ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಮೇಳದ ಯಜಮಾನರಾದ ಡಿ . ಹರ್ಷೇಂದ್ರಕುಮಾರ್ ಮಾರ್ಗದರ್ಶನದಲ್ಲಿ ಮೇಳದ ಪ್ರಬಂಧಕರಾದ ಗಿರೀಶ ಹೆಗ್ಡೆ ಮತ್ತು ಪುಷ್ಪರಾಜ ಶೆಟ್ಟಿ ಅವರ ಸಲಹೆಯಂತೆ ಪ್ರಧಾನ ಭಾಗವತ ರಾಮಕೃಷ್ಣ ಮಯ್ಯ ಸಿರಿಬಾಗಿಲು ಅವರು ಪ್ರಸಂಗವನ್ನು ಸಂಯೋಜಿಸಿ, ಪಟ್ಟಾಭಿಷೇಕದ ದೃಶ್ಯಾವಳಿಯನ್ನು ವಿಶೇಷವಾಗಿ ಆಯೋಜಿಸಲಾಯಿತು.
ಶ್ರೀರಾಮನ ಪಾತ್ರ ನಿರ್ವಹಿಸಿದ ಹಿರಿಯ ಕಲಾವಿದ ಉಜಿರೆ ಅಶೋಕ ಭಟ್ ಶ್ರೀರಾಮಚಂದ್ರನ ಆದರ್ಶ, ರಾಮರಾಜ್ಯ ಕಲ್ಪನೆ, ಸಮಾಜದ ಉದ್ಧಾರ ಮೊದಲಾದ ವಿಷಯಗಳನ್ನು ಪ್ರಧಾನವಾಗಿ ಪ್ರಸ್ತಾವಿಸಿ ಸಮಾಜಕ್ಕೆ ಉತ್ತಮ ಸಂದೇಶ ನೀಡಿದರು. ಮೇಳದ ಹಿತೈಷಿ, ಅಭಿಮಾನಿಗಳಾದ ದಾಮೋದರ್ ಶರ್ಮ ಬಾರ್ಕೂರು, ಸೇವಾಕರ್ತರಾದ ಕೃಷ್ಣಮೂರ್ತಿ ನಾವಡ ಕಟ್ಕೆರೆ ಮುಂತಾದವರು ವಿವಿಧ ಪಾತ್ರದಲ್ಲಿ ರಂಗದಲ್ಲಿ ಕಾಣಿಸಿಕೊಂಡರು. ಮೇಳದ ಮ್ಯಾನೇಜರ್ ಗಿರೀಶ್ ಹೆಗಡೆ ಮತ್ತು ಪುಷ್ಪರಾಜ ಶೆಟ್ಟಿ ವಿಶೇಷವಾಗಿ ಭರತ ಮತ್ತು ಲಕ್ಷ್ಮಣನ ಪಾತ್ರ ನಿರ್ವಹಿಸಿದರು. ಮೇಳದ ಹಿರಿಯ, ಕಿರಿಯ ಎಲ್ಲ ಕಲಾವಿದರು ,ಸಿಬ್ಬಂದಿಗಳು ಉತ್ಸಾಹದಿಂದ ಸಂಭ್ರಮದಲ್ಲಿ ಭಾಗಿಗಳಾದರು. ಯಕ್ಷಗಾನ ಸೇವಾ ಬಯಲಾಟದಲ್ಲಿ ಇದೊಂದು ಅಪೂರ್ವ ಉತ್ಸವವಾಗಿ ಪ್ರೇಕ್ಷಕರನ್ನು ಬೆರಗುಗೊಳಿಸಿತು.