- ಮತಗಟ್ಟೆ ಅಧಿಕಾರಿಗಳ ತರಬೇತಿ ಶಿಬಿರದಲ್ಲಿ ಭಾವನಾ ಬಸವರಾಜ್ - - - ಕನ್ನಡಪ್ರಭ ವಾರ್ತೆ ಹರಿಹರ
ನಗರದ ಸೆಂಟ್ ಮೇರಿಸ್ ಕಾನ್ವೆಂಟ್ ಶಾಲೆಯಲ್ಲಿ ಮಂಗಳವಾರ ನಡೆದ ಮತಗಟ್ಟೆ ಅಧಿಕಾರಿಗಳ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಚುನಾವಣೆ ಎನ್ನುವುದು ಒಂದು ಮಹತ್ತರವಾದ ಪಾತ್ರ ನಿರ್ವಹಿಸುತ್ತದೆ. ಇಂತಹ ಕಾರ್ಯದಲ್ಲಿ ತೊಡಗಿಸಿಕೊಂಡ ತಾವುಗಳು ತಮ್ಮ ಜವಾಬ್ದಾರಿ ಅರಿತು ಕೇಲಸ ನಿರ್ವಹಿಸಬೇಕು ಎಂದರು.
ಮತದಾನದ ಸಂದರ್ಭ ಮತಗಟ್ಟೆ ಅಧಿಕಾರಿಗಳು ಮತದಾರರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳುವುದು ಅತಿ ಮುಖ್ಯ. ಈ ಹಿನ್ನೆಲೆ ಎಲ್ಲ ಮತಗಟ್ಟೆಗಳ ಅಧಿಕಾರಿಗಳು ಉತ್ತಮವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.ಮಂಗಳವಾರ ನಡೆದ ಮತಗಟ್ಟೆ ಅಧಿಕಾರಿಗಳ ತರಬೇತಿ ಶಿಬಿರದಲ್ಲಿ ೧೨೦೦ ಅಧಿಕಾರಿಗಳು ಭಾಗವಹಿಸಿದ್ದು, ಇವಿಎಂ ಯಂತ್ರವನ್ನು ಯಾವ ರೀತಿಯಲ್ಲಿ ಮತದಾನಕ್ಕೆ ತಯಾರಿ ಮಾಡಬೇಕು ಎನ್ನುವುದನ್ನು ಪ್ರಾಯೋಗಿಕವಾಗಿ ತೋರಿಸಲಾಯಿತು.
ಪೋಸ್ಟಲ್ ಬ್ಯಾಲೆಟ್ಗಳ ಮೂಲಕ ಕರ್ತವ್ಯನಿರತ ಅಧಿಕಾರಿಗಳಿಗೆ ಮತದಾನ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ತಹಸೀಲ್ದಾರ್ ಸೇರಿದಂತೆ ಒಟ್ಟು ೭೧ ಅಧಿಕಾರಿಗಳು ಮಂಗಳವಾರ ಮತದಾನ ಮಾಡಿದರು.
- - - -೩೦ಎಚ್ಆರ್ಆರ್೪:
ಹರಿಹರ ನಗರದ ಸೆಂಟ್ ಮೇರಿಸ್ ಕಾನ್ವೆಂಟ್ ಶಾಲೆಯಲ್ಲಿ ಮಂಗಳವಾರ ನಡೆದ ಮತಗಟ್ಟೆ ಅಧಿಕಾರಿಗಳ ತರಬೇತಿ ಶಿಬಿರದಲ್ಲಿ ಅಧಿಕಾರಿಗಳು ಭಾಗವಹಿಸಿ, ಮಾಹಿತಿ ಪಡೆದುಕೊಂಡರು.