ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ತಾಪಂ ಆವರಣದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ 18 ಮಂದಿ ಅರ್ಹ ಫಲಾನುಭವಿಗಳಿಗೆ ಇಂಧನ ಚಾಲಿತ ತ್ರಿಚಕ್ರ ವಾಹನ ವಿತರಿಸಿ ಮಾತನಾಡಿ, ಸರ್ಕಾರ ವಿಕಲಚೇತನರ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಅನೇಕ ಯೋಜನೆ ಜಾರಿಗೆ ತಂದಿದೆ. ಇವುಗಳನ್ನು ಅರ್ಹರಿಗೆ ತಲುಪಿಸುವ ಕಾರ್ಯದಲ್ಲಿ ಅಧಿಕಾರಿಗಳು ಕಾರ್ಯಾನ್ಮುಖರಾಗಬೇಕು ಎಂದರು.
ಮದ್ದೂರು ಕ್ಷೇತ್ರದಲ್ಲಿ ಇಂಧನ ಚಾಲಿತ ತ್ರಿಚಕ್ರ ವಾಹನ ಕೋರಿ ಅನೇಕ ಅರ್ಜಿಗಳು ಬಂದಿವೆ. ಸದ್ಯಕ್ಕೆ 18 ಫಲಾನುಭವಿಗಳನ್ನು ಆಯ್ಕೆ ಮಾಡಿ ತ್ರಿಚಕ್ರ ವಾಹನ ವಿತರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ಬೇರೆಬೇರೆ ಮೂಲಗಳಿಂದ ವಾಹನಗಳನ್ನು ವಿತರಿಸಲು ಚಿಂತನೆ ನಡೆಸಲಾಗಿದೆ ಎಂದರು.ಈ ವೇಳೆ ತಾಪಂ ಇಒ ರಾಮಲಿಂಗಯ್ಯ, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಪುಟ್ಟಸ್ವಾಮಿ, ಸರ್ವೋದಯ ವಿಕಲಚೇತನರ ಸಂಘದ ಅಧ್ಯಕ್ಷ ಎಸ್.ಸಿ.ರಮೇಶ, ಮುಖಂಡರಾದ ಸಿ.ಕೆ.ಕೃಷ್ಣ, ರವಿ, ರಾಜಣ್ಣ, ಅಭಿಷೇಕ್, ಬೋರೇಗೌಡ, ಆನಂದ ಕುಮಾರ ಇದ್ದರು.
ಮಂಡ್ಯ :
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಬೆಳೆಗೆ ಸರಿಯಾದ ಬೆಲೆ ಸಿಗದೇ ಸರ್ಕಾರದಿಂದ ನೀಡಲಾಗುತ್ತಿದ್ದ ಅನುಕೂಲಗಳು ಕಡಿತವಾಗಿದ್ದರಿಂದ ರೈತರು ಕೃಷಿ ಬಿಟ್ಟು ವಲಸೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರಗಳು, ಆಯ್ದ ಜನಪ್ರತಿನಿಧಿಗಳು ರೈತಪರ ಕೆಲಸ ಮಾಡಬೇಕು ಎಂದರು.
ರೈತರ ಪರ ನಿರ್ಧಾರ ಕೈಗೊಳ್ಳದೇ ಜನ ಕಲ್ಯಾಣ ಸಮಾವೇಶ ಮಾಡುತ್ತೀರಿ. ಇದು ಹೀಗೆ ಮುಂದುವರೆದರೆ ರೈತರ ಬದುಕು ಇನ್ನಷ್ಟು ಕಷ್ಟವಾಗಲಿದೆ. ಇದನ್ನು ಸರಿಪಡಿಸಬೇಕು ಎಂದು ಮನವಿ ಮಾಡಿದರು.