ಕನ್ನಡಪ್ರಭ ವಾರ್ತೆ ಕಾಗವಾಡ
ರಾಜಸ್ಥಾನದ ತಿಜಾರಾ ಜೈನ ಮಠದ ಸ್ವಸ್ತಿಶ್ರೀ ಸೌರಭಸೇನ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಮಾತನಾಡಿ, ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಪ್ರಸಿದ್ದಿ ಹೊಂದಿರುವ ಉಗಾರ ಶ್ರೀ ಪದ್ಮಾವತಿ ದೇವಿಯ ದೇವಸ್ಥಾನ ಜಾಗೃತ ದೇವಸ್ಥಾನವಾಗಿದೆ. ಇಲ್ಲಿ ಬಂದು ಹೋಗುವ ಶ್ರಾವಕ, ಶ್ರಾವಕಿಯರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಯಾತ್ರಿ ನಿವಾಸ, ಭವನ ನಿರ್ಮಿಸಿರುವ ಧರ್ಮದರ್ಶಿ ಶೀತಲಗೌಡ ಪಾಟೀಲರಿಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ಹೇಳಿದರು. ಅಲ್ಲದೇ, ತಾಯಿಯ ಆಶೀರ್ವಾದ ಎಲ್ಲರ ಮೇಲಿರಲಿ ಎಂದು ಹಾರೈಸುತ್ತೇನೆ ಎಂದರು.ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ ಸೌಂದಾಮ ಹುಮಚಾ ಮಠಗಳ ವಾತಾವರಣ ಈಗ ಉಗಾರ ಪದ್ಮಾವತಿ ಮಂದಿರಲ್ಲಿ ನಿರ್ಮಾಣವಾಗಿದೆ. ಧಾರ್ಮಿಕ ಕಾರ್ಯದಲ್ಲಿ ಹೆಸರು ಉಳಿಯಬೇಕಾದರೆ ಕೆ.ಎ.ವನಜೋಳ ಅವರ ಹಾಗೆ ಧರ್ಮ ಕಾರ್ಯದಲ್ಲಿ ಕೈ ಜೋಡಿಸಬೇಕಾಗುತ್ತದೆ. ನಾನು ಮತ್ತು ಶಾಸಕ ಅಭಯ ಪಾಟೀಲರು ಧರ್ಮದ ಕೆಲಸಲ್ಲಿ ಕೈ ಜೋಡಿಸುವುದಾಗಿ ಭರವಸೆ ನೀಡಿದರು.ದೇವಸ್ಥಾನದ ಧರ್ಮದರ್ಶಿ ಶೀತಲಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಅತಿಥಿಗಳಾಗಿ ಮಾಜಿ ಶಾಸಕರಾದ ಕಲ್ಲಪ್ಪ ಮಗೆಣ್ಣವರ, ಮೋಹನರಾವ್ ಶಹಾ, ಸಂಜಯ ಪಾಟೀಲ, ಮಹಾವೀರ ನಿಲಜಗಿ, ಡಾ.ಮಹಾವೀರ ದಾನಿಗೊಂಡ, ಬಾಹುಬಲಿ ನಾಗನೂರಿ, ಸುನೀಲ ಪಾಟೀಲ, ಮಹಾವೀರ ಕಾತ್ರಾಳೆ, ಸಂಜಯ ನಾಡಗೌಡ, ಅಭಯಕುಮಾರ ಅಕಿವಾಟೆ, ಅಶೋಕ ಚೌಗುಲೆ, ಕಲ್ಲಪ್ಪ ವನಜೋಳ, ಎಂ.ಎಚ್.ನಂದಗಾಂವ, ಸಂಜಯ ಕುಚನೂರೆ, ಮಹೇಂದ್ರ ಖೇಮಲಾಪೂರೆ, ಡಾ,ನೀರಜಾ ನಾಗೇಂದ್ರಕುಮಾರ, ಬಮ್ಮಣ್ಣ ಚೌಗಲೆ, ವರ್ಧಮಾನ ಕೋರಿ, ಪ್ರದೀಪ ಚಿಂಚವಾಡೆ,ಆದಿನಾಥ ವಸವಾಡೆ ಉಪಸ್ಥಿತರಿದ್ದರು. ಈ ವೇಳೆ ಮಹಾದಾನಿಗಳನ್ನು ಸನ್ಮಾನಿಸಲಾಯಿತು.ವಜ್ರಕುಮಾರ ಮಗದುಮ್ ಸ್ವಾಗತಿಸಿ, ವಂದಿಸಿದರು.