ಜೀತ ನಿರ್ಮೂಲನೆಗೆ ಜನತೆಯ ಸಹಕಾರ ಅಗತ್ಯ

KannadaprabhaNewsNetwork |  
Published : Feb 11, 2024, 01:47 AM IST
ಶಿರ್ಷಿಕೆ-೯ಕೆ.ಎಂ.ಎಲ್.ಅರ್.೧- ಮಾಲೂರು ಪಟ್ಟಣದ ತಾಲೂಕು ಕಚೇರಿಯ ತಹಶೀಲ್ದಾರ್ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವಕೀಲರ ಸಂಘ ತಾಲೂಕು ಕಚೇರಿ ತಾಲೂಕು ಆಡಳಿತ ತಾಲೂಕು ಪಂಚಾಯಿತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜೀತ ಪದ್ಧತಿ ನಿರ್ಮೂಲನ ದಿನಾಚರಣೆ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷ ಲತಾದೇವಿ.ಜಿ.ಎ ಉದ್ಘಾಟಿಸಿದರು. | Kannada Prabha

ಸಾರಾಂಶ

ಶ್ರೀಮಂತರು ಬಡವರ ಮಕ್ಕಳನ್ನು ಆರ್ಥಿಕವಾಗಿ ಒಂದು ಮೊತ್ತಕ್ಕೆ ಜೀತಕ್ಕೆ ಇಟ್ಟುಕೊಂಡು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದರು. ಪ್ರಸ್ತುತ ಸಮಾಜದಲ್ಲಿ ಕಾನೂನಿನ ಜಾಗೃತಿ ಹೆಚ್ಚಾದಂತೆ ಜೀತ ಪದ್ಧತಿ ಕಾಲಕ್ರಮೇಣ ಕಡಿಮೆಯಾಗುತ್ತಿದೆ

ಕನ್ನಡಪ್ರಭ ವಾರ್ತೆ ಮಾಲೂರು

ಸಮಾಜದಲ್ಲಿ ಜೀತ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಅಧಿಕಾರಿಗಳೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು. ಜೀತಪದ್ಧತಿ ನಿರ್ಮೂಲನೆಗೆ ಜನತೆ ಸಹಕರಿಸುವಂತೆ ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷೆ ಲತಾದೇವಿ.ಜಿ.ಎ ಹೇಳಿದರು

ಪಟ್ಟಣದ ತಾಲೂಕು ಕಚೇರಿಯ ತಹಸೀಲ್ದಾರ್ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವಕೀಲರ ಸಂಘ ತಾಲೂಕು ಕಚೇರಿ ತಾಲೂಕು ಆಡಳಿತ ತಾಲೂಕು ಪಂಚಾಯಿತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜೀತ ಪದ್ಧತಿ ನಿರ್ಮೂಲನ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜೀತ ಪದ್ಧತಿ ಪ್ರಕರಣ ಇಳಿಕೆ

ಒಂದು ಕಾಲದಲ್ಲಿ ಜೀತ ಪದ್ಧತಿ ಹೆಚ್ಚಾಗಿತ್ತು. ಒಬ್ಬ ಮನುಷ್ಯನ ದೈಹಿಕ ಶಕ್ತಿಯನ್ನು ದುರುಪಯೋಗಪಡಿಸಿಕೊಂಡು ದೊಡ್ಡವರು ಹಾಗೂ ಮಕ್ಕಳನ್ನು ಆರ್ಥಿಕವಾಗಿ ಒಂದು ಮೊತ್ತಕ್ಕೆ ಜೀತಕ್ಕೆ ಇಟ್ಟುಕೊಂಡು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದರು. ಪ್ರಸ್ತುತ ಸಮಾಜದಲ್ಲಿ ಕಾನೂನಿನ ಜಾಗೃತಿ ಹೆಚ್ಚಾದಂತೆ ಜೀತ ಪದ್ಧತಿ ಕಾಲಕ್ರಮೇಣ ಕಡಿಮೆಯಾಗುತ್ತಾ ಬಂದಿದೆ ಎಂದರು.

ಮಕ್ಕಳನ್ನು ದುಡಿಸುವುದು ಅಪರಾಧ

ಮಕ್ಕಳನ್ನು ಭಿಕ್ಷಾಟನೆಗೆ ತಳ್ಳುವುದು, ೧೪ ವರ್ಷದೊಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ದುಡಿಸಿ ಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಸಮಾಜದಲ್ಲಿ ಕಾನೂನು ಸದ್ಬಳಕೆ ಆಗಬೇಕು ಹೊರತು ದುರ್ಬಳಕೆಯಾಗಬಾರದು, ಜೀತ ಪದ್ಧತಿ ಕಡಿಮೆ ಭಿಕ್ಷಾಟನೆ ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧ. ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಅರಿವು ಪಡೆದು ಸುಸಂಸ್ಕೃತರಾಗಿ ಸಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ಗ್ರೇಡ್ ೨ ತಹಸಿಲ್ದಾರ್ ಹರಿಪ್ರಸಾದ್, ಕಾರ್ಮಿಕ ನಿರೀಕ್ಷಕ ಎಚ್.ಆರ್. ರೇಣುಕಾ ಪ್ರಸನ್ನ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಹರೀಶ್.ಆರ್.ಸಿ, ಸಮನ್ವಯ ಅಧಿಕಾರಿ ನಂಜುಂಡಗೌಡ, ಇನ್ನಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!