ಪೊಲೀಸರಿಗೆ ದೈಹಿಕ, ಮಾನಸಿಕ ಆರೋಗ್ಯ ಅತ್ಯಗತ್ಯ

KannadaprabhaNewsNetwork |  
Published : Aug 25, 2024, 01:48 AM IST
24ಕೆಡಿವಿಜಿ1-ದಾವಣಗೆರೆಯಲ್ಲಿ ಶನಿವಾರ ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಕುಟುಬ ವರ್ಗಕ್ಕೆ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿದ ಎಸ್ಪಿ ಉಮಾ ಪ್ರಶಾಂತ. ..................24ಕೆಡಿವಿಜಿ2-ದಾವಣಗೆರೆಯಲ್ಲಿ ಶನಿವಾರ ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಕುಟುಬ ವರ್ಗಕ್ಕೆ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿದ ಎಸ್ಪಿ ಉಮಾ ಪ್ರಶಾಂತ ಸ್ವತಃ ಬಿಪಿ ತಪಾಸಣೆ ಮಾಡಿಸಿಕೊಂಡರು. | Kannada Prabha

ಸಾರಾಂಶ

ದಿನದ 24 ಗಂಟೆ, ವರ್ಷದ 365 ದಿನವೂ ಕಾರ್ಯ ನಿರ್ವಹಿಸುವ ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಭಂದಿ ತಮ್ಮ ಆರೋಗ್ಯದ ಕಡೆಗೂ ಗಮನಹರಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್‌ ಹೇಳಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ದಿನದ 24 ಗಂಟೆ, ವರ್ಷದ 365 ದಿನವೂ ಕಾರ್ಯ ನಿರ್ವಹಿಸುವ ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಭಂದಿ ತಮ್ಮ ಆರೋಗ್ಯದ ಕಡೆಗೂ ಗಮನಹರಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್‌ ಹೇಳಿದರು.

ನಗರದ ಜಿಲ್ಲಾ ಪೊಲೀಸ್ ವಸತಿ ಗೃಹಗಳ ಸಮುಚ್ಛಯ ಆವರಣದಲ್ಲಿ ಶನಿವಾರ ಜಿಲ್ಲಾ ಪೊಲೀಸ್ ಇಲಾಖೆ, ಡಾ. ಅಗರವಾಲ್‌ ಕಣ್ಣಿನ ಆಸ್ಪತ್ರೆ, ಪರ್ವತ ಲೈಫ್‌ ಕೇರ್‌, ಆಚಾರ್‌ ಲ್ಯಾಬ್ಸ್‌ ಮತ್ತು ಶ್ರೀ ಸ್ವಾಮಿ ವಿವೇಕಾನಂದ ಸ್ವಯಂಪ್ರೇರಿತ ರಕ್ತ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಪೊಲೀಸ್ ಅಧಿಕಾರಿ, ಸಿಬ್ಭಂದಿ ಹಾಗೂ ಕುಟುಂಬ ವರ್ಗದ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಬಿಡುವಿಲ್ಲದೇ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ, ಸಿಬ್ಬಂದಿ ಮೇಲೆ ಭಾರಿ ಒತ್ತಡ ಇರುತ್ತದೆ. ಒತ್ತಡಕ್ಕೊಳಗಾಗಿ ಅನೇಕ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುವುದನ್ನೂ ನಾವು ಕಂಡಿದ್ದೇವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ, ಸಿಬ್ಭಂದಿ ತಮ್ಮ ವೈಯಕ್ತಿಕ ಆರೋಗ್ಯ, ಕುಟುಂಬದ ಆರೋಗ್ಯದ ಕಡೆಗೂ ಗಮನಹರಿಸಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಇಲಾಖೆಯಿಂದ ಮುಂದಿನ ದಿನಗಳಲ್ಲಿ ಆರೋಗ್ಯ ತಪಾಸಣೆ ಶಿಬಿರವನ್ನು ಹೆಚ್ಚಿನ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿದರು.

ಕಿಡ್ನಿ ತಜ್ಞ ಡಾ. ಆರ್.ಮೋಹನ ಮಾತನಾಡಿ, ಕಿಡ್ನಿಯನ್ನು ಆರೋಗ್ಯಯುತವಾಗಿ ಕಾಪಾಡಿಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪೊಲೀಸರು ಮತ್ತು ಅವರ ಕುಟುಂಬ ವರ್ಗಕ್ಕೆ ಮಾಹಿತಿ ನೀಡಿದರು.ಶಿಬಿರದಲ್ಲಿ ರಕ್ತ ಪರೀಕ್ಷೆ, ಕಣ್ಣಿನ ತಪಾಸಣೆ, ಬಿಪಿ, ಶುಗರ್, ಕಿಡ್ನಿ ಆರೋಗ್ಯ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆ ಜತೆಗೆ ಸ್ವಯಂ ಪ್ರೇರಿತ ರಕ್ತ ದಾನ ಶಿಬಿರ ನಡೆಸಲಾಯಿತು.

ನಗರ ಡಿವೈಎಸ್ಪಿ ಮಲ್ಲೇಶ ದೊಡ್ಮನಿ, ಗ್ರಾಮಾಂತರ ಡಿವೈಎಸ್ಪಿ ಬಿ.ಎಸ್.ಬಸವರಾಜ, ಡಿಎಆರ್ ಡಿವೈಎಸ್ಪಿ ಪಿ.ಬಿ. ಪ್ರಕಾಶ, ಆರ್‌ಪಿಐ ಸೋಮಶೇಖರ, ಡಾ.ಆರ್.ಮೋಹನ ಸೇರಿದಂತೆ ಪೊಲೀಸ್ ಅಧಿಕಾರಿ ಸಿಬ್ಭಂದಿ, ವೈದ್ಯಕೀಯ ಸಿಬ್ಭಂದಿ, ಪೊಲೀಸ್ ಕುಟುಂಬದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತ್ರ ‌ನವರಾತ್ರಿ ನಿಮಿತ್ತ ಕನ್ನಡ ಗೀತೆ ಜತೆ ಮೋದಿ ಶುಭಾಶಯ -ದಿನಕ್ಕೊಂದು ಭಾಷೆಯ ಗೀತೆ ಪೋಸ್ಟ್‌
ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ