ವ್ಯಕ್ತಿತ್ವ ಆಸ್ತಿ ಅಂತಸ್ತಿನಲ್ಲಿ ಇಲ್ಲ: ರಂಭಾಪುರಿ ಶ್ರೀ

KannadaprabhaNewsNetwork |  
Published : May 13, 2025, 01:26 AM IST
೧೨ಬಿಹೆಚ್‌ಆರ್ ೩: ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಪೌರ್ಣಿಮೆ ಸಂದರ್ಭದಲ್ಲಿ ಹರಿಹರ ತಾಲೂಕಿನ ನಿಟ್ಟೂರು ಗ್ರಾಮದಿಂದ ಆಗಮಿಸಿದ ಆಂಜನೇಯ ಸ್ವಾಮಿ ಪಲ್ಲಕ್ಕಿ ಉತ್ಸವ ನಡೆಯಿತು. | Kannada Prabha

ಸಾರಾಂಶ

ಬಾಳೆಹೊನ್ನೂರು: ಹಣ ಕಳೆದರೆ ಮತ್ತೆ ಗಳಿಸಬಹುದು. ಆದರೆ ಮಾತಿನಿಂದ ಕಳೆದುಕೊಂಡ ಸಂಬಂಧ ತಿರುಗಿ ಪಡೆಯಲಾಗದು. ವ್ಯಕ್ತಿತ್ವ ಅನ್ನುವುದು ಆಸ್ತಿ ಅಂತಸ್ತಿನಲ್ಲಿ ಇರುವುದಿಲ್ಲ. ಅದು ಆಲೋಚನೆ ಮತ್ತು ಆಚರಣೆಗಳಲ್ಲಿ ಇರುತ್ತದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.

ಬಾಳೆಹೊನ್ನೂರು: ಹಣ ಕಳೆದರೆ ಮತ್ತೆ ಗಳಿಸಬಹುದು. ಆದರೆ ಮಾತಿನಿಂದ ಕಳೆದುಕೊಂಡ ಸಂಬಂಧ ತಿರುಗಿ ಪಡೆಯಲಾಗದು. ವ್ಯಕ್ತಿತ್ವ ಅನ್ನುವುದು ಆಸ್ತಿ ಅಂತಸ್ತಿನಲ್ಲಿ ಇರುವುದಿಲ್ಲ. ಅದು ಆಲೋಚನೆ ಮತ್ತು ಆಚರಣೆಗಳಲ್ಲಿ ಇರುತ್ತದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು. ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಸೋಮವಾರ ನಡೆದ ಹುಣ್ಣಿಮೆ ಧರ್ಮ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಹುಟ್ಟಿದ್ದು ಸಾಯುವುದಕ್ಕಲ್ಲ ಸಾಧಿಸುವುದಕ್ಕೆ. ಬದುಕಿದ್ದು ದ್ವೇಷ ಬೆಳೆಸುವುದಕ್ಕಲ್ಲ ಪ್ರೀತಿ ವಿಶ್ವಾಸ ಗಳಿಸಲಿಕ್ಕೆ ಎಂಬುದನ್ನು ಮರೆಯಬಾರದು. ಪ್ರಭಾವ ನೋಡಿ ಹತ್ತಿರ ಬರುವ ಜನರಿಗಿಂತ ಸ್ವಭಾವ ನೋಡಿ ಹತ್ತಿರ ಬರುವವರೇ ನಿಜವಾದ ಹಿತೈಷಿಗಳು. ಹಣದ ಹಿಂದೆ ಓಡಿದರೆ ಕುಳಿತುಕೊಳ್ಳುವಷ್ಟು ಸಮಯ ಸಿಗುವುದಿಲ್ಲ. ಸಂಬಂಧಗಳ ಜೊತೆ ಸಾಗಿದರೆ ಗೌರವದ ಜೊತೆ ಕಷ್ಟಗಳಿಗೆ ಸ್ಪಂದಿಸುವ ಹೃದಯಗಳು ಸಿಗುತ್ತವೆ. ನಗುವಿನಲ್ಲಿ ಜೊತೆಯಾಗಿರುವ ನೂರು ಜನರಿಗಿಂತ ನೋವಿನಲ್ಲಿ ಜೊತೆಯಾಗಿರುವ ಒಬ್ಬರಿದ್ದರೆ ಸಾಕು. ಪರಿಸ್ಥಿತಿಯನ್ನು ಬದಲಿಸುವುದು ಕಷ್ಟವಾದಾಗ ಮನಸ್ಥಿತಿಯನ್ನು ಬದಲಿಸಿಕೊಳ್ಳುವುದು ಉತ್ತಮ ಶ್ರೀ ಜಗದ್ಗುರು ರೇಣುಕಾಚಾರ್ಯರು ಸಿದ್ಧಾಂತ ಶಿಖಾಮಣಿಯಲ್ಲಿ ಬೋಧಿಸಿದ್ದಾರೆ ಎಂದರು. ಕಲಕೇರಿ ಗುರು ಸಿದ್ಧರಾಮ ಶಿವಾಚಾರ್ಯರು, ಜಳಕೋಟಿನ ಮಠಾಧ್ಯಕ್ಷ , ದೋರನಹಳ್ಳಿ ಅಭಿನವ ಮಹಾಂತೇಶ್ವರ ಶಿವಾಚಾರ್ಯರು ನುಡಿ ನಮನ ಸಲ್ಲಿಸಿದರು. ಮುಖ್ಯ ಅತಿಥಿಗಳಾಗಿ ಶಾಸಕ ಟಿ.ಡಿ.ರಾಜೇಗೌಡ, ಗ್ರಾಪಂ ಅಧ್ಯಕ್ಷ ರವಿಚಂದ್ರ, ಮಹೇಶ ಆಚಾರ್ಯ, ಜಯಪ್ರಕಾಶಗೌಡ ಪಾಲ್ಗೊಂಡು ಶ್ರೀ ಜಗದ್ಗುರುಗಳಿಂದ ಗುರುರಕ್ಷೆ ಪಡೆದರು. ಇದೇ ಸಂದರ್ಭದಲ್ಲಿ 13 ಜನ ವೀರಮಾಹೇಶ್ವರ ವಟುಗಳಿಗೆ ಶಿವದೀಕ್ಷಾ ಸಂಸ್ಕಾರ ನೀಡಲಾಯಿತು.

ಬೆಳಗಾಲಪೇಟೆ ಸಿದ್ಧಲಿಂಗಯ್ಯ ಶಾಸ್ತ್ರಿ, ಘನಲಿಂಗ ದೇವರು, ವಿಶ್ವನಾಥ ದೇವರು, ಆಡಳಿತಾಧಿಕಾರಿ ಎಸ್.ಬಿ.ಹಿರೇಮಠ, ಹರಪನಹಳ್ಳಿ ಎಂ.ಕೊಟ್ರೇಶಪ್ಪ, ಗುತ್ತೂರಿನ ವಿರೂಪಾಕ್ಷಪ್ಪ ಮಲ್ಲಜ್ಜರ, ಹರಿಹರದ ಕೊಂಡಜ್ಜಿ ಪಂಚಾಕ್ಷರಿ ಮತ್ತಿತರರ ಗಣ್ಯರು ಉಪಸ್ಥಿತರಿದ್ದರು. ೧೨ಬಿಹೆಚ್‌ಆರ್ ೩:

ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಪೌರ್ಣಿಮೆ ಸಂದರ್ಭದಲ್ಲಿ ಹರಿಹರ ತಾಲೂಕಿನ ನಿಟ್ಟೂರು ಗ್ರಾಮದಿಂದ ಆಗಮಿಸಿದ ಆಂಜನೇಯ ಸ್ವಾಮಿ ಪಲ್ಲಕ್ಕಿ ಉತ್ಸವ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ