ಕನ್ನಡಪ್ರಭ ವಾರ್ತೆ ಶಿರಸಿ
ನದಿ ತಿರುವು ಯೋಜನೆಗಳಿಂದ ಪರಿಸರ ನಾಶವಾಗುವುದಲ್ಲದೆ ಸ್ಥಳೀಯ ಜನಜೀವನಕ್ಕೂ ಗಂಭೀರ ಧಕ್ಕೆಯಾಗುತ್ತದೆ. ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಅಭಿವೃದ್ಧಿ ಹೆಸರಿನಲ್ಲಿ ಪ್ರಕೃತಿಗೆ ಹಾನಿ ಉಂಟುಮಾಡುವ ಯೋಜನೆ ಸರ್ಕಾರ ಕೈಬಿಡಬೇಕು. ಈ ಕಾರಣದಿಂದಲೇ ನದಿ ತಿರುವು ಯೋಜನೆಯನ್ನು ವಿರೋಧಿಸುವುದು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.ಸಮಾಜದಲ್ಲಿ ಮೌಲ್ಯಗಳ ಬೆಳವಣಿಗೆಗೆ ಕುಟುಂಬದ ಪಾತ್ರ ಅತ್ಯಂತ ಮುಖ್ಯ. ಹಿಂದುತ್ವದ ಅರ್ಥವನ್ನು ತಪ್ಪಾಗಿ ಗ್ರಹಿಸುವ ಪ್ರವೃತ್ತಿ ಇತ್ತೀಚೆಗೆ ಹೆಚ್ಚುತ್ತಿರುವುದು ವಿಷಾದನೀಯ. ಹಿಂದುತ್ವವು ವಿಭಜನೆಯಲ್ಲ, ಏಕತೆಯ ಸಂದೇಶವನ್ನು ಸಾರುವ ಜೀವನಮಾರ್ಗವಾಗಿದೆ. ಮನೆಗಳಲ್ಲಿ ಮಕ್ಕಳಿಗೆ ಸನಾತನ ಸಂಸ್ಕೃತಿ, ನೀತಿ-ನಿಷ್ಠೆ, ಪರಸ್ಪರ ಗೌರವ ಮತ್ತು ದೇಶಭಕ್ತಿ ಬೋಧನೆಯಾದರೆ ಸಮಾಜ ಸುಸಂಘಟಿತವಾಗುತ್ತದೆ.
ಹಿಂದುತ್ವವು ಯಾವುದೇ ಜಾತಿಯ ಚೌಕಟ್ಟಿಗೆ ಸೀಮಿತವಾಗಿರುವುದಿಲ್ಲ. ಅದು ಮನೆಮನೆಗಳಲ್ಲಿ ನೀಡಲಾಗುವ ಉತ್ತಮ ಸಂಸ್ಕಾರದ ಒಟ್ಟು ಫಲವಾಗಿದೆ ಎಂದು ಹೇಳಿದರು.ರಾಷ್ಟ್ರೀಯ ಸ್ವಯಂಸೇವಕ ಸಂಘ ಶಿರಸಿ ವಿಭಾಗದ ಬೌದ್ಧಿಕ ಪ್ರಮುಖ ಮಧುಸೂದನ ಕಿರುಗಾರ ದಿಕ್ಸೂಚಿ ಭಾಷಣ ಮಾಡಿ, ಇತ್ತೀಚಿನ ವರ್ಷಗಳಲ್ಲಿ ಹಿಂದುಗಳ ಜನಸಂಖ್ಯೆ ಕುಸಿಯುತ್ತಿರುವುದು ಚಿಂತಾಜನಕ ಬೆಳವಣಿಗೆ. ಇದೇ ಸ್ಥಿತಿ ಮುಂದುವರಿದರೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಗಳಿಗೆ ಧಕ್ಕೆಯಾಗಬಹುದು. ಹೀಗಾಗಿ ಸಮಾಜ ಸಂಘಟಿತವಾಗಿ ಜಾಗೃತಿ ಮೂಡಿಸಿ ಹಿಂದು ಜನಸಂಖ್ಯೆ ಹೆಚ್ಚಳದ ಕುರಿತು ಚಿಂತನೆ ನಡೆಸಬೇಕು ಎಂದು ಹೇಳಿದರು.ಹಿಂದೂ ಸಮಾಜೋತ್ಸವದ ಅಂಗವಾಗಿ ಶಿಕ್ಷಣ, ಕೃಷಿ, ಸಮಾಜಸೇವೆ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ 25 ಸ್ಥಳೀಯ ನಾಗರಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.