ಸರ್ಕಾರಿ ಕಾರ್ಯಕ್ರದಲ್ಲಿ ಜನಪ್ರತಿನಿಧಿಗಳು ಪಾಲ್ಗೊಳ್ಳಲು ಬಿಡಲ್ಲ: ರೈತ ಮುಖಂಡರ ಎಚ್ಚರಿಕೆ

KannadaprabhaNewsNetwork |  
Published : May 24, 2025, 12:50 AM IST
ಫೋಟೋ23-ಬಿವೈಡಿ-1  | Kannada Prabha

ಸಾರಾಂಶ

ಬ್ಯಾಡಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹೈದ್ರಾಬಾದ್ ಖಾಸಗಿ ಬೀಜ ಕಂಪನಿ ಮೆಣಸಿನಕಾಯಿ ಹಾಗೂ ಕ್ಯಾಬೀಜ್ ಕಳಪೆ ಬೀಜಗಳನ್ನು ಮಾರಾಟ ಮಾಡುವ ಮೂಲಕ ರೈತರಿಗೆ ಮೋಸವೆಸಗಿದೆ ಎಂದು ರೈತ ಮುಖಂಡರು ಆರೋಪಿಸಿದರು.

ಬ್ಯಾಡಗಿ: ಕಳಪೆ ಮೆಣಸಿನಕಾಯಿ ಬೀಜ ಪೂರೈಸಿದ ಖಾಸಗಿ ಕಂಪನಿಯಿಂದ ಭಾನುವಾರ ಸಂಜೆಯೊಳಗೆ ರೈತರಿಗೆ ಪರಿಹಾರ ಘೋಷಣೆ ಮಾಡದಿದ್ದಲ್ಲಿ ಸೋಮವಾರದಿಂದ(ಮೇ 26) ಯಾವುದೇ ಸರ್ಕಾರಿ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಪಾಲ್ಗೊಳ್ಳಲು ಬಿಡುವುದಿಲ್ಲವೆಂದು ರಾಜ್ಯ ರೈತಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಎಚ್ಚರಿಸಿದರು.ತಾಲೂಕಿನ ಹಿರೇಹಳ್ಳಿ, ಬಡಮಲ್ಲಿ ಗ್ರಾಮಗಳ ಕಳಪೆ ಬಿತ್ತನೆ ಬೀಜ ಪೂರೈಸಿದ ಕಂಪನಿಯಿಂದ ಪರಿಹಾರ ಕೊಡಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ಬುಧವಾರ ಶಾಸಕರ ಕಾರ್ಯಾಲಯ ಎದುರು ಮೂರನೇ ದಿನದ ಪ್ರತಿಭಟನೆಯಲ್ಲಿ ಮಾತನಾಡಿದರು.ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹೈದ್ರಾಬಾದ್ ಖಾಸಗಿ ಬೀಜ ಕಂಪನಿ ಮೆಣಸಿನಕಾಯಿ ಹಾಗೂ ಕ್ಯಾಬೀಜ್ ಕಳಪೆ ಬೀಜಗಳನ್ನು ಮಾರಾಟ ಮಾಡುವ ಮೂಲಕ ರೈತರಿಗೆ ಮೋಸವೆಸಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು, ತೋಟಗಾರಿಕೆ ಉಪನಿರ್ದೇಶಕರು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಬಳಿಕ ತಹಸೀಲ್ದಾರ್ ಕಾರ್ಯಾಲಯ ಎದುರು ಹಾಗೂ ಕಳಪೆ ಬಿತ್ತನೆ ಬೀಜ ಮಾರಾಟ ಮಾಡಿದ ರೈತರ ಅಂಗಡಿಗೆ ಬೀಜ ಹಾಕಿ ಪ್ರತಿಭಟನೆ ನಡೆಸಿದ್ದೇವೆ. ಆದರೆ ನಷ್ಟಗೊಂಡ ರೈತರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ ಮಾರಾಟ ಅಂಗಡಿಯವರು ಹಾಗೂ ಕಂಪನಿ ವ್ಯವಸ್ಥಾಪಕರು ರೈತರ ವಿರುದ್ಧ ತಿರುಗಿಬಿದ್ದಿದ್ದು, ಹೋರಾಟ ತೀವ್ರವಾಗಿ ನಡೆಯುತ್ತಿದ್ದರೂ ಅಂಜಿಕೆಯಿಲ್ಲದೆ ಕಳಪೆ ಬೀಜಗಳನ್ನು ಮಾರಲಾಗುತ್ತಿದೆ ಎಂದರು.

ತೋಟಗಾರಿಕೆ ಅಧಿಕಾರಿಗಳು ಪ್ರಕರಣ ದಾಖಲಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದ್ದಾರೆ. ಇದರಿಂದ ರೈತರಿಗೆ ನ್ಯಾಯ ಸಿಗಲು ಸಾಧ್ಯನಾ? ಈ ಕುರಿತು ಸ್ಥಳೀಯ ಶಾಸಕರ ಗಮನಕ್ಕೆ ತಂದರೂ ಇತ್ಯರ್ಥವಾಗಿಲ್ಲ. ಹೀಗಾಗಿ ತಾಲೂಕಿನ ಶಾಸಕರ ಕಾರ್ಯಾಲಯ ಎದುರು ಮೂರು ದಿನಗಳಿಂದ ಪ್ರತಿಭಟನೆ ಕುಳಿತಿದ್ದೇವೆ. ಸೌಜನ್ಯಕ್ಕಾದರೂ ತಾಲೂಕಾಡಳಿತ, ಜಿಲ್ಲಾಡಳಿತ, ಜನಪ್ರತಿನಿಧಿಗಳು ಸೇರಿದಂತೆ ಸಂಬಂಧಿಸಿದವರು ಯಾರೂ ರೈತರತ್ತ ಸುಳಿದಿಲ್ಲ ಎಂದರು.ರೈತಸಂಘದ ತಾಲೂಕು ಅಧ್ಯಕ್ಷ ರುದ್ರಗೌಡ್ರ ಕಾಡನಗೌಡ್ರ ಮಾತನಾಡಿ, ಜಿಲ್ಲಾದ್ಯಂತ ಕಳಪೆ ಖಾಸಗಿ ಕಂಪನಿಯವರ ಕಳಪೆ ಬೀಜ ಮಾರಾಟದ ದಂಧೆ ಗೊತ್ತಿದ್ದರೂ ಮೌನವಾಗಿರುವುದು ಅಧಿಕಾರಿಗಳೇ ನೇರವಾಗಿ ಶಾಮೀಲಾಗಿರುವ ಸಂಶಯ ಕಾಡುತ್ತಿದೆ. ಎರಡು ವರ್ಷಗಳಿಂದ ಶೇ. 90ರಷ್ಟು ಬೀಜ ಮಾರಾಟಗಾರರು ಪರವಾನಗಿ ಪಡೆಯದೆ ಮಾರಾಟ ನಡೆಸಿದ್ದಾರೆ. ತೋಟಗಾರಿಕೆ ಅಧಿಕಾರಿಗಳು ಘಟನೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದರು.

ರೈತಸಂಘದ ಗಂಗಣ್ಣ ಎಲಿ, ಚಿಕ್ಕಪ್ಪ ಛತ್ರದ, ಜಾನ್ ಪುನೀತ್, ಫಕೀರೇಶ ಅಜಗೊಂಡ್ರ, ಮೌನೇಶ ಕಮ್ಮಾರ, ಪ್ರಕಾಶ ಕೋಡಿಹಳ್ಳಿ, ಕೆ.ವಿ. ದೊಡ್ಡಗೌಡ್ರ, ವೀರೇಶ ದೇಸಾಯಿ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!