ದೈಹಿಕ ಶಿಕ್ಷಣ ಮಕ್ಕಳ ‌ಸರ್ವತೋಮುಖ ಅಭಿವೃದ್ಧಿಗೆ ದಾರಿ

KannadaprabhaNewsNetwork |  
Published : Oct 29, 2025, 11:00 PM IST
ಕೊಪ್ಪಳ ನಗರದ ಎಸ್‌ಎಫ್‌ಎಸ್‌ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ನಡೆಯಿತು. | Kannada Prabha

ಸಾರಾಂಶ

ವಿದ್ಯಾರ್ಥಿಗಳು ಅತ್ಯಂತ ಶಿಸ್ತಿನಿಂದ ಧ್ವಜವಂದನೆ, ಪಥ ಸಂಚಲನ ನೆರವೇರಿಸಿದರು

ಕೊಪ್ಪಳ: ದೈಹಿಕ ಶಿಕ್ಷಣ ಮಗುವಿಗೆ ಉತ್ತಮ ಆರೋಗ್ಯ ಕೊಟ್ಟರೆ, ಸಾಮಾನ್ಯ ಶಿಕ್ಷಣ ಆ ಮಗುವನ್ನು ಉನ್ನತ ಮಟ್ಟಕ್ಕೆ ಒಯ್ಯುತ್ತದೆ ಎಂದು ದೈಹಿಕ ಶಿಕ್ಷಣಾಧಿಕಾರಿ ಎಂ.ಎಂ. ಮುಜುಗುಂಡವರ ಹೇಳಿದ್ದಾರೆ.

ನಗರದ ಎಸ್‌ಎಫ್‌ಎಸ್‌ ಐಸಿಎಸ್ಇ ಶಾಲೆಯಲ್ಲಿ ಇತ್ತೀಚೆಗೆ ಜರುಗಿದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆಗಳಲ್ಲಿ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ, ಗುರುಗಳನ್ನು ಗೌರವಿಸಿ ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಅತ್ಯಂತ ಶಿಸ್ತಿನಿಂದ ಧ್ವಜವಂದನೆ, ಪಥ ಸಂಚಲನ ನೆರವೇರಿಸಿದರು. ಶಾಲೆಯ ಪ್ರಾಚಾರ್ಯ ಫಾದರ್ ಜಬಮಲೈ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.

ಬಾಸ್ಕೆಟ್ ಬಾಲ್, ಕೊಕೋ, ವಾಲಿಬಾಲ್, ರಿಲೆ 400 ಮೀ. 100 ಓಟ ಮುಂತಾದ ಸ್ಪರ್ಧೆಗಳು ಜರುಗಿದವು. ವ್ಯವಸ್ಥಾಪಕ ಫಾದರ್ ಮ್ಯಾಥ್ಯೂ ಪಾಲ್ಗೊಂಡಿದ್ದರು.

ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರ ಮತ್ತು ಪದಕಗಳನ್ನು ನೀಡಿ ಗೌರವಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!