ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ನೆಮ್ಮದಿ: ಶಾಸಕ ಎಚ್.ಕೆ.ಸುರೇಶ್

KannadaprabhaNewsNetwork |  
Published : Sep 11, 2024, 01:12 AM IST
10ಎಚ್ಎಸ್ಎನ್6 : ಗೆಂಡೇಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜ್ ಇವರ ಸಂಯುಕ್ತಾಶ್ರಯದಲ್ಲಿ ೨೦೨೫-೨೫ ನೇ ಸಾಲಿನ ಪದವಿ ಪೂರ್ವ ಕಾಲೇಜ್  ತಾಲೂಲು ಮಟ್ಟದ  ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. | Kannada Prabha

ಸಾರಾಂಶ

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ದೈಹಿಕ ಹಾಗೂ ಮಾನಸಿಕ ನೆಮ್ಮದಿಗೆ ಕ್ರೀಡೆ ಮತ್ತು ಯೋಗದ ಅವಶ್ಯಕತೆ ಇದೆ ಎಂದು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು. ಬೇಲೂರಿನಲ್ಲಿ ಕ್ರೀಡಾಕೂಟದಲ್ಲಿ ಮಾತನಾಡಿದರು.

ಪದವಿ ಪೂರ್ವ ತಾ.ಮಟ್ಟದ ಕ್ರೀಡಾಕೂಟ

ಕನ್ನಡಪ್ರಭ ವಾರ್ತೆ ಬೇಲೂರು

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ದೈಹಿಕ ಹಾಗೂ ಮಾನಸಿಕ ನೆಮ್ಮದಿಗೆ ಕ್ರೀಡೆ ಮತ್ತು ಯೋಗದ ಅವಶ್ಯಕತೆ ಇದೆ ಎಂದು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು.

ಗೆಂಡೇಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಜಂಟಿಯಾಗಿ ೨೦೨೫-೨೫ ನೇ ಸಾಲಿನ ಪದವಿ ಪೂರ್ವ ಕಾಲೇಜು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಗುಂಡು ಎಸೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಕ್ರೀಡಾ ಮನೋಭಾವದ ಅವಶ್ಯಕತೆ ಇದೆ. ಮನಸ್ಸಿನ ಏಕಾಗ್ರತೆ ಮತ್ತು ಶಾಂತಿಗಾಗಿ ಕ್ರೀಡೆ ಅತ್ಯವಶ್ಯಕ. ಕ್ರೀಡೆಯಲ್ಲಿ ಭಾಗವಹಸುವುದು ಕೇವಲ ಬಹುಮಾನ ಗೆಲ್ಲಲು ಅಲ್ಲ. ಇಂದಿನ ಯುವಕರು ಆರೋಗ್ಯದತ್ತ ನಿರ್ಲಕ್ಷ್ಯ ತೋರುತ್ತಿರುವುದು ವಿಷಾದದ ಸಂಗತಿ. ದಿನದ ಒಂದಷ್ಟು ಅವಧಿಯನ್ನು ವ್ಯಾಯಾಮಕ್ಕೆ ಮೀಸಲಾಗಿಡಬೇಕು. ಮಕ್ಕಳು ಸದಾ ಚಟುವಟಿಕೆಯಿಂದ ಇರುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪುಸ್ತಕ ಜ್ಞಾನಕ್ಕಿಂತ ಮಿಗಿಲಾದ ಕ್ರೀಡಾ ಪ್ರೌಢಿಮೆ ಕೆಲವರಲ್ಲಿರುತ್ತದೆ. ಅದರಂತೆ ಹೋಬಳಿ ಮಟ್ಟದ ಕ್ರೀಡೆಗಳನ್ನು ಆಯೋಜಿಸಲಾಗುತ್ತದೆ. ಈ ಸ್ಥಳಗಳಲ್ಲಿ ಮೂಲಭೂತ ಸೌಕರ್ಯ ಇಲ್ಲ ಎಂಬುವುದರ ಬಗ್ಗೆ ಇದೇ ಸ್ಥಳೀಯ ನಾಯಕರು ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೈಟೆಕ್ ಮಾದರಿಯಲ್ಲಿ ಸುಮಾರು ೫ ಲಕ್ಷ ರು. ವೆಚ್ಚದಲ್ಲಿ ಶೌಚಾಲಯಗಳನ್ನು ನಿರ್ಮಾಣ ಮಾಡಲು ಸೂಚಿಸಲಾಗಿದೆ . ಹೆಚ್ಚುವರಿ ಅನುದಾನ ಬೇಕಾದರೆ ನಾನು ಹಾಕಿಸಿಕೊಡುತ್ತೇನೆ ಎಂದು ಹೇಳಿದರು.

ತಹಸೀಲ್ದಾರ್ ಎಂ.ಮಮತಾ ಮಅತನಾಡಿ, ಕ್ರೀಡೆ ಹಾಗೂ ವಿದ್ಯೆ ಯಾರೊಬ್ಬರ ಸ್ವತ್ತಲ್ಲ. ನಿಮ್ಮ ಭವಿಷ್ಯ ಉಜ್ವಲಗೊಳ್ಳಲು ಈ ಎರಡು ಅಂಶಗಳು ಅತ್ಯವಶ್ಯಕ. ಓದು ನಿಮಗೆ ದಾರಿದೀಪವಾಗುತ್ತದೆ. ಅದರಂತೆ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ನಿಮ್ಮ ಮನಸ್ಸು ದೈಹಿಕವಾಗಿ, ಮಾನಸಿಕವಾಗಿ ಬಲಾಢ್ಯವಾಗುತ್ತದೆ ಎಂದು ಹೇಳಿದರು.

ಪ್ರಾಂಶುಪಾಲ ಗಣೇಶ್ ಮಾತನಾಡಿ, ಸುಮಾರು ೧೫ ವರ್ಷಗಳ ನಂತರ ನಮ್ಮ ಈ ಕ್ರೀಡಾಕೂಟವನ್ನು ಆಯೋಜಿಸುತ್ತಿದ್ದು ಇದಕ್ಕೆ ನಮ್ಮ ಸ್ಥಳೀಯರ ಸಹಕಾರ ಬಹುಮುಖ್ಯವಾಗಿದೆ, ಮಲೆನಾಡು ಭಾಗದಲ್ಲಿ ೧೫ ವರ್ಷದಿಂದ ಶೇಕಡ ೧೦೦ ರಷ್ಟು ಸಾಧನೆ ಮಾಡುತ್ತಿದ್ದು ಇದರ ಜತೆಯಲ್ಲಿ ಗ್ರಾಮಿಣ ಭಾಗದ ಪ್ರತಿಭೆಗಳೆ ಹೆಚ್ಚಾಗಿರುವುದರಿಂದ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಇಲ್ಲಿ ಸುತ್ತಮುತ್ತಲಿನ ಶಾಲೆಗಳಿಗೆ ಅನುಕೂಲವಾಗಿರುವ ಈ ಆಟದ ಮೈದಾನವನ್ನು ಅಭಿವೃದ್ಧಿ ಪಡಿಸುವಂತೆ ಮನವಿ ಮಾಡಿದರು.

ಗ್ರಾಪಂ ಅದ್ಯಕ್ಷ ಅಬ್ದುಲ್ ಹಕಿಂ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ದರ್ಶನ್, ರತನ್, ಮುಖಂಡರಾದ ಬಾಣಸವಳ್ಳಿ ಅಶ್ವತ್, ಜಿ.ಕೆ.ಕುಮಾರ್, ಶ್ರೀನಿವಾಸ್, ಹಿರಿಯಣ್ಣ ಗೌಡ, ಮಹೇಶ್, ಕೆಂಚೇಗೌಡ, ಭಾರತಿ, ಸಂದೀಪ್, ಭುವನ್, ಗ್ರಾಪಂ ಅಭಿವೃದ್ಧಿ ಅಧಿಕಾರಿ ಕುಮಾರ್, ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌