ಹುಬ್ಬಳ್ಳಿ:
ರಾಜ್ಯಸಭಾ ಸದಸ್ಯ, ಕ್ಲಸ್ಟರ್ ಪ್ರಮುಖ ಈರಣ್ಣ ಕಡಾಡಿ, ಜವಾಬ್ದಾರಿ ಕುರಿತು ಯಾವ ರೀತಿ ನಿರ್ವಹಿಸಿಕೊಂಡು ಹೋಗಬೇಕೆಂದು ಪ್ರತ್ಯೇಕವಾಗಿ ವಿವರಿಸಿದರು.ಪ್ರತಿಯೊಂದು ವಿಭಾಗ ತನ್ನದೇ ಆದ ಮಹತ್ವ ಹೊಂದಿರುತ್ತದೆ. ನೀವೆಲ್ಲರೂ ಚುನಾವಣೆಯ ಮುಖ್ಯ ವಾಹಿನಿಯಲ್ಲಿರುತ್ತೀರಿ ಎಂದ ಈರಣ್ಣ, ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಾಗೂ ಕಳೆದ 10 ವರ್ಷದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಜನಪರ ಯೋಜನೆಗಳನ್ನು ಮನೆ-ಮನೆಗೆ ಹೋಗಿ ಕರಪತ್ರ ನೀಡುವ ಮೂಲಕ ಜನರಿಗೆ ತಿಳಿಸಬೇಕೆಂದು ಕರೆ ನೀಡಿದರು.ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಿಗೆ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಾಂತರ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ, ಮಹಾನಗರ ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ, ವಿಜಯಾನಂದ ಶೆಟ್ಟಿ, ಶಿವು ಮೆಣಸಿನಕಾಯಿ, ಮಹೇಂದ್ರ ಕೌತಾಳ, ಮಾಲತೇಶ ಶ್ಯಾಗೋಟಿ, ಶಿವಾನಂದ ಗುಂಡಗೋವಿ, ಬಸವರಾಜ ಕುಂದಗೋಳಮಠ, ಸಂಜಯ್ ಕಪಟಕರ, ಜಯತೀರ್ಥ ಕಟ್ಟಿ, ರಂಗಾ ಬದ್ದಿ, ಸಿದ್ದು ಮೊಗಲಿಶೆಟ್ಟರ್, ರವಿ ನಾಯಕ, ಸೀಮಾ ಲದ್ವಾ, ಚೈತ್ರ ಶಿರೂರು, ರಾಜೇಶ್ವರಿ ಸಾಲಗಟ್ಟಿ, ಮೇನಕಾ ಹುರಳಿ, ಅನುರಾಧ ಚಿಲ್ಲಾಳ, ಶಾಂತಕ್ಕ ನಿಡವಣಿ ಬಸಮ್ಮ ಹುಬ್ಬಳ್ಳಿ ಇದ್ದರು.