ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಕಾನ್ಬೈಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಭಾನುವಾರ ನಾಕೂರು ಕಾನ್ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್ನ ವತಿಯಿಂದ 24ನೇ ವರ್ಷದ ಕ್ರೀಡೋತ್ಸವದ ಅಂಗವಾಗಿ ಜಿಲ್ಲಾಮಟ್ಟದ ಮುಕ್ತ ವಾಲಿಬಾಲ್ ಪಂದ್ಯಾವಳಿ, ಸ್ಥಳೀಯ ಪುರುಷರಿಗೆ ಕಬಡ್ಡಿ ಪಂದ್ಯಾಟ, ಸ್ಥಳೀಯ ಮಹಿಳೆಯರಿಗೆ ಥ್ರೋಬಾಲ್ ಹಾಗೂ ಮಕ್ಕಳಿಗೆ ವಿವಿಧ ಗ್ರಾಮೀಣ ಕ್ರೀಡಾಕೂಟದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕಳೆದ 24 ವರ್ಷಗಳಿಂದ ಫ್ರೆಂಡ್ಸ್ ಯೂತ್ ಕ್ಲಬಿನವರು ಕಠಿಣ ಪರಿಶ್ರಮ ದೊಂದಿಗೆ ದಾನಿಗಳಿಂದ ಹಿತೈಷಿಗಳಿಂದ ಮತ್ತು ಪ್ರಾಯೋಜಕರಿಂದ ಕ್ರೀಡಾಕೂಟವನ್ನು ಗ್ರಾಮದ ಹಬ್ಬದಂತೆ ನಡೆಸಿಕೊಂಡು ಬರುತ್ತಿದ್ದಾರೆ. ಮುಂದಿನ ಬೆಳ್ಳಿಮಹೋತ್ಸವ ಆಚರಣೆಯಲ್ಲಿರುವ ಈ ಸಂಘವು ಮುಂದೆ 50 ಮತ್ತು ಶತಮಾನೋತ್ಸವ ಮಾಡುವಂತಾಗಲಿ ಎಂದು ಜಗನ್ನಾಥ್ ಹಾರೈಸಿದರು.ಕ್ರೀಡಾಕೂಟ ಕೇವಲ ಸೋಲು ಗೆಲುವಿಗೆ ಸೀಮಿತವಾಗದೆ ಅದರಲ್ಲಿ ಜೀವನದ ಪಾಠಗಳನ್ನು ಕಲಿಯಬಹುದಾಗಿದೆ. ನಾವು ಮತ್ತು ನಮ್ಮ ಮಕ್ಕಳು ಮೊಬೈಲ್ ದಾಸರಾಗಿದ್ದು, ದಿನದ 24 ಗಂಟೆಯು ಮಕ್ಕಳನ್ನು ಓದು ಓದು ಎಂದು ಹೇಳುತ್ತೇವೆಯೇ ಹೊರತು, ಶರೀರ ಮತ್ತು ಮನಸ್ಸನ್ನು ಆರೋಗ್ಯವಾಗಿಡುವ ಕ್ರೀಡೆ ಕಲಿಸುತ್ತಿಲ್ಲ. ಇದರಿಂದಾಗಿ ಮಕ್ಕಳು ಈಜು ಬಾರದೆ ಮರಹತ್ತಲು ತಿಳಿಯದೆ ಜೀವನದ ಸೋಲುಗಳನ್ನು ಕ್ರೀಡಾ ಸ್ಪೂರ್ತಿಯಿಂದ ತೆಗೆದುಕೊಳ್ಳಲು ಆಗದೆ ಅವರು ಪ್ರಾಣಕಳೆದುಕೊಳ್ಳುತ್ತಿದ್ದಾರೆ ಎಂದು ವಿಷಾದಿಸಿದರು.
ಪ್ರತಿಯೊಬ್ಬ ಮನುಷ್ಯನಿಗೆ ಶಾರೀರಿಕ ಮತ್ತು ಮಾನಸಿಕ ಶ್ರಮತೆ ಅಗತ್ಯ. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈ ರೀತಿಯ ಕ್ರೀಡಾಕೂಟಗಳು ನಡೆದಾಗ ದೈಹಿಕ ಮತ್ತು ಮಾನಸಿಕ ಕ್ಷಮತೆಯೊಂದಿಗೆ ಜೀವನವನ್ನು ಕ್ರೀಡಾಸ್ಪೂರ್ತಿಯಿಂದ ನೋಡಲು ಸಾಧ್ಯವಾಗುತ್ತದೆ. 24 ವರ್ಷಗಳಿಂದ ಕ್ರೀಡಾಕೂಟವನ್ನು ಆಯೋಜಿಸಿಕೊಂಡು ಬರುತ್ತಿರುವ ಫ್ರೆಂಡ್ಸ್ ಯೂತ್ ಕ್ಲಬಿನವರು ಅಭಿನಂದಾರ್ಹರು ಎಂದು ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೂಳಪ್ಪ ಕೂತಿನರ್ ಹೇಳಿದರು.
ಸಮಾರಂಭವನ್ನು ಉದ್ದೇಶಿಸಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಗೀತಾಬಸಪ್ಪ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಿ.ವಿ.ಸತೀಶ್, ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಮಹಮ್ಮದ್ ಮಾತನಾಡಿದರು.
ಸಮಾರಂಭದಲ್ಲಿ ಸಂಘದ ಕಾರ್ಯದರ್ಶಿ ಶಂಕರನಾರಾಯಣ ಸ್ವಾಗತಿಸಿ ವಂದಿಸಿದರು. ಸಂಘದ ಸದಸ್ಯ ಅಜಿತ್, ವಿನೋದ್ ನಿರೂಪಿಸಿದರು.
ವಾಲಿಬಾಲ್ ಫೈನಲ್ ಪಂದ್ಯಾವಳಿಯು ಬಿಲಾಲ್ ಫ್ರೆಂಡ್ಸ್ ಕುಶಾಲನಗರ ಹಾಗೂ ಅಭಿ ಫ್ರೆಂಡ್ಸ್ ಮಳ್ಳೂರು ತಂಡಗಳ ನಡುವೆ ನಡೆದಿದ್ದು ಪಂದ್ಯಾವಳಿಯ ಉದ್ಘಾಟನೆಯನ್ನು ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್, ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂದೋಡಿ ಜಗನ್ನಾಥ್, ಕಾಫಿ ಬೆಳೆಗಾರರಾದ ಈರಪ್ಪ, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಚಂದ್ರಶೇಖರ್ ಹೆರೂರು, ಫ್ರೆಂಡ್ಸ್ ಯೂತ್ ಕ್ಲಬ್ ಮಾಜಿ ಅಧ್ಯಕ್ಷ ಕೆ.ಪಿ.ವಸಂತ್ ಮತ್ತಿತರರು ಚಾಲನೆ ನೀಡಿದರು. ಮಹಿಳೆಯರ ಥ್ರೋಬಾಲ್ ಫೈನಲ್ ಪಂದ್ಯಾವಳಿಯು ಮಂಜಿಕೆರೆ ತಂಡ ಎಫ್ವೈಸಿ ನಾಕೂರು ತಂಡಗಳ ನಡೆದಿದ್ದು ಪಂದ್ಯಾವಳಿಯ ಉದ್ಘಾಟನೆಯನ್ನು ಕಾನ್ಬೈಲ್ ಗ್ರಾಮದ ಕಾಫಿ ಬೆಳೆಗಾರರಾದ ನಿಲಮ್ಮ ಪೇಮಯ್ಯ ಅವರು ಉದ್ಘಾಟಿಸಿದರು.