ಮಠಗಳಿಂದ ಬದುಕು ಕಟ್ಟಿಕೊಡುವ ಜನಪರ ಕೆಲಸ: ಕೋಟ ಶ್ರೀನಿವಾಸ ಪೂಜಾರಿ

KannadaprabhaNewsNetwork |  
Published : Feb 28, 2026, 01:15 AM IST
 | Kannada Prabha

ಸಾರಾಂಶ

ಚಿಕ್ಕಮಗಳೂರುಸಮಸಮಾಜವನ್ನು ನಿರ್ಮಾಣ ಮಾಡಬೇಕು ಎಂಬ ಉದ್ದೇಶವನ್ನಿಟ್ಟುಕೊಂಡು ಅದರಲ್ಲಿ ಯಶಸ್ವಿಯಾದವರು ಬಸವಣ್ಣನವರು. ಇಂದು ಮಠಗಳು ಜನ ಸಾಮಾನ್ಯರ ಬದುಕು ಕಟ್ಟಿಕೊಡುವ ಮೂಲಕ ಜನಪರ ಕೆಲಸ ಮಾಡುತ್ತಿವೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ನಗರದ ಹೊರವಲಯದ ಶ್ರೀ ಬಸವ ತತ್ವ ಪೀಠದ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಸಮಸಮಾಜವನ್ನು ನಿರ್ಮಾಣ ಮಾಡಬೇಕು ಎಂಬ ಉದ್ದೇಶವನ್ನಿಟ್ಟುಕೊಂಡು ಅದರಲ್ಲಿ ಯಶಸ್ವಿಯಾದವರು ಬಸವಣ್ಣನವರು. ಇಂದು ಮಠಗಳು ಜನ ಸಾಮಾನ್ಯರ ಬದುಕು ಕಟ್ಟಿಕೊಡುವ ಮೂಲಕ ಜನಪರ ಕೆಲಸ ಮಾಡುತ್ತಿವೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ನಗರದ ಹೊರವಲಯದ ಶ್ರೀ ಬಸವ ತತ್ವ ಪೀಠದ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸಮಾಜದಲ್ಲಿ ಅಲ್ಲಲ್ಲಿ ಜಾತಿ ಜಾತಿ ಹೆಸರಲ್ಲಿ ಗೊಂದಲ ಸೃಷ್ಠಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಈ ಗೊಂದಲಕ್ಕೂ ಮುನ್ನ ಬಸವಣ್ಣನವರ ಸಮಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.

ಹಿಂದೆ ನಮ್ಮ ದೇಶದಲ್ಲಿ ಅವಿದ್ಯಾವಂತರ ಸಂಖ್ಯೆ ಹೆಚ್ಚಿದ್ದಾಗ ಅಪರಾಧಗಳ ಸಂಖ್ಯೆ ಕಡಿಮೆ ಇತ್ತು. ಆದರೆ ದೇಶದಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಾದಂತೆಲ್ಲಾ ಅಪರಾಧಗಳ ಸಂಖ್ಯೆಯೂ ಹೆಚ್ಚಾಗಿದೆ. ಈ ಬಗ್ಗೆ ಪ್ರತಿ ಕುಟುಂಬ ಚಿಂತನೆ ನಡೆಸ ಬೇಕಾಗಿದೆ. ಇದನ್ನೆಲ್ಲಾ ನೋಡಿದಾಗ ನಾವು ಇಂದು ವಿದ್ಯಾವಂತರಾಗುತ್ತಿದ್ದೇಯೇ ಹೊರತು ಸುಸಂಸ್ಕೃತರಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಸಾನಿಧ್ಯವನ್ನು ಬಸವತತ್ವಪೀಠದ ಶ್ರೀ ಡಾ. ಬಸವಮರುಳಸಿದ್ದ ಸ್ವಾಮೀಜಿ, ಶಾಸಕ ಎಚ್.ಡಿ ತಮ್ಮಯ್ಯ, ಪ್ರಮುಖರಾರ ಮಹಡಿಮನೆ ಸತೀಶ್‌, ಎಂ.ಸಿ.ಶಿವಾನಂದ ಸ್ವಾಮಿ, ಎಚ್.ಸಿ.ಕಲ್ಮರುಡಪ್ಪ, ಬಿಜೆಪಿ ಜಿಲ್ಲಾ ಆಧ್ಯಕ್ಷ ದೇವರಾಜ್ ಶೆಟ್ಟಿ ಮತ್ತಿತರರಿದ್ದರು.ಜಾನಪದ ಕಲಾತಂಡ ವಿಜೃಂಭಣೆಯ ಮೆರವಣಿಗೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುಬಸವತತ್ವ ಪೀಠದಲ್ಲಿ ಶುಕ್ರವಾರದಿಂದ ಎರಡು ದಿನಗಳು ಆರಂಭವಾದ ಚಂದ್ರಶೇಖರ ಮಹಾಸ್ವಾಮಿಗಳ 171ನೇ ಜಯಂತಿ ಹಾಗೂ 30 ಸಂಸ್ಮರಣೆ ಮತ್ತು ಬಸವತತ್ವ ಸಮಾವೇಶ ಮತ್ತು ಪೀಠದ ಸುವರ್ಣ ಮಹೋತ್ಸವದ ಅಂಗವಾಗಿ ಎಐಟಿ ವೃತ್ತ ದಲ್ಲಿ ವಿವಿಧ ಜಾನಪದ ಕಲಾತಂಡಗಳಾದ ವೀರಗಾಸೆ, ನಂದಿಕೋಲು ಕುಣಿತ, ಸ್ಥಳೀಯ ವಾದ್ಯಗಳು ಭಾಗವಹಿಸಿ ಮೆರವಣಿಗೆ ನಡೆಸಲಾಯಿತು.

ಹೂವಿನ ಪಲ್ಲಕ್ಕಿಯಲ್ಲಿ ವಿಶ್ವಗುರು ಬಸವಣ್ಣನವರ ಕಂಚಿನ ಪುತ್ಥಳಿ, ಚಂದ್ರಶೇಖರ ಶ್ರೀಗಳ ಹಾಗೂ ಜಯಚಂದ್ರಶೇಖರ ಭಾವಚಿತ್ರದೊಂದಿಗೆ ಆರಂಭಗೊಂಡ ಮೆರವಣಿಗೆಗೆ ಬಸವತತ್ವ ಪೀಠದ ಡಾ. ಬಸವಮರುಳಸಿದ್ಧ ಸ್ವಾಮೀಜಿ ಚಾಲನೆ ನೀಡಿದರು.ಮೆರವಣಿಗೆಯಲ್ಲಿ ಭಜನಾ ಕಲಾ ತಂಡಗಳು ವಿಶೇಷ ಅನುಭೂತಿಯನ್ನು ಭಕ್ತರಿಗೆ ನೀಡಿತು. ಭಕ್ತರೂ ಸಹ ತುಂಬಾ ಉತ್ಸಾಹದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಸದ್ಭಕ್ತರು ಬಸವಣ್ಣನವರ ವಸ್ತುಗಳನ್ನು ಹೆಗಲ ಮೇಲೆ ಹಾಕಿಕೊಂಡು ವಾದ್ಯಗಳ ಲಯಕ್ಕೆ ತಕ್ಕಂತೆ ನೃತ್ಯ ಮಾಡುವ ಮೂಲಕ ಧಾರ್ಮಿಕತೆ ಆಚರಣೆಗೆ ಮೆರಗು ನೀಡುವಂತೆ ಮೆರವಣಿಗೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಸಂಜೆ ಸಾಮೂಹಿಕ ಗಾಯನ ಮತ್ತು ಬಸವತತ್ವ ಸಮಾವೇಶ ಜರುಗಿತು.

ಶ್ರೀಮಠದ ಆವರಣದಲ್ಲಿ ಶಿವಮೊಗ್ಗದ ಆದರ್ಶ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಿಂದ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.ಮೆರವಣಿಗೆಯಲ್ಲಿ ಕರ್ನಾಟಕ ರಫ್ತು ಕೃಷಿ ಉತ್ಪನ್ನ ಸಂರಕ್ಷಣೆ ನಿಗಮ ಮಂಡಳಿ ಅಧ್ಯಕ್ಷ ಬಿ.ಎಚ್ ಹರೀಶ್, ಬಸವತತ್ವ ಸ್ವಾಗತ ಸಮಿತಿಯ ಅಧ್ಯಕ್ಷರಾದ ಮಹಡಿಮನೆ ಸತೀಶ್, ಕಾರ್ಯದರ್ಶಿ ಎಂ.ವಿ ಷಡಕ್ಷರಿ, ಖಜಾಂಚಿ ಸದಾಶಿವಪ್ಪ ಮತ್ತಿತರರು ಉಪಸ್ಥಿತರಿದ್ದರು.

...ಬಾಕ್ಸ್...

ಇಂದು ಇಷ್ಟಲಿಂಗ ಪೂಜೆ, ಸಮಾವೇಶ:ಶನಿವಾರ ಬಸವತತ್ವ ಪೀಠದ ಆವರಣದಲ್ಲಿ ಬೆಳಗ್ಗೆ ಸಾಮೂಹಿಕ ಇಷ್ಟಲಿಂಗ ಪೂಜೆ ನೆರವೇರಲಿದೆ. ಸಂಜೆ 5 ಕ್ಕೆ ಬಸವತತ್ವ ಸಮಾವೇಶ ಹಾಗೂ ಸಮೂಹ ಗಾಯನ, ಭಜನೆ ಜರುಗಲಿವೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜಕೀಯ ಸ್ಥಾನಮಾನ ಶಾಶ್ವತವಲ್ಲ: ಬಿ.ಜಿ.ಗೋವಿಂದಪ್ಪ
ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆಗೆ ಶಿಬಿರ ಸಹಕಾರಿ : ತಸ್ನೀಮ್