ಕನ್ನಡಪ್ರಭ ವಾರ್ತೆ ಗುಡಿಬಂಡೆ
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆಗೆ ಚಾಲನೆ ನೀಡಿ ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಜನತೆಗೆ ಅರಿವು ಮೂಡಿಸಿಯುವಜನತೆ ದೇಶದ ಆಸ್ತಿ. ಆದರೆ ಇಂದಿನ ಯುವಜನತೆ ತಪ್ಪು ಹಾದಿಗಳನ್ನು ಹಿಡಿದು ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಡ್ರಗ್ಸ್ ಗಳಲ್ಲಿ ಅನೇಕ ವಿಧಗಳಿವೆ. ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಾದ ತಾವು ಅರಿವು ಪಡೆದುಕೊಂಡು ಮತ್ತಷ್ಟು ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.
ಆರೋಗ್ಯವಂತ ಸಮಾಜ ನಿರ್ಮಿಸಿ
ಈ ನಿಟ್ಟಿನಲ್ಲಿ ಸರ್ಕಾರಗಳು ಈಗಾಗಲೇ ಮಾದಕ ವಸ್ತುಗಳ ಸೇವನೆಯ ಕುರಿತು ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿವೆ. ಜನರು ಸಹ ಈ ಕುರಿತು ಅರಿವು ಪಡೆದುಕೊಂಡು ಜಾಗೃತರಾಗಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಎಲ್ಲರ ಜೊತೆಗೆ ಕೈಜೋಡಿಸಬೇಕು ಎಂದರು.ಈ ವೇಳೆ ವಕೀಲರ ಸಂಘದ ಅಧ್ಯಕ್ಷ ಅಶ್ವತ್ಥರೆಡ್ಡಿ, ಕಾಲೇಜಿನ ಪ್ರಾಂಶುಪಾಲ ರವೀಂದ್ರ, ಪೊಲೀಸ್ ಪಿಎಸ್ಐ ಗಣೇಶ್, ಆರೋಗ್ಯ ನಿರೀಕ್ಷಕ ನರಸಿಂಹಯ್ಯ ಸೇರಿದಂತೆ ವಕೀಲರು ಕಾಲೇಜಿನ ಸಿಬ್ಬಂದಿ ವರ್ಗ ಹಾಜರಿದ್ದರು.