ಬಳ್ಳಾರಿ: ಪುಸ್ತಕಗಳು ಮನುಷ್ಯನ ಜ್ಞಾನ ವೃದ್ಧಿ ಮಾತ್ರವಲ್ಲದೆ, ಭೌತಿಕ ಬೆಳವಣಿಗೆ ಹೊಂದಲು ಸಹಕಾರಿಯಾಗುತ್ತವೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ ಮುನಿರಾಜು ಅವರು ಹೇಳಿದರು.
ವಿವಿಯ ಕಲಾ ನಿಕಾಯದ ಡೀನರಾದ ಪ್ರೊ.ಶಾಂತನಾಯ್ಕ್ ಅವರು ಮಾತನಾಡಿ, ಮೌಲ್ಯಯುತ ಪುಸ್ತಕಗಳು ವಿದ್ಯಾರ್ಥಿಯ ಜೀವನವನ್ನು ಬದಲಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತವೆ. ಎಲ್ಲ ಭಾಷೆಯ ಪುಸ್ತಕಗಳನ್ನು ಓದಿರಿ, ಆದರೆ ಕನ್ನಡ ಪುಸ್ತಕಗಳನ್ನು ಪ್ರೀತಿಸಿರಿ ಎಂದು ಹೇಳಿದರು.
ವಿವಿಯ ಪ್ರಸಾರಾಂಗ ನಿರ್ದೇಶಕ ಪ್ರೊ.ಅರುಣ್ ಕುಮಾರ್ ಲಗಶೆಟ್ಟಿ ಅವರು ಮಾತನಾಡಿ, ಪ್ರಸಾರಾಂಗದಿಂದ ಪ್ರಕಟಗೊಂಡಿರುವ ಬಳ್ಳಾರಿ ದರ್ಶನ ಪುಸ್ತಕವು ಹೆಚ್ಚು ಬೇಡಿಕೆಯಲ್ಲಿದ್ದು, ಪಠ್ಯಕ್ರಮದ ಪುಸ್ತಕಗಳನ್ನು ಹೆಚ್ಚಾಗಿ ಪ್ರಕಟಿಸಲು ಮುಂಬರುವ ದಿನಗಳಲ್ಲಿ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಪುಸ್ತಕದ ಸಂಪಾದಕರಿಗೆ ಗೌರವಿಸಿ ಪುಸ್ತಕದ ಗೌರವ ಪ್ರತಿಗಳನ್ನು ನೀಡಲಾಯಿತು. ಈ ವೇಳೆ ಎಸ್ಎಸ್ಎ ಕಾಲೇಜಿನ ಪ್ರಾಂಶುಪಾಲರಾದ ಡಾ.ಮೋನಿಕಾ ರಂಜನ್, ಡಾ.ಹೊನ್ನೂರ್ ಅಲಿ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.