ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ಗ್ರಾಮೀಣ ಭಾಗದಲ್ಲೇ ಹೆಚ್ಚು
ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಬಾಲ್ಯವಿವಾಹಗಳು ನಡೆಯುತ್ತಿದ್ದು, ಯಾವುದೇ ಹೆಣ್ಣು ಮಗು ೧೫ ದಿನಗಳಿಂದ ಶಾಲೆಗೆ ಗೈರಾದರೆ ಅವರ ಬಗ್ಗೆ ಮಾಹಿತಿ ಕಲೆ ಹಾಕಿದರೆ ಸತ್ಯಾಂಶ ಬಯಳಿಗೆ ಬರುವುದು ಎಂದು ಸಲಹೆ ನೀಡಿದರು.ಹಲವು ಕಠಿಣ ಕಾನೂನು ಜಾರಿಯಲ್ಲಿದ್ದರೂ ಸಹ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯ ದಬ್ಬಾಳಿಕೆ ನಡೆಯುತ್ತಿದೆ,ಗ್ರಾಮೀಣ ಭಾಗದಲ್ಲಿ ಕಾನೂನು ಅರಿವು ಬಗ್ಗೆ ಮಾಹಿತಿ ಕೊರತೆಯಿಂದ ಅಪರಾಧಗಳು ನಡೆಯುತ್ತಿದೆ, ಆದ್ದರಿಂದ ಗ್ರಾಮಗಳಲ್ಲಿ ಶಿಬಿರಗಳ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು ಎಂದರು.
ವಕೀಲರ ಸಂಘದ ಉಪಾಧ್ಯಕ್ಷ ಆನಂದ್ ಮಾತನಾಡಿ ಇಂದಿನ ಆಧುನಿಕ ಜಗದಲ್ಲಿ ಅದರಲ್ಲಿಯೂ ಹೆಣ್ಣಿನ ಮೇಲೆ ಯಾವುದೇ ರೀತಿ ಲೈಂಗಿಕ ಕಿರುಕುಳ ದೌರ್ಜನ್ಯ ನಡೆದರೆ ಶಿಕ್ಷಿಸುವ ಕಠಿಣ ಕಾನೂನಿದ್ದರೂ ಕೆಲವರು ದೂರು ನೀಡಲು ಹಿಂಜರಿಯುತ್ತಾರೆ. ಇದರಿಂದ ಮತ್ತಷ್ಟು ಅಪರಾಧಗಳನ್ನು ನಡೆಯಲು ಉತ್ತೇಜನ ನೀಡಿದಂತಾಗುತ್ತದೆ ಎಂದು ಹೇಳಿದರು.
ಈ ವೇಳೆ ವಕೀಲರ ಸಂಘದ ಮಾಜಿ ಅಧ್ಯಕ್ಷ ರಮೇಶ್, ಸಂತೋಷ್, ವಕೀಲರಾದ ಗೀತಾ, ಸವಿತ, ಪುರುಶೋತ್ತಮ್,ಶಿಕ್ಷಣ ಇಲಾಖೆ ಸಂಯೋಜಕ ವಾಜಿದ್, ಶಿಕ್ಷಕರಾದ ಅಶೋಕ್, ಶ್ರೀನಾಥ್, ಸೀತಾರಾಮ್, ರುದ್ರೇಗೌಡ, ಶಾಂತಕುಮಾರಿ, ಸೌಮ್ಯ ಇದ್ದರು.