ಕನ್ನಡಪ್ರಭ ವಾರ್ತೆ ಮಳವಳ್ಳಿ
ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಭಾರತ್ ನಿರ್ಮಾಣ್ ರಾಜೀವ್ಗಾಂಧಿ ಸೇವಾ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಚುನಾವಣೆಯಲ್ಲಿ ಆಯ್ಕೆ ಮಾಡಿದ ಕ್ಷೇತ್ರದ ಜನರ ಹಿತಕಾಯಲು ಎಂದಿಗೂ ಬದ್ಧನಾಗಿರುತ್ತೇನೆ ಎಂದರು.
ತಾಲೂಕಿನ ಎಲ್ಲಾ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಿದ್ದೇನೆ. ಜನಸೇವೆಗಾಗಿ ರಾಜಕೀಯಕ್ಕೆ ಬಂದಿದ್ದೇನೆ. ನೇರ ನುಡಿಯ ಮೂಲಕವೇ ಉತ್ತರ ಕೊಡುತ್ತೇನೆ ಹೊರತು ಗುಲಾಮಗಿರಿ ರಾಜಕಾರಣ ಎಂದಿಗೂ ಮಾಡುವುದಿಲ್ಲ ಎಂದರು.ಕ್ಷೇತ್ರದಲ್ಲಿ ಗುಂಡಾಗಿರಿ, ದಬ್ಬಾಳಿಕೆಗೆಗಳಿಗೆ ಎಂದಿಗೂ ಅವಕಾಶ ಕೊಡುವುದಿಲ್ಲ. ನಾನು ಎಲ್ಲಿಯವರೆಗೆ ಅಧಿಕಾರದಲ್ಲಿ ಇರುತ್ತಾನೋ ಅಲ್ಲಿಯವರೆವಿಗೂ ಪ್ರಾಮಾಣಿಕ ಆಡಳಿತವಿರಬೇಕು. ಕಾನೂನು ಮತ್ತು ಸಂವಿಧಾನ ಬದ್ಧವಾಗಿ ದೇಶ ನಡೆಯುವ ರೀತಿಯಲ್ಲಿ ಮಳವಳ್ಳಿಯಲ್ಲಿಯೂ ತರಬೇಕು ಎನ್ನುವುದು ನನ್ನ ಉದ್ದೇಶವಾಗಿದೆ ಎಂದರು.
ನಾವು ಎಂದಿಗೂ ಸುಳ್ಳು ಭರವಸೆ ನೀಡುವುದಿಲ್ಲ. ಬೇರೆಯವರ ರೀತಿ ಸುಳ್ಳು ಘೋಷಣೆ ಮಾಡಿ ಅನುದಾನ ಕೊಟ್ಟು ಕಿತ್ತು ಕೊಳ್ಳುವುದಿಲ್ಲ. ನಮ್ಮ ಸರ್ಕಾರ ಅನುದಾನದ ಜೊತೆಗೆ ಗ್ಯಾರಂಟಿ ಯೋಜನೆ ನೀಡಿದರೂ ಲೋಕಸಭೆಯಲ್ಲಿ ಕೈ ಹಿಡಿಯಲ್ಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಗ್ರಾಪಂ ಅಧ್ಯಕ್ಷ ಚನ್ನಿಗರಾಮು ಮಾತನಾಡಿ, ಗ್ರಾಪಂನಿಂದ ಈ ಸ್ವತ್ತು ಸೇರಿದಂತೆ ಇತರೆ ದಾಖಲೆಗಳನ್ನು ಸಾರ್ವಜನಿಕರಿಗೆ ಯಾವುದೇ ಪ್ರತಿ ಫಲಪೇಕ್ಷೆ ಇಲ್ಲದೇ ಪ್ರಮಾಣಿಕವಾಗಿ ನೀಡಲಾಗುತ್ತಿದೆ. ಗ್ರಾಮಗಳಿಗೆ ಅಗತ್ಯ ಸೌಲಭ್ಯ ಒದಗಿಸಲಾಗುತ್ತಿದೆ. ಕಂದೇಗಾಲ ಗ್ರಾಮದ ಅಭಿವೃದ್ಧಿಗೆ ಕೊಟ್ಯಂತರ ರು. ನೀಡಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ನೀಡುವುದಾಗಿ ತಿಳಿಸಿದರು.