ಕನ್ನಡಪ್ರಭ ವಾರ್ತೆ ಉಡುಪಿ
ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 13ನೇ ವರ್ಷದ ರಂಗಹಬ್ಬ ಮೂರನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಾಟಕ ಬರೆದವರನ್ನು, ನಿರ್ದೇಶಿಸಿದವರನ್ನು, ಅಭಿನಯಿಸಿದವರನ್ನು ಎಲ್ಲರೂ ಗುರುತಿಸುತ್ತಾರೆ. ಸನ್ಮಾನಿಸುತ್ತಾರೆ. ಆದರೆ, ಹಿನ್ನೆಲೆಯಲ್ಲಿದ್ದುಕೊಂಡು ಕೆಲಸ ಮಾಡುವವರನ್ನು ಗುರುತಿಸುವುದು ಕಡಿಮೆ. ನೇಪಥ್ಯದಲ್ಲಿ ಇರುವವರನ್ನೂ ಗುರುತಿಸುವ ಮೂಲಕ ಸುಮನಸಾ ಕೊಡುವೂರು ಸಂಘಟನೆ ವಿಶಿಷ್ಟ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಸಿ. ಬಂಗೇರ ಮಾತನಾಡಿ, ಕಲಾವಿದರಿಗೆ ಜಾತಿ, ಮತ, ಪಂಥ, ಲಿಂಗದ ಭೇದ ಇರುವುದಿಲ್ಲ. ನಾಟಕದಲ್ಲಿ ಹೆಣ್ಣು ಗಂಡಾಗಬಹುದು. ಗಂಡು ಹೆಣ್ಣಾಗಬಹುದು. ನಾಟಕವು ಮನರಂಜನೆ ಮಾತ್ರವಾಗದೇ ಅರಿವು ಮೂಡಿಸುವ ಸಮಾಜಕ್ಕೆ ದಿಕ್ಕು ತೋರಿಸುವ ಪ್ರಕ್ರಿಯೆ ಎಂದು ಹೇಳಿದರು.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ್ ಕುಂದರ್ ಸ್ವಾಗತಿಸಿದರು. ಚಂದ್ರಕಾಂತ್ ಕಲ್ಮಾಡಿ ವಂದಿಸಿದರು. ರಾಧಿಕಾ ದಿವಾಕರ್ ಮತ್ತು ಕಾವ್ಯ ನಿರೂಪಿಸಿದರು. ಬಳಿಕ ಅನಿಕೇತನ ಹಾಸನ ಕಲಾವಿದರು ‘ಕಿರಗೂರಿನ ಗಯ್ಯಾಳಿಗಳು’ ನಾಟಕ ಪ್ರದರ್ಶಿಸಿದರು.