ಸಾರ್ವಜನಿಕರು ಸ್ವಯಂ ಗಣತಿಗಾಗಿ ವೆಬ್ ಸೈಟ್ ಬಳಸಿಕೊಂಡು 33 ಪ್ರಶ್ನೆಗೆ ಉತ್ತರಿಸಲು ಮನವಿಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲೆಯಲ್ಲಿ ಮನೆ ಪಟ್ಟಿ ಮತ್ತು ಮನೆಗಣತಿ ಕಾರ್ಯವು ಏ.1ರಿಂದ ಆರಂಭವಾಗಿದೆ. ಸಾರ್ವಜನಿಕರು ಸ್ವಯಂ ಗಣತಿಗಾಗಿ ವೆಬ್ ಸೈಟ್ ಬಳಸಿಕೊಂಡು ಲಾಗ್ ಇನ್ ಆಗಿ ಮನೆಗಳ ಪಟ್ಟಿ ಮತ್ತು ವಸತಿ ಗಣತಿ ಸಂಬಂಧ ಕೇಳಲಾಗುವ 33 ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ. ಸಾರ್ವಜನಿಕರು ಸ್ವಯಂ ಗಣತಿ ಮಾಹಿತಿ ಯಶಸ್ವಿಯಾಗಿ ಸಲ್ಲಿಸಿದ ನಂತರ ಎಸ್ಎಂಎಸ್ ಮತ್ತು ಇ-ಮೇಲ್ ಪೊರ್ಟಲ್ಗೆ ರೆಫರೆನ್ಸ್ ಐ.ಡಿ.ಸ್ವೀಕೃತವಾಗುತ್ತದೆ.
ಗಣತಿದಾರರು ಮನೆಗೆ ಭೇಟಿ ನೀಡಿದಾಗ ರೆಫರೆನ್ಸ್ ಐ.ಡಿ.ನೀಡುವ ಮೂಲಕ ಗಣತಿ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ. ಒಂದು ವೇಳೆ ರೆಫರೆನ್ಸ್ ಐ.ಡಿ.ನೀಡದಿದ್ದರೆ ಗಣತಿದಾರರು ಮೊದಲಿನಿಂದಲೂ ಎಲ್ಲ ಪ್ರಶ್ನೆಗಳನ್ನು ಕೇಳಿ ಹೊಸದಾಗಿ ಗಣತಿ ಮಾಡಬೇಕಿದೆ.ಸ್ವಯಂ ಗಣತಿಯಲ್ಲಿ ಪಾಲ್ಗೊಳ್ಳುವುದರಿಂದ ಗಣತಿದಾರರು ಬಂದಾಗ ಆಗುವ ಸಮಯ ವ್ಯಯವನ್ನು ತಪ್ಪಿಸಬಹುದು. ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಗಣತಿಯಲ್ಲಿ ಪಾಲ್ಗೊಳ್ಳುವಂತೆ ಡೀಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.---
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಚ್ಪಿಸಿ, ಬಿಪಿಸಿ ಮತ್ತು ಐಒಸಿ ಅನಿಲ ವಿತರಕ ಕಂಪನಿ ಮಾರಾಟಾಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 34 ಅನಿಲ ವಿತರಣೆ ಕಂಪನಿ ಮಾರಾಟಗಾರರಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳು ನಿಯಾಮನುಸಾರ ಸ್ಧಳಕ್ಕೆ ಹೋಗಿ ಸ್ಟಾಕ್ ಪರಿಶೀಲನೆ ಮಾಡಬೇಕು. ಅಕ್ರಮ ಮಾರಾಟ ಮಾಡುವುದು, ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿನ ಅಂಗನವಾಡಿಗಳು, ಶಾಲೆಗಳು, ಆಸ್ಪತ್ರೆಗಳು, ಸರ್ಕಾರಿ ಹಾಸ್ಟೆಲ್ಗಳಿಗೆ ದೈನಂದಿನ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಆದ್ಯತೆಯಲ್ಲಿ ಅನಿಲ ಸರಬರಾಜು ಮಾಡುವಂತೆ ಹೇಳಿದರು.
-----------