ರಸ್ತೆ ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮ
ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು,ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೋಲೀಸರೊಂದಿಗೆ ಸಾರ್ವಜನಿಕರು ಕೈಡೋಡಿಸಬೇಕು. ಪೋಲೀಸ್ ಸಾರ್ವಜನಿಕರು ಜನಸ್ನೇಹಿಗಳಾಗಿ ಕೆಲಸ ಮಾಡಬೇಕು ಎಂದು ಶೃಂಗೇರಿ ಪೋಲೀಸ್ ಠಾಣೆ ಪಿಎಸೈ ನಾಗರಾಜ್ ಹೇಳಿದರು.
ಪಟ್ಟಣದ ಬಸ್ ನಿಲ್ದಾಣದಲ್ಲಿ ಪೋಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಸ್ತೆ ಸುರಕ್ಷಾ ನಿಯಮಗಳ ಬಗ್ಗೆ ಜನಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು.ಜನರು ಕಾನೂನುಗಳ ಪಾಲನೆ ಮಾಡಬೇಕು.ಕಾನೂನು ಕಾಯ್ದೆಗಳಿರುವುದು ಜನರಿಗಾಗಿ.ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧರಿಸಬೇಕು.ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬಾರದು.ಅತಿ ವೇಗವಾದ ಹಾಗೂ ಅಜಾಗರೂಕತೆಯ ವಾಹನ ಚಾಲನೆ ಮಾಡುವುದು ಜೀವಕ್ಕೆ ಅಪಾಯ.ನಿರ್ಲಕ್ಷದಿಂದ ವಾಹನ ಚಲಾಯಿಸಬಾರದು.ಜೀವ ಅತ್ಯಮೂಲ್ಯ.ಕಾನೂನು ತಿಳಿದುಕೊಳ್ಳಬೇಕು ಎಂದರು.
ಪೋಲೀಸ್ ಸಿಬ್ಬಂದಿ ರಾಜು, ಪ್ರವೀಣ್, ಗೃಹರಕ್ಷಕ ದಳದ ಸುಂದರೇಶ್ ಮತ್ತಿತರರು ಇದ್ದರು.