ರಂಗಿನಾಟದಲ್ಲಿ ಮಿಂದೆದ್ದ ಕುಷ್ಟಗಿ ಜನತೆ

KannadaprabhaNewsNetwork |  
Published : Mar 05, 2026, 02:15 AM IST
ಪೋಟೊ4ಕೆಎಸಟಿ1: ಕುಷ್ಟಗಿ ಪಟ್ಟಣದಲ್ಲಿ ಹೋಳಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. | Kannada Prabha

ಸಾರಾಂಶ

ಸಿಳ್ಳೆ, ಕೇಕೆ ಹೊಡೆಯುವುದು ಸಾಮಾನ್ಯವಾಗಿತ್ತು. ಇನ್ನೂ ಕೆಲವರು ಹಲಗೆ ಬಾರಿಸುತ್ತಲೇ ಅದರ ತಾಳಕ್ಕೆ ಹೆಜ್ಜೆ ಹಾಕಿ ಖುಷಿಪಟ್ಟರು

ಕುಷ್ಟಗಿ: ಪಟ್ಟಣದಲ್ಲಿ ಹೋಳಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಎಲ್ಲೆಡೆ ರಂಗಿನಾಟದಲ್ಲಿ ಮಿಂದೆದ್ದ ಜನತೆ ಹ್ಯಾಪಿ ಹೋಳಿ ಎನ್ನುತ್ತಲೇ ಕಿರಿಯರು, ಹಿರಿಯರು ಮೈಮೇಲೆ ಪರಸ್ಪರ ಬಣ್ಣ ಎರಚುವ ಮೂಲಕ ಸಂಭ್ರಮಿಸಿದರು.

ಬಿಸಿಲು ಲೆಕ್ಕಿಸದೇ ಮಕ್ಕಳು ಮತ್ತು ಯುವ ಜನತೆ ಕೈಯಲ್ಲಿ ಬಣ್ಣ ಹಿಡಿದು ರಸ್ತೆಯಲ್ಲಿ ನಿಂತುಕೊಂಡು ಪರಿಚಿತರ ಮುಖಕ್ಕೆ ಬಣ್ಣ ಹಚ್ಚಿ ಖುಷಿಪಟ್ಟರು.

ಸಿಳ್ಳೆ, ಕೇಕೆ ಹೊಡೆಯುವುದು ಸಾಮಾನ್ಯವಾಗಿತ್ತು. ಇನ್ನೂ ಕೆಲವರು ಹಲಗೆ ಬಾರಿಸುತ್ತಲೇ ಅದರ ತಾಳಕ್ಕೆ ಹೆಜ್ಜೆ ಹಾಕಿ ಖುಷಿಪಟ್ಟರು. ಮೈ ತುಂಬ ಬಣ್ಣ ಎರಚಿಕೊಂಡು ನೃತ್ಯ ಮಾಡಿ ಸಂಭ್ರಮಿಸಿದರು.

ವಿಶಿಷ್ಟ ಆಚರಣೆ:ಕುಷ್ಟಗಿ ಗೆಳೆಯರ ಬಳಗದಿಂದ ಬಸ್ ನಿಲ್ದಾಣದ ಪಕ್ಕದ ಖಾಲಿ ಜಾಗದಲ್ಲಿ ಹೋಳಿ ಹಬ್ಬದ ಅಂಗವಾಗಿ ಬಣ್ಣದಾಟವಾಡಲು ಸಿದ್ಧತೆ ಮಾಡಲಾಗಿತ್ತು. ಶಾಸಕ ದೊಡ್ಡನಗೌಡ ಪಾಟೀಲ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಹಿರಿಯರು,ಕಿರಿಯರು ಯಾವುದೆ ಬೇಧವಿಲ್ಲದೇ ಎಲ್ಲರೂ ಸಂಭ್ರಮದಿಂದ ಪಾಲ್ಗೊಂಡು ಖುಷಿಯಿಂದಲೇ ಬಣ್ಣದಲ್ಲಿ ಮುಳುಗಿದರು. ಚಿಕ್ಕಮಕ್ಕಳು ಸಂತಸದಿಂದ ಪಾಲ್ಗೊಂಡಿದ್ದರು. ಮಹಿಳೆಯರು ತಮ್ಮ ಮನೆಯ ಮುಂದೆ ಇರುವ ಜನರೊಂದಿಗೆ ಪರಸ್ಪರ ಬಣ್ಣ ಎರಚಿ ಕುಣಿದು ಕುಪ್ಪಳಿಸಿ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಕಾಮದಹನ:ಮಂಗಳವಾರ ರಾತ್ರಿ ಪಟ್ಟಣ ಸೇರಿದಂತೆ ತಾಲೂಕಿನ ಅನೇಕ ಗ್ರಾಮಗಳಲ್ಲಿ ಹೋಳಿ ಹುಣ್ಣಿಮೆ ಅಂಗವಾಗಿ ಕಾಮದಹನ ಮಾಡುವ ಮೂಲಕ ಹೋಳಿ ಆಚರಿಸಿದರು.

ಕುಷ್ಟಗಿ ಗೆಳೆಯರ ಬಳಗದಿಂದ ಆಯೋಜನೆ ಮಾಡಿದ ಹೋಳಿ ಆಚರಣೆಯಲ್ಲಿ ಶಾಸಕ ದೊಡ್ಡನಗೌಡ ಪಾಟೀಲ ಭಾಗವಹಿಸಿ ಮಾತನಾಡಿ, ಸನಾತನ ಕಾಲದಿಂದಲೂ ಹೋಳಿ ಹಬ್ಬದ ಅಂಗವಾಗಿ ನಡೆದುಕೊಂಡು ಬಂದಿರುವ ಹಬ್ಬವನ್ನು ವಿಶಿಷ್ಟವಾಗಿ ಆಚರಣೆ ಮಾಡಬೇಕೆಂಬ ಉದ್ದೇಶದಿಂದ ಕುಷ್ಟಗಿ ಗೆಳೆಯರ ಬಳಗದಿಂದ ಆಯೋಜನೆ ಮಾಡಿದ್ದು ಸಂತಸದ ಸಂಗತಿಯಾಗಿದ್ದು ಮುಂದಿನ ವರ್ಷ ಮತ್ತಷ್ಟು ವಿಶಿಷ್ಟವಾಗಿ ಆಚರಣೆ ಮಾಡಲು ಮುಂದಾಗೋಣ ಎಂದರು.

ದೊಡ್ಡಬಸವನಗೌಡ ಪಾಟೀಲ ಬಯ್ಯಾಪೂರ ಮಾತನಾಡಿ, ಸಂಕಷ್ಟ ದೂರ ಮಾಡಿ ಬದುಕನ್ನು ವರ್ಣಮಯಗೊಳಿಸುವ ಹಬ್ಬ ಹೋಳಿ ಹಬ್ಬವಾಗಿದೆ.ಇದರಿಂದ ಈ ಹಬ್ಬದಲ್ಲಿ ಜಾತಿಬೇಧ ಮರೆತು ಎಲ್ಲರೂ ಬಣ್ಣವಾಡುತ್ತಾರೆ ಕುಷ್ಟಗಿ ಗೆಳೆಯರ ಬಳಗದಿಂದ ಈ ವರ್ಷ ವಿಶಿಷ್ಟವಾಗಿ ಹೋಳಿ ಹಬ್ಬದ ಆಚರಣೆಗೆ ಮುಂದಾಗಿದ್ದು ಹೊಸ ಸಂಪ್ರದಾಯ ಹಾಕಿಕೊಟ್ಟಂತಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ದೊಡ್ಡನಗೌಡ ಪಾಟೀಲ, ದೊಡ್ಡಬಸವನಗೌಡ ಬಯ್ಯಾಪೂರ, ವಜೀರಅಲಿ ಗೋನಾಳ, ಶಶಿಧರ ಕವಲಿ, ಗುಣಶೀಲಶೆಟ್ಟಿ, ಕೆ.ಮಹೇಶ, ಕಲ್ಲೇಶ ತಾಳದ, ನಾಗರಾಜ ಮೇಲಿನಮನಿ, ಪರಶುರಾಮ ನಾಗರಾಳ, ಬಸನಗೌಡ ಪಾಟೀಲ, ಉಮೇಶ ಮಂಗಳೂರು ಸೇರಿದಂತೆ ಹಲವರು ಇದ್ದರು.

ವಿವಿಧ ಇಲಾಖೆಯ ಅಧಿಕಾರಿಗಳು ಹೋಳಿ ಹಬ್ಬಆಚರಿಸಿ ಸಂಭ್ರಮಿಸುತ್ತಿರುವದು ಕಂಡು ಬಂತು. ಅಹಿತಕರ ಘಟನೆಗಳು ನಡೆಯದಂತೆ ಸಿಪಿಐ ವಿಶ್ವನಾಥ ಹಿರೇಗೌಡರ, ಪಿಎಸೈ ಹನಮಂತಪ್ಪ ತಳವಾರ ನೇತೃತ್ವದಲ್ಲಿ ಬಂದೊಬಸ್ತ್ ಒದಗಿಸಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಳಿ ಸಮುದಾಯದ ಮಕ್ಕಳಿಂದ ಗೌರಿ ದಬಾಳ್
ರಾಜ್ಯ ಬಜೆಟ್‌ ಮೇಲೆ ಕೊಪ್ಪಳದ್ದು ಬೆಟ್ಟದಷ್ಟು ನಿರೀಕ್ಷೆ