ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ ಹಾಗೂ ಪುರಸಭೆಯ ಸಹಭಾಗಿತ್ವದಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
ನಾವು ಉಪಯೋಗಿಸುವ ಗಾಳಿ, ಬೆಳಕು ಮತ್ತು ಆಹಾರ ಉತ್ತಮವಾಗಿಲು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಎಲ್ಲೆಂದರಲ್ಲಿ ಬಿಸಾಡುವ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ತೆರವುಗೊಳಿಸಿ ಸ್ವಚ್ಛತೆ ಮಾಡಲು ಒಂದು ಇಲಾಖೆ ಅಥವಾ ಪೌರಕಾರ್ಮಿಕರಿದ್ದಾರೆ ಎಂಬ ಮನೋಭಾವನೆ ಬಿಟ್ಟು, ಮನೆ ಸುತ್ತಮುತ್ತ ಅಥವಾ ಕೆಲಸ ಮಾಡುವ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕಿರುವುದು ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯಾಬೇಕು ಎಂದರು.ನಮ್ಮ ಸುತ್ತಮುತ್ತಲ ವಾತಾವರಣ ಚೆನ್ನಾಗಿದ್ದರೆ ಒಳ್ಳೆಯ ಗಾಳಿ ಬೆಳಕಿನ ಜೊತೆಗೆ ಆರೋಗ್ಯವೂ ಸಹ ಉತ್ತಮವಾಗಿರುತ್ತದೆ. ಎಲ್ಲೆಂದರಲ್ಲಿ ಕಸ ಬಿಸಾಡುವ ಬದಲು ನಿರ್ಧಿಷ್ಟ ಸ್ಥಳದಲ್ಲಿ ಹಾಕಿದರೆ ಪೌರಕಾರ್ಮಿಕರಿಗೂ ಸಹಾಯ ಮಾಡಿದಂತಾಗುತ್ತದೆ. ಅಲ್ಲದೆ ನಮ್ಮ ಸುತ್ತಮುತ್ತಲ ಪರಿಸರನ್ನು ಕಾಪಾಡಿಕೊಂಡು ಮುಂದಿನ ಪೀಳಿಗೆಗೆ ಒಳ್ಳೆಯ ಗಾಳಿ ಮತ್ತು ಬೆಳಕು ನೀಡಬಹುದು ಎಂದರು.
ಅಪರ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ನರಸಿಂಹಮೂರ್ತಿ ಮಾತನಾಡಿ, ದೇಶ ಅಥವಾ ರಾಜ್ಯ ಅಭಿವೃದ್ಧಿ ಹೊಂದುವ ಭರದಲ್ಲಿ ನಾವುಗಳು ಸ್ವಚ್ಛತೆಯನ್ನು ಮರೆಯುತ್ತಿದ್ದೇವೆ. ಆರೋಗ್ಯಕರ ರಾಷ್ಟ್ರವಾಗಲು ನಮ್ಮ ಪರಿಸರವೂ ಸ್ವಚ್ಛತೆಯಿಂದ ಕೂಡಿರಬೇಕು. ನಮ್ಮ ಕುಟುಂಬ, ಮನೆ, ಮತ್ತು ಗ್ರಾಮಗಳಲ್ಲೂ ಆರೋಗ್ಯಕರ ವಾತಾವರಣವಿದ್ದರೆ ಒಳ್ಳೆಯ ಆಲೋಚನೆಗಳು ಬೆಳೆಯುತ್ತವೆ. ಆ ಮೂಲಕ ದೇಶವೂ ಸಹ ಮತ್ತಷ್ಟು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದರು.