ಕ್ರೀಡೆಯಿಂದ ದೈಹಿಕ ಮಾನಸಿಕ ಸದೃಢ: ಚನ್ನಬಸಪ್ಪ

KannadaprabhaNewsNetwork |  
Published : Sep 20, 2024, 01:46 AM IST
ಪೊಟೋ: 19ಎಸ್‌ಎಂಜಿಕೆಪಿ07ಶಿವಮೊಗ್ಗದ ಡಿಆರ್‌ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ಪೌರ ಕಾರ್ಮಿಕರ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಚಾಲನೆ ನೀಡಿದರು. | Kannada Prabha

ಸಾರಾಂಶ

ಶಿವಮೊಗ್ಗದ ಡಿಆರ್‌ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ಪೌರ ಕಾರ್ಮಿಕರ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಕ್ರೀಡೆಯಿಂದ ದೈಹಿಕ ಮಾನಸಿಕ ಸದೃಢತೆ ಸಿಗುತ್ತದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಮಹಾನಗರ ಪಾಲಿಕೆ ಮತ್ತು ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಗುರುವಾರ ನಗರದ ಡಿಆರ್‌ ಮೈದಾನದಲ್ಲಿ ಏರ್ಪಡಿಸಿದ್ದ ಪೌರ ಕಾರ್ಮಿಕರ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಕ್ರೀಡೆಯಲ್ಲಿ ಯಾರು ಗೆಲ್ಲುತ್ತಾರೆ ಯಾರು ಸೋಲುತ್ತಾರೆ ಎಂಬುದಕ್ಕಿಂತ ಸೋಲುವುದರಲ್ಲಿ ಗೆಲುವಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಕ್ರೀಡೆ ಎಲ್ಲರಿಗೂ ಸಹಕಾರಿ ಎಂದರು.

ಕ್ರೀಡಾ ಮನೋಭಾವ ಜಾಸ್ತಿಯಾದರೆ ಎಲ್ಲರಿಗೂ ಸಹಕಾರಿ. ಭಾವನೆಗಳಿಗೆ ಶಕ್ತಿ ಸಿಗುವಂತಹ ಸಂದರ್ಭ. ಈ ನಿಟ್ಟಿನಲ್ಲಿ ಒಟ್ಟಾಗಿ ನಿಂತು ಒಳ್ಳೆಯ ಆಲೋಚನೆ ಮಾಡಿ ಒಂದು ರೂಪ ಕೊಟ್ಟಿದ್ದಾರೆ. ಮಹಾನಗರ ಪಾಲಿಕೆ ಆಡಳಿತ ವೃಂದ ಪೂರ್ತಿಯಾಗಿ ಸಹಕಾರ ನೀಡಿದ್ದಾರೆ. ಎಲ್ಲರಿಗೂ ಶುಭವಾಗಲಿ ಎಂದು ಆಶಿಸಿದರು.

ಕಲ್ಯಾಣ ಭವನ ನಿರ್ಮಾಣ ತುಂಬಾ ದೀರ್ಘ ಕಾಲ ತೆಗೆದುಕೊಂಡಿದೆ. ಅದರ ಬಗ್ಗೆ ನಮಗೆ ವಿಷಾದವೂ ಇದೆ. ನೋವು ಇದೆ. ಪೌರಕಾರ್ಮಿಕರಿಗೆ ವಿಶೇಷವಾಗಿ ಮನೆಗಳು ಆಗುತ್ತಿವೆ. ಇಲ್ಲಿ ಕಂಟ್ರ್ಯಾಕ್ಟರ್ ಸಮಸ್ಯೆ ಆಗಿದ್ದಾನೆ. ಅವರಿಂದಲೇ ಮಾಡಿಸಬೇಕಾ ಅಥವಾ ಬೇರೆಯವರಿಂದ ಮಾಡಿಸಬೇಕಾ ಎಂಬುದು ದೊಡ್ಡ ಸಮಸ್ಯೆಯಾಗಿದೆ. ಆದಷ್ಟು ಬೇಗ ಈ ಎರಡು ಸಂಗತಿಗಳ ಬಗ್ಗೆ ಗಂಭೀರವಾಗಿ ಗಮನಹರಿಸುತ್ತೇವೆ ಎಂದು ಆಶ್ವಾಸನೆ ನೀಡಿದರು.

ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎನ್. ಗೋವಿಂದ ಮಾತನಾಡಿ, ಪ್ರತಿ ವರ್ಷವೂ ಅತ್ಯಂತ ವಿಜೃಂಭಣೆ ಮತ್ತು ಅರ್ಥ ಪೂರ್ಣವಾಗಿ ಪೌರ ಕಾರ್ಮಿಕರ ದಿನಾಚರಣೆಯನ್ನು ಮಾಡಲಾಗುತ್ತದೆ. ಈ ವರ್ಷವೂ ಅದೇ ರೀತಿ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ನಗರದ ಶಾಸಕರು ಸಹಕರಿಸಿ ಪೌರಕಾರ್ಮಿಕರ ಪರವಾಗಿ ಇರುವಂತಹತ್ತು ದೊಡ್ಡ ಸಂಗತಿ. ಸಮುದಾಯ ಭವನ ಮತ್ತೆ ಪುನಃಶ್ಚೇತನ ಗೊಳಿಸುವಂತೆ ಮನವಿ ಮಾಡಿದರು.

ಕ್ರೀಡಾಕೂಟದಲ್ಲಿ 100 ಮೀಟರ್ ಓಟ, ಗುಂಡು ಎಸೆತ, ಜಾವಲಿನ್, ಮ್ಯೂಸಿಕಲ್ ಚೇರ್ ಸೇರಿದಂತೆ ಇನ್ನಿತರ ಆಟಗಳನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಉಪ ಅಯ್ಯುಕ್ತರು ಲಿಂಗೇಗೌಡ, ಕಂದಾಯ ಅಧಿಕಾರಿ ವಿರೂಪಾಕ್ಷಪ್ಪ ಪೂಜಾರ್, ಸಂಘದ ಪ್ರದಾನ ಕಾರ್ಯದರ್ಶಿ ಮೋಹನ್ ಕುಮಾರ್.ಡಿ, ಉಪಾಧ್ಯಕ್ಷ ಕುಮಾರ್, ನಿರ್ದೇಶಕರಾದ ವಸಂತ್‌ಕುಮಾರ್, ನಾಗೇಶ್, ಎಸ್.ಡಿ.ಮಂಜಣ್ಣ, ಲೋಹಿತ್, ಕ್ರೀಡಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಪೌರ ಸೇವಾ ನೌಕರರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

PREV

Latest Stories

ಏಕರೂಪ ಸಿನಿಮಾ ಟಿಕೆಟ್‌ ದರಕ್ಕೆ ಕರಡು- ಗರಿಷ್ಠ ಟಿಕೆಟ್‌ ದರ ₹200 ನಿಗದಿ
ಶಾಲೆಯಲ್ಲಿನ ಕಲುಷಿತ ಬಿಸಿಯೂಟ ಸೇವಿಸಿ 68 ವಿದ್ಯಾರ್ಥಿಗಳು ಅಸ್ವಸ್ಥ
ರಾಷ್ಟ್ರೀಯ ಲೋಕ ಅದಾಲತ್: 58.67 ಲಕ್ಷ ಕೇಸ್ ಇತ್ಯರ್ಥ