ಖಾಸಗಿ ಫೈನಾನ್ಸ್ಗಳ ಕಿರುಕುಳ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಮಹಿಳೆಯರು ಶುಕ್ರವಾರ ತಹಸೀಲ್ದಾರ್ ಆರ್.ಎಚ್. ಭಾಗವಾನ ಹಾಗೂ ಶಹರ ಪಿಎಸ್ಐ ಗಡ್ಡೆಪ್ಪ ಗುಂಜುಟಗಿ ಅವರಿಗೆ ಮನವಿ ಸಲ್ಲಿಸಿದರು.
ರಾಣಿಬೆನ್ನೂರು: ಖಾಸಗಿ ಫೈನಾನ್ಸ್ಗಳ ಕಿರುಕುಳ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಮಹಿಳೆಯರು ಶುಕ್ರವಾರ ತಹಸೀಲ್ದಾರ್ ಆರ್.ಎಚ್. ಭಾಗವಾನ ಹಾಗೂ ಶಹರ ಪಿಎಸ್ಐ ಗಡ್ಡೆಪ್ಪ ಗುಂಜುಟಗಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಮಯದಲ್ಲಿ ರೈತ ಮುಖಂಡ ಹನುಮಂತಪ್ಪ ಕಬ್ಬಾರ ಮಾತನಾಡಿ, ಇತ್ತೀಚಿಗೆ ನಗರದಲ್ಲಿ ನಾಯಿಕೊಡೆಯಂತೆ ಹುಟ್ಟಿಕೊಂಡಿರುವ ಖಾಸಗಿ ಫೈನಾನ್ಸ್ಗಳು ನಗರ ಹಾಗೂ ಗ್ರಾಮೀಣ ಭಾಗದ ರೈತ ಕಾರ್ಮಿಕರು, ಕೂಲಿ ಕಾರ್ಮಿಕರು, ಮಧ್ಯಮ ವರ್ಗದ ಬಡವರಿಗೆ ಲೋನ್ ಕೊಟ್ಟು ಅವರಿಂದ ದುಪ್ಪಟ್ಟು ಬಡ್ಡಿಯನ್ನು ವಸೂಲಿ ಮಾಡುತ್ತಿದ್ದಾರೆ. ಸಾಲ ಪಡೆದವರ ಮನೆಯ ಮುಂದೆ ಸಂಜೆ 7ರಿಂದ ರಾತ್ರಿ 11ರ ವರೆಗೆ ಹಣ ಮತ್ತು ಅದರ ಬಡ್ಡಿಯನ್ನು ಕಟ್ಟುವಂತೆ ಅವಮಾನಗೊಳಿಸುತ್ತ ಮನೆ ಬೀಗ ಹಾಕುತ್ತೇವೆ, ಹರಾಜು ಮಾಡುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಸಾಲ ಮರುಪಾವತಿಸಲು ಸಮಯ ಕೇಳಿದರೂ ಒಪ್ಪುತ್ತಿಲ್ಲ. ಈಗಾಗಲೇ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಖಾಸಗಿ ಫೈನಾನ್ಸ್ಗಳಿಂದ ಸಾಲ ವಸೂಲಾತಿಗೆ ಕಿರುಕುಳ ಮುಂದುವರಿದಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಖಾಸಗಿ ಫೈನಾನ್ಸ್ ವ್ಯಕ್ತಿಗಳನ್ನು ಕರೆಯಿಸಿ ಅವರ ನಿಯಮಾವಳಿಗಳ ಪ್ರಕಾರ ವಸೂಲಿ ಮಾಡುವಂತೆ ಮತ್ತು ಕಾಲಾವಕಾಶಗಳನ್ನು ಕೊಡಿಸಿ ಹಣ ವಸೂಲಿ ಮಾಡಿಕೊಳ್ಳಲಿಕ್ಕೆ ಆದೇಶಿಸಬೇಕು ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.