ವಿದ್ಯಾರ್ಥಿ ಜೀವನದಲ್ಲೇ ವ್ಯಕ್ತಿತ್ವ ನಿರ್ಮಾಣ: ಡಾ. ತುಕಾರಾಮ ಪೂಜಾರಿ

KannadaprabhaNewsNetwork |  
Published : Aug 07, 2026, 03:00 AM IST
ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಸಂಘಗಳ ಚಟುವಟಿಕೆಗಳಿಗೆ ಚಾಲನೆ | Kannada Prabha

ಸಾರಾಂಶ

Personality Building During Student Life: Dr. Tukaram Poojari

ಮೂಡುಬಿದಿರೆ: ವಿದ್ಯಾರ್ಥಿ ಜೀವನವೇ ವ್ಯಕ್ತಿತ್ವ ರೂಪುಗೊಳ್ಳುವ ಅತ್ಯಂತ ಮಹತ್ವದ ಹಂತವಾಗಿದ್ದು, ಈ ಅವಧಿಯಲ್ಲಿ ಬೆಳೆಸಿಕೊಳ್ಳುವ ಓದುವ ಹವ್ಯಾಸ, ಸೃಜನಶೀಲತೆ ಹಾಗೂ ಸಾಮಾಜಿಕ ಜವಾಬ್ದಾರಿಯ ಪ್ರಜ್ಞೆ ಭವಿಷ್ಯದ ಯಶಸ್ವಿ ಬದುಕಿಗೆ ಭದ್ರ ಬುನಾದಿಯಾಗುತ್ತದೆ ಎಂದು ಖ್ಯಾತ ಸಂಶೋಧಕ ಡಾ. ತುಕಾರಾಮ ಪೂಜಾರಿ ಹೇಳಿದರು.

ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಲಾ ಸಂಘ, ಸಾಹಿತ್ಯ ಸಂಘ, ಮತದಾರರ ಸಾಕ್ಷರತಾ ಸಂಘ ಹಾಗೂ ರೋವರ್ಸ್-ರೇಂಜರ್ಸ್ ಘಟಕಗಳ ಈ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಜ್ಞಾನದೊಂದಿಗೆ ಜೀವನ ಮೌಲ್ಯಗಳ ಅರಿವು ಸಹ ಅಷ್ಟೇ ಅಗತ್ಯ ಎಂದರು.

ಓದುವ ಹವ್ಯಾಸವು ಜ್ಞಾನವನ್ನು ವಿಸ್ತರಿಸುವುದರ ಜೊತೆಗೆ ಕಲ್ಪನಾ ಶಕ್ತಿ ಮತ್ತು ಸೃಜನಶೀಲತೆಗೆ ಹೊಸ ದಿಕ್ಕು ನೀಡುತ್ತದೆ. ಬದುಕಿನಲ್ಲಿ ಕೇವಲ ಅಂಕ ಗಳಿಕೆಯೇ ಯಶಸ್ಸಿನ ಮಾನದಂಡವಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನಲ್ಲಿರುವ ಪ್ರತಿಭೆ, ಆಸಕ್ತಿ ಹಾಗೂ ಸೃಜನಶೀಲತೆಯನ್ನು ಗುರುತಿಸಿ ಬೆಳೆಸಿಕೊಳ್ಳುವ ಮೂಲಕ ಸಮಾಜಕ್ಕೆ ಉಪಯುಕ್ತ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಝಾನ್ಸಿ ಪಿ.ಎನ್. ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಪಡೆಯುವ ಅನುಭವಗಳು ಜೀವನದ ಅಮೂಲ್ಯ ಸಂಪತ್ತಾಗಿದ್ದು, ‘ಅನುಭವ ಸಿಹಿ ಅಲ್ಲ, ಅದರ ನೆನಪೇ ಸಿಹಿ’ ಎಂಬ ಮಾತು ಜೀವನದ ಸತ್ಯವನ್ನು ಪ್ರತಿಬಿಂಬಿಸುತ್ತದೆ ಎಂದರು.

ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ., ಕಲಾ ವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ, ವಿವಿಧ ಸಂಘಗಳ ಸಂಯೋಜಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಪ್ತಮಿ ಸ್ವಾಗತಿಸಿ, ಮಧು ಅತಿಥಿಯನ್ನು ಪರಿಚಯಿಸಿದರು. ಲಿಖಿತ ನಿರೂಪಿಸಿ, ಶ್ರವಣ್ ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೀವನ ಕಟ್ಟಿಕೊಳ್ಳಿ; ವ್ಯಸನ ಅಲ್ಲ: ರಾಜೇಂದ್ರ ಬಿ.
ಬರಹ ಪಠ್ಯಕ್ಕೆ ಸೀಮಿತ ಆಗದಿರಲಿ: ಡಾ.ರಾಜೇಶ್‌