ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಇಂದಿರಾ ಗಾಂಧಿ ಕಾಂಗ್ರೆಸ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಾಮರಾಜ ಕ್ಷೇತ್ರ ಬಿ.ಕೆ. ಪ್ರಕಾಶ್ ಅವರೊಂದಿಗೆ ನಗರಾಧ್ಯಕ್ಷ ಆರ್. ಮೂರ್ತಿ ಅವರಿಂದ ಕೆಪಿಸಿಸಿ ಸದಸ್ಯತ್ವದ ಪ್ರಮಾಣ ಪತ್ರ ಸ್ವೀಕರಿಸಿದ ನಂತರ ಅವರು ಮಾತನಾಡಿದರು.
ಪ್ರತಿ ಚುನಾವಣಾ ಸಂದರ್ಭದಲ್ಲೂ ಪ್ರತಿ ಮತಕ್ಕೂ ಇಂತಿಷ್ಟು ಹಣ ಕೊಟ್ಟು ಮತ ಪಡೆಯುವುದು ಮಾಮೂಲಿಯಾಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ದೂರದೃಷ್ಟಿಯ ಫಲವಾಗಿ ಪಂಚ ಗ್ಯಾರಂಟಿ ಯೋಜನೆಗಳು ಅತ್ಯಂತ ವ್ಯವಸ್ಥಿತವಾಗಿ ಜನ ಸಾಮಾನ್ಯರಿಗೆ ತಲುಪುತ್ತಿವೆ. ಐದು ವರ್ಷಗಳ ನಂತರ ಪ್ರತಿ ಮನೆಗೂ ಐದು ಗ್ಯಾರಂಟಿ ಯೋಜನೆಗಳ ಮೂಲಕ ಕನಿಷ್ಠ 4 ರಿಂದ 4.50 ಲಕ್ಷ ರೂ. ತಲುಪಿರುತ್ತದೆ. ಹೀಗಾಗಿ ಜನ ಸಹಜವಾಗಿಯೇ ಕಾಂಗ್ರೆಸ್ಗೆ ಮತ ನೀಡಲಿದ್ದಾರೆ ಎಂದರು.ಕಾಂಗ್ರೆಸ್ ಎಲ್ಲರನ್ನೂ ಒಳಗೊಂಡ ಪಕ್ಷ. ಸ್ವಾಭಿಮಾನಕ್ಕೆ ಪೆಟ್ಟು ಬಿದ್ದ ಜಾಗದಲ್ಲಿ ಇರಬಾರದು ಎನ್ನುವ ಕಾರಣಕ್ಕೆ ಕಾಂಗ್ರೆಸ್ಸಿಗೆ ಬಂದಿದ್ದೇನೆ. ಕಾಂಗ್ರೆಸ್ ಸೇರ್ಪಡೆಗೊಂಡ ದಿನದಿಂದಲೇ ನನ್ನ ಜವಾಬ್ದಾರಿಗಳು ನಿಬಾಯಿಸುತ್ತಿದ್ದೇನೆ. ಇದೀಗ ಕೆಪಿಸಿಸಿ ಸದಸ್ಯನಾಗಿದ್ದು, ಹಗಲು- ರಾತ್ರಿ ಕೆಲಸ ಮಾಡಿ ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ ಎಂದರು.
ಬದಲಾವಣೆ ಅನಿವಾರ್ಯವಾದರೆ ಪರಮೇಶ್ವರ್ ಸಿಎಂ ಆಗಲಿ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯ ಚರ್ಚೆಗೆ ಬಂದಾಗಲೆಲ್ಲ ಹಲವರ ಹೆಸರು ಕೇಳಿ ಬರುತ್ತದೆ. ಆದರೆ, ಕಾಂಗ್ರೆಸ್ ಸಂಘಟನೆಗೆ, ಪಕ್ಷಕ್ಕೆ ಮಹತ್ತರ ಕೊಡುಗೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೆಸರು ಏಕೆ ಬರುವುದಿಲ್ಲ ಎಂದು ಡಾ.ಜಿ.ಪರಮೇಶ್ವರ್ ಅಭಿಮಾನಿ ಬಳಗದ ಅಧ್ಯಕ್ಷ ಬಿಳಿಕೆರೆ ರಾಜು ಪ್ರಶ್ನಿಸಿದರು.
ಕಾಂಗ್ರೆಸ್ ಅಧ್ಯಕ್ಷರಾಗಿ, ಹಲವಾರು ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಈಗಲೂ ನಿಭಾಯಿಸುತ್ತಿದ್ದಾರೆ. ಈ ಹಿಂದೆಯೂ ಇವರಿಗೆ 2 ಬಾರಿ ಅನ್ಯಾಯವಾಗಿದೆ. ಹಿರಿಯ ರಾಜಕೀಯ ಮುತ್ಸದ್ಧಿಯೂ ಆಗಿದ್ದು, ಕಾಂಗ್ರೆಸ್ ಹೈಕಮಾಂಡ್, ರಾಜ್ಯದ ಮುಖಂಡರು ಇತ್ತ ಗಮನ ಹರಿಸಿ, ಇವರಿಗೇ ಸಿಎಂ ಸ್ಥಾನ ನೀಡಬೇಕು ಎಂದು ಅವರು ಒತ್ತಾಯಿಸಿದರು.