ಅಳ್ನಾವರ:
ವಿನಾಯಕ ಕುರುಬರ ಹೇಳಿದರು.
ಸಮೀಪದ ಬೆಣಚಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ನಡೆದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಸಾರ್ವಜನಿಕರು ಅಹವಾಲು ಆಲಿಸಿದ ನಂತರ ಅವರು ಮಾತನಾಡಿದರು. ಯೋಜನೆಯ ಪರಿಣಾಮಕಾರಿ ಜಾರಿಗೆ ಗ್ರಾಮಮಟ್ಟದಲ್ಲಿ ಸಭೆ ಆಯೋಜಿಸಲಾಗುತ್ತಿದೆ. ಗ್ರಾಮಸ್ಥರು ಇದರ ಲಾಭ ಪಡೆದುಕೊಳ್ಳಿ ಎಂದರು.ತಾಲೂಕು ಪಂಚಾಯಿತಿ ಇಒ ಪ್ರಶಾಂತ ತುರ್ಕಾಣಿ ಮಾತನಾಡಿ, ಗ್ರಾಮೀಣ ಭಾಗದ ಸಾರಿಗೆ ವ್ಯವಸ್ಥೆ ಸರಿದೂಗಿಸಲು ಹೆಚ್ಚುವರಿ ಬಸ್ ಅವಶ್ಯಕತೆ ಇದೆ. ಇದರ ಬಗ್ಗೆ ಸಾರಿಗೆ ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು. ಸಭೆಯಲ್ಲಿ ಕೇಳಿ ಬಂದ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಲಾಗುವುದು, ಪಂಚ ಗ್ಯಾರಂಟಿ ಯೋಜನೆ ಎಲ್ಲರಿಗೂ ಸರಿಯಾಗಿ ತಲುಪಲು ಒತ್ತು ನೀಡಲಾಗಿದೆ ಎಂದು ಹೇಳಿದರು.
ಪಂಚ ಗ್ಯಾರಂಟಿ ಯೋಜನೆಯ ಪ್ರಗತಿ ಬಗ್ಗೆ ವಿವಿಧ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಸ್ಥಿತಿವಂತರು ಬಿಪಿಎಲ್ ಕಾರ್ಡ್ ಹೊಂದಿದ್ದಲ್ಲಿ ಇಲಾಖೆಗೆ ಸ್ವಯಂ ಇಚ್ಛೆಯಿಂದ ಮರಳಿ ನೀಡಿ, ಅರ್ಹ ಫಲಾನುಭವಿಗಳಿಗೆ ಯೋಜನೆಯು ದೊರೆಯಲು ಸಹಕರಿಸಬೇಕು ಎಂದು ಆಹಾರ ಇಲಾಖೆಯ ವಿನಾಯಕ ದೀಕ್ಷಿತ ಹೇಳಿದರು.
ಗ್ರಾಪಂ ಅಧ್ಯಕ್ಷೆ ಗಂಗವ್ವ ಮುಷ್ಟಗಿ, ಉಪಾಧ್ಯಕ್ಷ ಅಲ್ಲಾಭಕ್ಷ ಬಡಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಸುಧಾ ಶಿರೋಳಕರ, ಪಿಡಿಒ ನಾಗರಾಜ ಪುಡಕಲಕಟ್ಟಿ, ಶೈಲಾ ಹಿರೇಮಠ, ಸಲೀಂ ತಡಕೋಡ, ಎಂ.ಕೆ. ಭಾಗವಾನ, ಸುರೇಶಗೌಡ ಪಾಟೀಲ, ಹೆಸ್ಕಾಂ ಎಇಇ ಗುಲ್ಜಾರಅಹ್ಮದ್ ಮುಲ್ಲಾ, ನಾರಾಯಣ ಹರಿಜನ್, ಜಯಶ್ರೀ ದಬಾಲಿ, ಅನುಸುಯಾ ಶೀಲಿ, ರುಕ್ಮೀಣಿ ಕಂಚನೋಳಕರ ಬಸವರಾಜ ಬೈಲೂರ ಇದ್ದರು.