ಕನ್ನಡಪ್ರಭ ವಾರ್ತೆ ಚಿಕ್ಕೋಡಿ
ಭಾನುವಾರ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಚಿಕ್ಕೋಡಿ ವಕೀಲರ ಸಂಘದ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೆರಿಸಿ ಮಾತನಾಡಿದ ಅವರು, . ವಕೀಲರು ಕಡಿಮೆ ಅವಧಿಯಲ್ಲಿ ಪ್ರಕರಣಗಳನ್ನು ಮುಗಿಸಿ, ನ್ಯಾಯ ಒದಗಿಸಬೇಕು. ಚಿಕ್ಕೋಡಿ ಜಿಲ್ಲಾ ನ್ಯಾಯಾಲಯಕ್ಕಾಗಿ ಜನಸಂಖ್ಯೆ ಆಧಾರದ ಮೇಲೆ ವರದಿ ಸಲ್ಲಿಸಿದರೆ, ನ್ಯಾಯಾಂಗ ಸಮಿತಿ ಅನುಮೋದಿಸಬಹುದು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಮಾತನಾಡಿ, ಇದೆ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಳಗಾವಿ ಜಿಲ್ಲೆ ವಿಭಜನೆ ಮಾಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ, ಅವರು ಘೋಷಣೆ ಮಾಡಲಿಲ್ಲ. ಬೈಲಹೊಂಗಲ, ಗೋಕಾಕ್ನವರು ಜಿಲ್ಲೆ ಕೇಳುತ್ತಿದ್ದಾರೆ. ಯಾವುದಾದರೂ ಮಾಡಲಿ ಆದರೆ, ನಮಗೆ ಚಿಕ್ಕೋಡಿ ಜಿಲ್ಲೆ ಆಗಬೇಕು. ಜಿಲ್ಲಾ ನ್ಯಾಯಾಲಯ ಹಾಗೂ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಸ್ವತಂತ್ರ ಜಿಲ್ಲೆ ಮಾಡಿಕೊಡಿ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಕುಮಾರ ಅವರಿಗೆ ಮನವಿ ಮಾಡಿದರು.ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ನನ್ನ ಬೇಡಿಕೆಯ ಮೇರೆಗೆ ಚಿಕ್ಕೋಡಿ ನ್ಯಾಯಾಲಯಕ್ಕೆ ಭೇಟಿ ನೀಡಿ ವಕೀಲರ ಸಂಘದ ಕಟ್ಟಡಕ್ಕೆ ₹2.5 ಕೋಟಿ ರೂ.ಮಂಜೂರು ಮಾಡಿದ್ದಾರೆ ಎಂದರು.
ಹೈಕೋರ್ಟ್ ನ್ಯಾಯಾಧೀಶರು ಕೆ. ಎಸ್. ಹೇಮಲೇಖಾ, ಅನಿಲ ಕಟ್ಟಿ , ರಾಮಚಂದ್ರ ಹುದಾರ, ವಿಜಯಕುಮಾರ ಪಾಟೀಲ ರಿಜಿಸ್ಟ್ರಾರ್ ಜನರಲ್ ಭರತಕುಮಾರ, ವಿನಯ್ ಮಾಂಗ್ಲೇಕರ, ಪಿಡಬ್ಲ್ಯುಡಿ ಅಧೀಕ್ಷಕ ಅರುಣ್ ಕುಮಾರ, ಎಂಜಿನಿಯರ್ ಸುನೀಲ ಬಳ್ಳೋಳ್, ಚಿಕ್ಕೋಡಿಯ ಏಳನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಎಲ್. ಚವ್ಹಾಣ, ನ್ಯಾಯಾಧೀಶ ಹರೀಶ ಪಾಟೀಲ, ನ್ಯಾಯಾಧೀಶ ನಾಗೇಶ ಪಾಟೀಲ್, ನ್ಯಾಯಾಧೀಶ ಅಶೋಕ್ ಆರ್. ಎಚ್., ವಕೀಲರ ಸಂಘದ ಚಿಕ್ಕೋಡಿ ಅಧ್ಯಕ್ಷ ಕಲ್ಮೇಶ ಕಿವಡ, ಕಾರ್ಯದರ್ಶಿ ಎಸ್. ಆರ್. ವಾಲಿ, ಪೊಲೀಸ್ ಉಪಾಧೀಕ್ಷಕ ಗೋಪಾಲಕೃಷ್ಣ ಗೌಡರ್, ಎಚ್.ಎಸ್ ನಸಲಾಪುರೆ, ಬಿ.ಆರ್ ಯಾದವ್, ನಾಗೇಶ ಕಿವಾಡ್, ಸತೀಶ ಕುಲಕರ್ಣಿ, ಮುದಸರ ಜಮಾದಾರ, ಅನಿಲ ಮಾನೆ, ಗುಲಾಬ ಬಾಗವಾನ ರಾಮಾ ಮಾನೆ ಇದ್ದರು.