ನವಲಗುಂದ:
ತಾಲೂಕಿನ ತಿರ್ಲಾಪುರ, ಶಿರಕೋಳ, ಹನಸಿ ಸೇರಿದಂತೆ ಪ್ರವಾಹದಿಂದ ಹಾನಿಗೊಳಗಾದ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು. ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಬೆಣ್ಣೆಹಳ್ಳ, ತುಪ್ಪರಿಹಳ್ಳ, ರಾಡಿ ಹಳ್ಳ, ಹಂದಿಗನ ಹಳ್ಳ, ಮಲ್ಲ ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ಸಾಕಷ್ಟು ಪ್ರಮಾಣದ ಬೆಳೆಹಾನಿಯಾಗಿದೆ ಎಂದರು.
₹ 300 ಕೋಟಿ ಹಣ:ತುಪ್ಪರಿ ಹಳ್ಳದ ಯೋಜನೆಗೆ ನಮ್ಮ ಸರ್ಕಾರ ₹ 300 ಕೋಟಿಗೂ ಅಧಿಕ ಹಣ ನೀಡಿದೆ. ಈಗಾಗಲೇ ₹ 150 ಕೋಟಿ ವೆಚ್ಚದಲ್ಲಿ ಕಾಮಗಾರಿ ಮಾಡಲಾಗಿದೆ. ಈ ಕಾಮಗಾರಿ ಮಾಡದೆ ಹೋಗಿದ್ದರೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಹಾನಿ ಜತೆಗೆ ಗ್ರಾಮಗಳು ತೀವ್ರ ತೊಂದರೆ ಅನುಭವಿಸುತ್ತಿದ್ದವು ಎಂದು ಹೇಳಿದರು.
ಪ್ರತಿಯೊಂದು ವಿಷಯಕ್ಕೂ ಕೇಂದ್ರ ಸರ್ಕಾರದತ್ತ ಬೋಟು ಮಾಡುವ ಸ್ಥಳೀಯ ಶಾಸಕರು, ಇದೀಗ ಅತಿವೃಷ್ಟಿಯಿಂದ ಹಾನಿಯಾಗಿರುವುದಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸಲಿ ಎಂದು ಮುನೇನಕೊಪ್ಪ ಸವಾಲು ಹಾಕಿದರು.
ಈ ವೇಳೆ ಗಂಗಪ್ಪ ಮನಮಿ, ಎ.ಬಿ. ಹಿರೇಮಠ, ಎಸ್.ಬಿ. ದಾನಪ್ಪಗೌಡರ, ರೋಹಿತ ಮಟ್ಟಿಹಳ್ಳಿ, ಸಿದ್ದಲಿಂಗಪ್ಪ ಮದ್ನೂರ, ಬಸವರಾಜ ಆಕಳದ, ಮಹೇಶ ಬಕ್ಕನ್ನವರ, ಬಸವರಾಜ ಬೆಣ್ಣಿ, ಗುರುಸಿದ್ದಪ್ಪ ಮೆಣಸಿನಕಾಯಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.