ಜನರು ಎಚ್ಚರಿಕೆಯಿಂದ ವಾಹನ ಚಲಾಯಿಸಿ

KannadaprabhaNewsNetwork |  
Published : Jan 03, 2026, 02:30 AM IST
02ಕೆಪಿಎಲ್‌ ನಗರದಲ್ಲಿನ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ  37 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮ ನಡೆಯಿತು | Kannada Prabha

ಸಾರಾಂಶ

ಕಾನೂನು ಉಲ್ಲಂಘನೆಯಿಂದಲೇ ಬಹಳಷ್ಟು ರಸ್ತೆ ಅಪಘಾತಗಳು ಸಂಭವಿಸುತ್ತವೆ. ಮನೆಯಲ್ಲಿ ಒಬ್ಬರು ಅಥವಾ ಇಬ್ಬರು ದುಡಿಯುವವರು ಇರುತ್ತಾರೆ

ಕೊಪ್ಪಳ: ಜನರು ಎಚ್ಚರಿಕೆಯಿಂದ ವಾಹನ ಚಲಾಯಿಸುವುದರ ಜತೆಗೆ ಸರ್ಕಾರದ ನಿಯಮ ಪಾಲನೆ ಮಾಡಬೇಕು. ನಿರ್ಲಕ್ಷ್ಯ ವಹಿಸಿ ವಾಹನ ಚಲಾಯಿಸುವುದರಿಂದ ಅಪಘಾತಗಳು ಸಂಭವಿಸುತ್ತವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್. ದರಗದ ಹೇಳಿದರು.

ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಪ್ರಾದೇಶಿಕ ಸಾರಿಗೆ ಕಚೇರಿ ಕೊಪ್ಪಳ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಕೊಪ್ಪಳ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾನೂನು ಉಲ್ಲಂಘನೆಯಿಂದಲೇ ಬಹಳಷ್ಟು ರಸ್ತೆ ಅಪಘಾತಗಳು ಸಂಭವಿಸುತ್ತವೆ. ಮನೆಯಲ್ಲಿ ಒಬ್ಬರು ಅಥವಾ ಇಬ್ಬರು ದುಡಿಯುವವರು ಇರುತ್ತಾರೆ. ಅವರಿಗೆ ಅಪಘಾತವಾದಲ್ಲಿ ಇಡೀ ಕುಟುಂಬ ಸಂಕಷ್ಟಕ್ಕೆ ಸಿಲುಕುತ್ತದೆ. ಕಾನೂನುಗಳು ಇರುವುದು ನಮ್ಮ ಸುರಕ್ಷತೆಗೆ. ಹಾಗಾಗಿ ನಾವೆಲ್ಲರೂ ಕಾನೂನು ಪಾಲಿಸಬೇಕು. 18 ವರ್ಷದೊಳಗಿನ ಮಕ್ಕಳಿಗೆ ದ್ವಿಚಕ್ರ ಸೇರಿದಂತೆ ಇತರೆ ಯಾವುದೇ ವಾಹನಗಳ ಚಾಲನೆಗೆ ಕೊಡಬಾರದು. ಕೆಲವು ಪೋಷಕರು ತಮ್ಮ ಮಕ್ಕಳಿಗೆ ವಾಹನ ಚಲಾಯಿಸಲು ಕೊಟ್ಟು ನಮ್ಮ ಮಗ ಅಥವಾ ಮಗಳು ಚಿಕ್ಕ ವಯಸ್ಸಿನಲ್ಲಿ ವಾಹನ ಚಲಾಯಿಸುತ್ತಾರೆ ಎಂದು ಖುಷಿಪಡುತ್ತಾರೆ. ಅದು ಸರಿಯಲ್ಲ ಎಂದರು.

ವಾಹನಗಳ ಮಾಲೀಕರು ತಮ್ಮ ವಾಹನಗಳ ಮಾರಾಟ ಮಾಡಿದ ತಕ್ಷಣ ಅದನ್ನು ವಾಹನ ಖರೀದಿಸಿದವರ ಹೆಸರಿಗೆ ವರ್ಗಾಯಿಸಬೇಕು. ಇಲ್ಲದಿದ್ದರೆ ಏನಾದರೂ ಅಪಘಾತವಾದರೆ ವಾಹನ ತಮ್ಮ ಹೆಸರಲ್ಲಿ ಇರುವುದರಿಂದ ತಮ್ಮನ್ನೆ ಹೊಣೆಗಾರರನ್ನಾಗಿ ಮಾಡುತ್ತಾರೆ. ರಸ್ತೆ ನಿಯಮ ಎಲ್ಲರೂ ಪಾಲನೆ ಮಾಡುವುದರ ಜತೆಗೆ ಸೀಟ್ ಬೆಲ್ಟ ಉಪಯೋಗಿಸಿಕೊಂಡು ವಾಹನ ಚಲಾಯಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಹೇಮಂತಕುಮಾರ ಮಾತನಾಡಿ, ನಮ್ಮ ದೇಶದಲ್ಲಿ ಅಪಘಾತಗಳಿಂದಲೇ ಸಾಯುವವರ ಸಂಖ್ಯೆ ಹೆಚ್ಚಿದೆ. ಪ್ರತಿ ದಿನ 480 ರಿಂದ 500 ಜನರು ನಮ್ಮ ದೇಶದಲ್ಲಿ ಅಪಘಾತಗಳಿಂದ ಮೃತಪಡುತ್ತಾರೆ. ಜನರಲ್ಲಿ ಅರಿವಿದೆ ಆದರೆ ರಸ್ತೆ ನಿಯಮ ಪಾಲಿಸುವುದಿಲ್ಲ. ನಮ್ಮ ಸುರಕ್ಷತೆ ನಮ್ಮ ಕೈಯಲ್ಲಿದೆ. ಹಾಗಾಗಿ ನಾವು ರಸ್ತೆ ಸಂಚಾರಿ ನಿಯಮ ಪಾಲಿಸುವ ಮೂಲಕ ವಾಹನ ಚಲಾಯಿಸಬೇಕು ಎಂದು ಹೇಳಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಭುಸ್ವಾಮಿ ಹಿರೇಮಠ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಜಗದೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಜಿ. ಸುರೇಶ ಮಾತನಾಡಿದರು. ರಸ್ತೆ ಸುರಕ್ಷತಾ ನಿಯಮಗಳ ಕುರಿತು ಮಾಹಿತಿ ಒಳಗೊಂಡ ಕರ ಪತ್ರ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.

ಪ್ರಾದೇಶಿಕ ಸಾರಿಗೆ ಇಲಾಖೆಯ ಹಿರಿಯ ಮೋಟಾರ ವಾಹನ ನಿರೀಕ್ಷಕ ವಿಜಯಕುಮಾರ್, ಮೃತ್ಯುಂಜಯ ವನಕೇರಿ, ಮೋಟಾರ ವಾಹನ ನಿರೀಕ್ಷಕ ಮಂಜುನಾಥ, ವಿಜಯೇಂದ್ರ ಸೇರಿದಂತೆ ಸಾರಿಗೆ ಇಲಾಖೆಯ ಇತರೆ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ಸುರೇಶ ಕುಂಬಾರ ಸ್ವಾಗತಿಸಿದರು. ಆನಂದ ಹಳ್ಳಿಗುಡಿ ನಿರೂಪಿಸಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಕ್ಷೇತ್ರಕ್ಕೆ ಆರ್ಥಿಕ ಶಿಸ್ತು ಅಗತ್ಯ
ಅಧಿಕಾರಿಗಳು ಜಾತ್ಯತೀತವಾಗಿ ಕೆಲಸ ಮಾಡಿ : ಸಿಎಂ ಸಿದ್ದರಾಮಯ್ಯ