾ ರಾಜಕೀಯ ಪಕ್ಷಗಳು ಉತ್ತರ ಭಾರತೀಯರ ಕೈಗೊಂಬೆಯಂತೆ ವರ್ತಿಸುತ್ತಿರುವುದು ಎಂದರು. ಹಾಗಾಗಿ ನಮ್ಮದೇ ನೆಲದ ಪ್ರಭಲ ಪರ್ಯಾಯ ರಾಜಕೀಯ ಪಕ್ಷವೊಂದರ ಅನಿವಾರ್ಯ ಇದ್ದು, ಇದಕ್ಕಾಗಿ ನವ ಕರ್ನಾಟಕ ನಿರ್ಮಾಣ ಆಂದೋಲನಕ್ಕೆ ರಾಜಕೀಯ ಪಕ್ಷದ ಸ್ವರೂಪ ನೀಡಲು ಮುಂದಾಗಿರುವುದಾಗಿ ಭರತಕುಮಾರ್ ಬೆಲ್ಲದಮಡು ತಿಳಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ್ ಆರಾಧ್ಯ ಮಾತನಾಡಿ, ಚುನಾವಣೆ ಪೂರ್ವದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗಳನ್ನು ರದ್ದು ಮಾಡುವ ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷ ಎರಡು ವರ್ಷ ಕಳೆದರೂ ಮೈಮರೆತಿದೆ. ಇದರ ಪರಿಣಾಮ ಭೂಮಿಯ ಬೆಲೆ ಎಕರೆಗೆ 25ಲಕ್ಷ ತಲುಪಿದೆ. ಸುಮಾರು 10 ಲಕ್ಷಕ್ಕೂ ಹೆಚ್ಚು ರೈತರು ಭೂಮಿ ಕಳೆದುಕೊಂಡಿದ್ದಾರೆ ಎಂದರು.

ಅಲ್ಲದೆ ಕೈಗಾರಿಕೆ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು ಕೊಂಡು ಕಾರ್ಪೋರೇಟ್ ಕುಳಗಳಿಗೆ ನೀಡಲು ಮುಂದಾಗಿದೆ. ಹಾಗಾಗಿ ರೈತ ಪರವಾದ ಸರಕಾರ ಬರೆಬೇಕೆಂದರೆ ಪರ್ಯಾಯ ರಾಜಕಾರಣ ಅನಿವಾರ್ಯ. ಇದಕ್ಕಾಗಿ ಮಾರ್ಚ್ 27ರ ನವ ಕರ್ನಾಟಕ ನಿರ್ಮಾಣ ಆಂದೋಲನ ಮುನ್ನುಡಿ ಬರೆಯಲಿದೆ ಎಂದರು.

ದಲಿತ ಮುಖಂಡ ಪಿ.ಎನ್.ರಾಮಯ್ಯ ಮಾತನಾಡಿ ತುಮಕೂರಿನ ಟೌನ್‌ಹಾಲ್ ವೃತ್ತದಿಂದ ಕನ್ನಡ ಭವನದ ವರೆಗೆ ಬೃಹತ್ ಮೆರವಣಿಗೆ ನಡೆಸಿ,ಪರ್ಯಾಯ ರಾಜಕಾರಣಕ್ಕೆ ಮುನ್ನುಡಿ ಬರೆಯಲಿದ್ದೇವೆ ಎಂದರು.

ಕನ್ನಡ ಪರ ಸಂಘಟನೆಯ ಅರುಣಕುಮಾರ್, ಭೂ ಹೋರಾಟ ಕೃಷ್ಣಮೂರ್ತಿ ಅವರು ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ತೋಂಟದಾರಾಧ್ಯ, ಮಲ್ಲಿಕಾರ್ಜುನಯ್ಯ, ಕಲ್ಪನ, ಹನುಮಂತರಾಯಪ್ಪ, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ