ಪಂಚಾಕ್ಷರಿ ಮಂತ್ರದಿಂದ ದೈಹಿಕ ಮಾನಸಿಕ ಆರೋಗ್ಯ

KannadaprabhaNewsNetwork |  
Published : Feb 28, 2025, 12:47 AM IST
27ಎಚ್ಎಸ್ಎನ್15 : ಕೊಣನೂರು ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಜ್ಞಾನಜ್ಯೋತಿ ಭವನದ ಸಭಾಂಗಣದಲ್ಲಿ  ಶಿವರಾತ್ರಿ ಮಹೋತ್ಸವದ  ಪ್ರಯುಕ್ತ ನಡೆದ ಕಾರ್ಯಕ್ರಮವನ್ನು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಎನ್. ಕುಮಾರಸ್ವಾಮಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಮಹಾ ಮೃತ್ಯುಂಜಯ ಮಂತ್ರ ಹಾಗೂ ಓಂ ನಮಃ ಶಿವಾಯ ಮಂತ್ರ ಇವೆರಡು ಸನಾತನ ಧರ್ಮದಲ್ಲಿ ಮಹಾರುದ್ರನಿಗೆ ಅರ್ಪಿತವಾದ ಪವಿತ್ರ ಮಂತ್ರಗಳಾಗಿವೆ. ಇಂತಹ ಶಿವ ಪಂಚಾಕ್ಷರಿ ಮಂತ್ರವನ್ನು ಭಕ್ತಿಯಿಂದ ಜಪಿಸಿದರೆ ನಮ್ಮ ದೇಹ, ಮನಸ್ಸು ಹಾಗೂ ಆತ್ಮವು ಶುದ್ಧವಾಗುವುದು ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ನೀಡುವುದು. ಈ ನಿಟ್ಟಿನಲ್ಲಿ ರಾಜಯೋಗ ಶಿಕ್ಷಣ ಉತ್ತಮವಾದದ್ದು ಎಂದು ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಎಂ.ಎನ್. ಕುಮಾರಸ್ವಾಮಿ ಹೇಳಿದರು.

ಕನ್ನಡಪ್ರಭ ವಾರ್ತೆ ರಾಮನಾಥಪುರ

ಮಹಾ ಮೃತ್ಯುಂಜಯ ಮಂತ್ರ ಹಾಗೂ ಓಂ ನಮಃ ಶಿವಾಯ ಮಂತ್ರ ಇವೆರಡು ಸನಾತನ ಧರ್ಮದಲ್ಲಿ ಮಹಾರುದ್ರನಿಗೆ ಅರ್ಪಿತವಾದ ಪವಿತ್ರ ಮಂತ್ರಗಳಾಗಿವೆ. ಇಂತಹ ಶಿವ ಪಂಚಾಕ್ಷರಿ ಮಂತ್ರವನ್ನು ಭಕ್ತಿಯಿಂದ ಜಪಿಸಿದರೆ ನಮ್ಮ ದೇಹ, ಮನಸ್ಸು ಹಾಗೂ ಆತ್ಮವು ಶುದ್ಧವಾಗುವುದು ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ನೀಡುವುದು. ಈ ನಿಟ್ಟಿನಲ್ಲಿ ರಾಜಯೋಗ ಶಿಕ್ಷಣ ಉತ್ತಮವಾದದ್ದು ಎಂದು ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಎಂ.ಎನ್. ಕುಮಾರಸ್ವಾಮಿ ಹೇಳಿದರು.

ಕೊಣನೂರು ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಜ್ಞಾನಜ್ಯೋತಿ ಭವನದ ಸಭಾಂಗಣದಲ್ಲಿ ಸಭಾಂಗಣದಲ್ಲಿ 89ನೇ ಮಹಾಶಿವರಾತ್ರಿ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ ನೇರವೇರಿಸಿದ ನಂತರ ಮಾತನಾಡಿದ ಅವರು, ಧ್ಯಾನದ ಸಮಯದಲ್ಲಿ ಓಂ ನಮಃ ಶಿವಾಯ ಮಂತ್ರ ಸಾಮರಸ್ಯ ಏಕಾಗ್ರತೆ ಹಾಗೂ ಶಕ್ತಿ ನೀಡುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮ ಕುಮಾರಿ ಸೇವಾ ಕೇಂದ್ರದ ಸಂಚಾಲಕರು ಬಿ.ಕೆ. ನಾಗರತ್ನ ಅವರು ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿವರಾತ್ರಿಯ ಮಹತ್ವವನ್ನು ವಿವರಿಸಿ ಶಿವನ ಅವತರಣೆಯ ಸಂದೇಶವನ್ನು ತಿಳಿಸಿದರು. ಕೊಣನೂರು ಗ್ರಾಮ ಪಂಚಾಯತಿ ಅಧ್ಯಕ್ಷರು ಮಿಸ್ಮಾ ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು. ದೀಪ ಬೆಳಗಿಸಿ ಮಾತನಾಡಿದ ಕೊಣನೂರು ಪಂಚಾಯಿತಿ ಉಪಾಧ್ಯಕ್ಷರಾದ ಜಯಮ್ಮ ಸೋಮಶೇಖರ್ ಎಲ್ಲರೂ ಶಿವನಿಂದ ಆಶೀರ್ವಾದ ಪಡೆದುಕೊಳ್ಳಿ ಎಂದು ಕರೆ ನೀಡಿದರು.

ಪ್ರಜಾಪಿತ ಬ್ರಹ್ಮಾ ಕುಮಾರಿ ಸೇವಾ ಕೇಂದ್ರದ ನಾಗರಾಜ ಕೋಟೆಕಾರ್, ಶರಣ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಅಮೃತೇಶ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ತಾಲೂಕು ಅಧ್ಯಕ್ಷ ರಾಮನಾಥಪುರ, ಸಿದ್ದಯ್ಯ, ಸೋಮಶೇಖರ್, ಸೂರ್ಯನಾರಾಯಣ, ಹೆಗ್ಗಡಹಳ್ಳಿ ರಾಚಪ್ಪ, ಚಂದ್ರಣ್ಣ, ಭಾಗ್ಯ, ರವಿ, ಮಂಜಣ್ಣ, ಪ್ರಸಾದ್ ಗೀತಮ್ಮ, ಧನಲಕ್ಷ್ಮಿ, ಗಾಯತ್ರಿ ನಾಗರತ್ನ ಮುಂತಾದವರು ಭಾಗವಹಿಸಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ