ಕನ್ನಡಪ್ರಭ ವಾರ್ತೆ ಸುರಪುರ
ಬಾಕ್ಸ:
ರಸ್ತೆ ಬಂದ್:ಕೆಂಭಾವಿಯಿಂದ ಯಡಿಯಾಪೂರ ಗ್ರಾಮಕ್ಕೆ ತೆರಳುವ ರಸ್ತೆಯ ಎರಡೂ ಬದಿಗಳಲ್ಲಿ ಹಾಕಿದ ಎಲ್ಲ ವಿದ್ಯುತ್ ಕಂಬ ಹಾಗೂ ಭಾರಿ ಗಾತ್ರದ ಮರಗಳು ಭೂಮಿಗೆ ಅಪ್ಪಳಿಸಿದ್ದರಿಂದ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಜಮೀನುಗಳಲ್ಲಿರುವ ರೈತರ ಗುಡಿಸಲುಗಳು, ವಿದ್ಯುತ್ ಟ್ರಾನ್ಸ್ಫಾರ್ಮಗಳು, ಕೋಳಿ ಗುಡಿಸಲು, ದನಕರು ಕಟ್ಟುವ ಗುಡಿಸಲು ಸೇರಿದಂತೆ ರೈತಾಪಿ ವರ್ಗದ ಹಲವು ಮನೆಗಳು ಬಿರುಗಾಳಿಗೆ ಧರೆಗುರುಳಿವೆ.
ಯಡಿಯಾಪುರ ರಸ್ತೆಯಲ್ಲಿರುವ ಇನ್ನೂ ಕಾರ್ಯಾರಂಭ ಮಾಡದ ಸಣ್ಣ ಕೈಗಾರಿಕೆಯೊಂದು ಗಾಳಿಯ ರಭಸಕ್ಕೆ ಸಂಪೂರ್ಣ ನೆಲಕಚ್ಚಿ ಅದರ ಮೇಲಿದ್ದ ಪತ್ರಾಸ್ಗಳು ಸುಮಾರು ಮೂರು ಕಿಮೀ ನಷ್ಟು ಹಾರಿ ಹೋಗಿ ಯಂತ್ರಗಳು ಚಲ್ಲಾಪಿಲ್ಲಿಯಾಗಿ ಬಿದ್ದ ದೃಶ್ಯ ಕಂಡು ಬಂದಿತು.* ಆಯಿಲ್ ಮಿಲ್ಗೆ ಹಾನಿ:
ರಾಚಪ್ಪ ಕುಂಬಾರ ಎಂಬುವರಿಗೆ ಸೇರಿದ ಮಿನಿ ರೈಸ್ ಮಿಲ್, ಮಿನಿ ಆಯಿಲ್ ಮಿಲ್ ಸೇರಿದಂತೆ ಹಲವು ಸಣ್ಣ ಪ್ರಮಾಣದ ಕೈಗಾರಿಕೆಗಳನ್ನು ಸ್ಥಾಪನೆ ಮಾಡಿ ಇನ್ನೆರಡು ದಿನಗಳಲ್ಲಿ ಕಾರ್ಯಾರಂಭ ಮಾಡಬೇಕಿದ್ದ ಈ ಕೈಗಾರಿಕೆ ಮಳೆ ಗಾಳಿಯ ಹೊಡೆತಕ್ಕೆ ಸಿಲುಕಿ ನಲುಗಿದ್ದು, ಸುಮಾರು 40 ಲಕ್ಷಕ್ಕೂ ಅಧಿಕ ರು. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಈ ಕೈಗಾರಿಕೆಯ ಪಕ್ಕದಲ್ಲಿರುವ ಬಸವರಾಜ ಬೈಚಬಾಳ ಎಂಬುವರಿಗೆ ಸೇರಿದ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ನಿಂಬೆ ಮತ್ತು ಪೇರಲ ಮರಗಳು ಸಂಪೂರ್ಣ ನೆಲಕಚ್ಚಿದ್ದು ಇದರಿಂದ ರೈತ ಕಂಗಾಲಾಗಿದ್ದಾನೆ.ಮಾಳಹಳ್ಳಿ ಗ್ರಾಮದ ಶಿವನಗೌಡ ಪಾಟೀಲ್ ಎಂಬುವರ ಜಮೀನಿನಲ್ಲಿ ಬೆಳೆದಿದ್ದ ಸಾಗವಾನಿ, ಪೇರಲ, ಹೆಬಗಬೇವಿನ ಮರಗಳು ಗಾಳಿಯ ರಭಸಕ್ಕೆ ಸಿಲುಕಿದ್ದು ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.* ಬೇಕಿದೆ ಸರ್ಕಾರದ ನೆರವು :ಮಳೆಯ ಪ್ರಮಾಣ 46.06 ಮಿಮೀ ನಷ್ಟು ಮಳೆ ಸುರಿದಿದ್ದು, ಒಟ್ಟಾರೆ ಭಾನುವಾರ ಸುರಿದ ಭಾರಿ ಬಿರುಗಾಳಿ ಸಹಿತ ಮಳೆ ವಲಯದಲ್ಲಿ ಹಲವು ಆವಾಂತರವನ್ನೆ ಸೃಷ್ಟಿಸಿದ್ದು, ಸರ್ಕಾರ ಯಾವ ರೀತಿ ರೈತರ ನೆರವಿಗೆ ಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.