ಕನ್ನಡಪ್ರಭ ವಾರ್ತೆ ಭದ್ರಾವತಿ
ಅವರು ಮಂಗಳವಾರ ನಗರಸಭೆ ಸಭಾಂಗಣದಲ್ಲಿ ಆಡಳಿತ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧ್ಯಕ್ಷತೆಯಲ್ಲಿ ನಡೆದ ನಗರಸಭೆ ಸಾಮಾನ್ಯಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಎಲ್ಲೆಡೆ ಡೆಂಘೀ ಕಾಯಿಲೆ ಹೆಚ್ಚಾಗುತ್ತಿದ್ದು, ಸಾವು ನೋವುಗಳು ಸಂಭವಿಸುತ್ತಿವೆ. ಕಾಯಿಲೆ ಹರಡದಂತೆ ನಗರಸಭೆ ವ್ಯಾಪ್ತಿಯಲ್ಲಿ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಬೇಕು. ಈ ಕಾರ್ಯ ಮೊದಲು ಕೈಗೊಳ್ಳಿ ಜನರು ಪ್ರಾಣ ಕಳೆದುಕೊಂಡ ನಂತರ ಅಭಿವೃದ್ಧಿ ಕಾರ್ಯ ಕೈಗೊಂಡು ಏನು ಪ್ರಯೋಜನ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಪ್ರಶ್ನಿಸಿದರು.ಇದಕ್ಕೂ ಮೊದಲು ನಗರಸಭೆ ಪರಿಸರ ಅಭಿಯಂತರ ಪ್ರಭಾಕರ್ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸದಸ್ಯರು, ಎಲ್ಲಾ ವಾರ್ಡ್ಗಳಲ್ಲಿ ಸೊಳ್ಳೆ ಹಾವಳಿ ಹೆಚ್ಚಾ ಗಿದೆ. ಇದರಿಂದಾಗಿ ನಿವಾಸಿಗಳು ತೊಂದರೆಗೆ ಒಳಗಾಗಿದ್ದಾರೆ. ಇದೀಗ ಡೆಂಗ್ಯೂ ಕಾಯಿಲೆ ಎಲ್ಲೆಡೆ ವ್ಯಾಪಾಕವಾಗಿ ಹರಡುತ್ತಿದ್ದು, ಭಯದಿಂದ ಬುಕುವಂತಾಗಿದೆ. ನಗರಸಭೆ ಅಧಿಕಾರಿಗಳು ನಿರ್ಲಕ್ಷ್ಯತನದಿಂದ ವರ್ತಿಸುತ್ತಿದ್ದಾರೆ. ವಾರ್ಡ್ಗಳಲ್ಲಿ ಸರಿಯಾಗಿ ಸೊಳ್ಳೆ ನಾಶಕ ಔಷಧಿ ಸಿಂಪಡಿಸುತ್ತಿಲ್ಲ. ಈ ಹಿನ್ನಲೆಯಲ್ಲಿ ಔಷಧಿ ಗುಣಮಟ್ಟ ಪರೀಕ್ಷಿಸುವ ಜೊತೆಗೆ ಎಲ್ಲಾ ವಾರ್ಡ್ಗಳಲ್ಲೂ ಸಮರ್ಪಕವಾಗಿ ಔಷಧಿ ಸಿಂಪಡಿಸಬೇಕೆಂದು ಆಗ್ರಹಿಸಿದರು.
ಪ್ರಸ್ತುತ ಪ್ರತಿ ವಾರ್ಡ್ಗೆ ನೀಡುತ್ತಿರುವ ೨ ಲಕ್ಷ ರು. ಅನುದಾನ ಕಡಿಮೆಯಾಗಿದ್ದು, ಹೆಚ್ಚಿನ ಅನುದಾನ ಅಗತ್ಯವಿದೆ. ಅಲ್ಲದೆ ಎಲ್ಲಾ ವಾರ್ಡ್ಗಳಿಗೂ ಸಮಾನವಾಗಿ ಅನುದಾನ ಬಿಡುಗಡೆಗೊಳಿಸಬೇಕೆಂದು ಸದಸ್ಯರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಬಿ.ಕೆ ಸಂಗಮೇಶ್ವರ್ ವಾರ್ಡ್ಗಳ ಸಮಸ್ಯೆಗಳನ್ನು ಪರಿಶೀಲನೆ ನಡೆಸಿ ಅನುದಾನ ಬಿಡುಗಡೆಗೊಳಿಸಲಾಗುವುದು. ಎಲ್ಲಾ ವಾರ್ಡ್ಗಳಿಗೂ ಸಮಾನವಾಗಿ ಅನುದಾನ ಬಿಡುಗಡೆ ಮಾಡುವುದು ಅಸಾಧ್ಯ ಎಂದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಉಪ ವಿಭಾಗಾಧಿಕಾರಿ ಸತ್ಯನಾರಾಯಣ್, ತಹಸೀಲ್ದಾರ್ ಕೆ.ಆರ್ ನಾಗರಾಜು, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಪೌರಾಯುಕ್ತ ಪ್ರಕಾಶ್ ಎಂ ಚನ್ನಪ್ಪನವರ್, ಸದಸ್ಯರು, ಇನ್ನಿತರ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.