ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ
ಲಯನ್ಸ್ ಸಂಸ್ಥೆ ಕಡಿಮೆ ದರದಲ್ಲಿ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಬಾರಿ ನಮ್ಮ ಕಾಲೇಜಿನ 9 ವಿದ್ಯಾರ್ಥಿಗಳು ಐಐಟಿ, ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಹೊಂದಿರುವುದು ಹೆಮ್ಮೆ ತಂದಿದೆ. ಇಂದು ಕಾರ್ಯಕ್ರಮದಲ್ಲಿ 7 ಮಂದಿಯನ್ನು ಅಭಿನಂದಿಸಲಾಗಿದೆ. ಇದೇ ರೀತಿ ಮುಂದಿನ ಪರೀಕ್ಷೆಗಳಲ್ಲೂ ಸಂಸ್ಥೆಯ ವಿದ್ಯಾರ್ಥಿಗಳು ಸಾಧನೆಗೈದು ಪೋಷಕರು ಹಾಗೂ ಕಲಿಸಿದ ಗುರುಗಳಿಗೆ ಹೆಮ್ಮೆ ತರುವ ಕೆಲಸ ಮಾಡಬೇಕು ಎಂದರು.ಸಂಸ್ಥೆಯ ವಿದ್ಯಾರ್ಥಿಗಳು 10ನೇ ತರಗತಿ ಹಾಗೂ ಪಿಯುಸಿ ವಿಭಾಗದಲ್ಲೂ ಈ ಬಾರಿ ಉತ್ತಮ ಫಲಿತಾಂಶ ಗಳಿಸಿದ್ದಾರೆ, ಕಳೆದ ಬಾರಿ 2022, 23ನೇ ಸಾಲಿನಲ್ಲಿ ನಮ್ಮ ಸಂಸ್ಥೆಯ ರಮಿತ್ ಗೌಡ ಎಂಬ ವಿದ್ಯಾರ್ಥಿ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಉತ್ತರ ಪ್ರದೇಶದ ಕಾನ್ಪುರ್ನಲ್ಲಿ ಏರೋಸ್ಪೇಸ್ ಇಂಜಿನಿಯರಿಂಗ್ಗೆ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದರು.ಇದೇ ವೇಳೆ ಉಪನ್ಯಾಸಕ ಶ್ಯಾಮ್ ಕುಮಾರ್ ಮಾತನಾಡಿ, ರಮಿತ್ ಗೌಡ ಸಾಧನೆ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ ಉದಾಹರಣೆಯಾಗಬೇಕು ಎಂದರು. ಸಾಧಕ 9 ಮಂದಿ ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ತೇರ್ಗಡೆಹೊಂದುವ ಮೂಲಕ ಸಂಸ್ಥೆಗೆ ಹಾಗೂ ಪೋಷಕರಿಗೆ ಕೀರ್ತಿ ತರುವ ವಿಶ್ವಾಸ ನನಗಿದೆ ಎಂದರು. ಈ ಸಂದರ್ಭದಲ್ಲಿ ಸಂಸ್ಥೆಯ ಖಜಾಂಚಿ ಗಿರಿರಾಜನ್, ಪ್ರಾಂಶುಪಾಲೆ ವಿನುತ, ಉಪನ್ಯಾಸಕರಾದ ಪ್ರಸನ್ನಕುಮಾರ್, ಸ್ಮೀಫನ್ ಪುಷ್ಪರಾಜ್, ಪವನ್ ರಾಜು, ಹರೀಶ್ ಇತರರಿದ್ದರು.