ಮಾಕನೂರ ಕ್ರಾಸ್ ಬಳಿ ಬಸ್ ನಿಲುಗಡೆ ಆಗ್ರಹಿಸಿ ಮನವಿ

KannadaprabhaNewsNetwork |  
Published : Jul 11, 2026, 01:00 AM IST
ರಾಣಿಬೆನ್ನೂರು ತಾಲೂಕಿನ ಮಾಕನೂರ ಕ್ರಾಸ್ ಬಳಿ ರಾಣಿಬೆನ್ನೂರಿನಿಂದ ಹರಿಹರಕ್ಕೆ ತೆರಳುವ ಪ್ರತಿಯೊಂದು ಬಸ್‌ಗಳನ್ನು ನಿಲುಗಡೆ ಮಾಡುವಂತೆ ಆಗ್ರಹಿಸಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಡಿಪೋ ಮ್ಯಾನೇಜರ್‌ಗೆ ಮನವಿ ಸಲ್ಲಿಸಿದರು.  | Kannada Prabha

ಸಾರಾಂಶ

ರಾಣಿಬೆನ್ನೂರಿನಿಂದ ಹರಿಹರಕ್ಕೆ ತೆರಳುವ ಪ್ರತಿಯೊಂದು ಬಸ್‌ಗಳನ್ನು ತಾಲೂಕಿನ ಮಾಕನೂರ ಕ್ರಾಸ್ ಬಳಿ ನಿಲುಗಡೆ ಮಾಡುವಂತೆ ಆಗ್ರಹಿಸಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಡಿಪೋ ಮ್ಯಾನೇಜರ್ ಹಾಗೂ ಶಾಸಕ ಪ್ರಕಾಶ ಕೋಳಿವಾಡ ಆಪ್ತ ಕಾರ್ಯದರ್ಶಿ ಮಹೇಶ ಕೆಂಚರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ರಾಣಿಬೆನ್ನೂರು: ರಾಣಿಬೆನ್ನೂರಿನಿಂದ ಹರಿಹರಕ್ಕೆ ತೆರಳುವ ಪ್ರತಿಯೊಂದು ಬಸ್‌ಗಳನ್ನು ತಾಲೂಕಿನ ಮಾಕನೂರ ಕ್ರಾಸ್ ಬಳಿ ನಿಲುಗಡೆ ಮಾಡುವಂತೆ ಆಗ್ರಹಿಸಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಡಿಪೋ ಮ್ಯಾನೇಜರ್ ಹಾಗೂ ಶಾಸಕ ಪ್ರಕಾಶ ಕೋಳಿವಾಡ ಆಪ್ತ ಕಾರ್ಯದರ್ಶಿ ಮಹೇಶ ಕೆಂಚರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ಸಂಘಟನೆಯ ರಾಜ್ಯಾಧ್ಯಕ್ಷ ನಿತ್ಯಾನಂದ ಕುಂದಾಪುರ ಮಾತನಾಡಿ, ಮಾಕನೂರು ಕ್ರಾಸ್‌ಗೆ ಸ್ಟೇಜ್ ಪಾಯಿಂಟ್ ಮಾಡಿ ಬಸ್ ನಿಲುಗಡೆಗೆ ಕ್ರಮ ಜರುಗಿಸಬೇಕು. ಇತ್ತೀಚಿಗೆ ರಾಜ್ಯ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರಿಗೆ ಮಾಕನೂರ ಕ್ರಾಸ್ ಬಳಿ ಇಳಿಯಲು ಅವಕಾಶ ನೀಡದೇ ಅವರನ್ನು ಕುಮಾರಪಟ್ಟಣದಲ್ಲಿ ಇಳಿಸಿರುವುದು ಸರಿಯಲ್ಲ. ಇದಕ್ಕೆ ವ್ಯತಿರಿಕ್ತವಾಗಿ ಪುರುಷರಿಗೆ ಮಾತ್ರ ಮಾಕನೂರ ಕ್ರಾಸ್ ಬಳಿ ಇಳಿಸುತ್ತಾರೆ ಎಂದು ಆರೋಪಿಸಿದರು.

ತಾಲೂಕು ಅಧ್ಯಕ್ಷ ಚಂದ್ರಪ್ಪ ಬಣಕಾರ ಮಾತನಾಡಿ, ಮಾಕನೂರು ಕ್ರಾಸ್ ಸುಮಾರು 15 ಹಳ್ಳಿಯ ಸಂಪರ್ಕ ಹೊಂದಿರುವ ಸ್ಥಳವಾಗಿದೆ. ಈ ಭಾಗದಿಂದ ದಾವಣಗೆರೆ ಚಿಗಟೇರಿ ಆಸ್ಪತ್ರೆ, ಶಿವಮೊಗ್ಗ ಮಂಗಳೂರು, ಮಣಿಪಾಲ ಮುಂತಾದ ಕಡೆಗಳಲ್ಲಿರುವ ಆಸ್ಪತ್ರೆಗಳಿಗೆ ಪ್ರಯಾಣಿಕರು ತೆರಳುತ್ತಾರೆ. ಇದಲ್ಲದೆ ವಿವಿಧ ಕೆಲಸಗಳಿಗಾಗಿ ಸಾರ್ವಜನಿಕರು, ರೈತರು, ವಿದ್ಯಾರ್ಥಿಗಳು ಪರಸ್ಥಳಗಳಿಗೆ ತೆರಳುತ್ತಾರೆ. ಆದ್ದರಿಂದ ಶಾಸಕರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ ಮಾಕನೂರು ಕ್ರಾಸ್ ಬಳಿ ಬಸ್ ನಿಲುಗಡೆಗೆ ಸೂಚಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಸಿದ್ಧಾರೂಢ ಗುರುಂ, ಮರಡೆಪ್ಪ ಚಳಗೇರಿ, ಆನಂದ ಲಮಾಣಿ, ರಾಜು ಲಮಾಣಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂಬಾಕುಮುಕ್ತ ಗ್ರಾಮಗಳೆಂದು ಕಲಬಾವಿ, ಹರೇಗಾಳಿ ಗುರುತು
ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗಳಿಗೆ ಶೀಘ್ರ ₹62.56 ಕೋಟಿ ಜಮೆ