ಸರ್ಕಾರಿ ಮೆಡಿಕಲ್ ಕಾಲೇಜ್ ಸ್ಥಾಪನೆಗಾಗಿ ಹೈಕೋರ್ಟ್‌ನಲ್ಲಿ ಪಿಐಎಲ್‌

KannadaprabhaNewsNetwork |  
Published : Jan 09, 2026, 03:00 AM IST
ರಾಜ್ಯಾಧ್ಯಕ್ಷ ಕೆಂಗನಾಳ | Kannada Prabha

ಸಾರಾಂಶ

ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಮಾಡಲು ಒತ್ತಾಯಿಸಿ ನಡೆದ ಹೋರಾಟವನ್ನು ರಾಜ್ಯ ಸರ್ಕಾರ ಕಡೆಗಣಿಸಿದ್ದರಿಂದ ರಾಜ್ಯ ಸರ್ಕಾರದ ಧೋರಣೆ ವಿರುದ್ಧ ಜಿಲ್ಲೆಗೆ ಸರ್ಕಾರದಿಂದಲೇ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸಲು ಆಗ್ರಹಿಸಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಡಿಸೆಂಬರ್ ತಿಂಗಳಲ್ಲೇ ಸಲ್ಲಿಸಲಾಗಿದೆ ಎಂದು ಅರ್ಜಿದಾರ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಮಾಡಲು ಒತ್ತಾಯಿಸಿ ನಡೆದ ಹೋರಾಟವನ್ನು ರಾಜ್ಯ ಸರ್ಕಾರ ಕಡೆಗಣಿಸಿದ್ದರಿಂದ ರಾಜ್ಯ ಸರ್ಕಾರದ ಧೋರಣೆ ವಿರುದ್ಧ ಜಿಲ್ಲೆಗೆ ಸರ್ಕಾರದಿಂದಲೇ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸಲು ಆಗ್ರಹಿಸಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಡಿಸೆಂಬರ್ ತಿಂಗಳಲ್ಲೇ ಸಲ್ಲಿಸಲಾಗಿದೆ ಎಂದು ಅರ್ಜಿದಾರ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ ಸರ್ಕಾರ ಜಿಲ್ಲೆಯ ಜನರ ಬೇಡಿಕೆಯು ಸಾರ್ವಜನಿಕ ಹಿತಾಸಕ್ತಿಯ ಬೇಡಿಕೆಯಾಗಿದೆ. ಸಾರ್ವಜನಿಕರಿಗೆ ಶಿಕ್ಷಣ ಮತ್ತು ಆರೋಗ್ಯ ಸೇವೆ ನೀಡ ಬೇಕಾಗಿರುವುದು ಪ್ರಜಾಪ್ರಭುತ್ವ ಸರ್ಕಾರದ ಸಂವಿಧಾನಬದ್ದ ಕರ್ತವ್ಯವಾಗಿದೆ. ಸರ್ಕಾರ ತನ್ನ ಕರ್ತವ್ಯ ನಿರ್ವಹಿಸಲು ಸಂಪೂರ್ಣ ವಿಫಲವಾಗಿದೆ. ಶಾಸಕಾಂಗ ಮತ್ತು ಕಾರ್ಯಾಂಗಗಳು ವಿಫಲವಾಗಿರುವುದನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ನ್ಯಾಯಾಂಗದ ಗಮನಕ್ಕೆ ತರಲಾಗಿದೆ. ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ವಿಜಯಪುರ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಕಾನೂನು ಬದ್ದ ನೋಟಿಸ್ ನೀಡಿ ವಿಜಯಪುರ ಜಿಲ್ಲೆಗೆ ಉದ್ದೇಶಿತ ಪಿಪಿಪಿ ಮಾದರಿಯ ಖಾಸಗೀಕರಣ ಕೈಬಿಡಲು ಒತ್ತಾಯಿಸುತ್ತಿರುವ ಜನರ ಬೇಡಿಕೆ ಕುರಿತು ಸ್ಪಷ್ಟ ಅಭಿಪ್ರಾಯ ಕೇಳಲಾಗಿದೆ. ಜೊತೆಗೆ ರಾಜ್ಯ ಸರ್ಕಾರದಿಂದ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಮಾಡುವ ಕುರಿತು ಹಾಗೂ ಕೇಂದ್ರ ಸರ್ಕಾರದಿಂದ ಏಮ್ಸ್ ಸ್ಥಾಪನೆ ಮಾಡುವ ಕುರಿತು ಲಿಖಿತ ಸ್ಪಷ್ಟನೆ ಕೇಳಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಉಚ್ಚ ನ್ಯಾಯಾಲಯದ ಮುಂದೆ ಲಿಖಿತ ಉತ್ತರ ನೀಡಬೇಕಾಗಿದೆ. ಕರ್ನಾಟಕ ಉಚ್ಚ ನ್ಯಾಯಾಲಯವು ಜಿಲ್ಲೆಯ ಜನರ ಬೇಡಿಕೆಗೆ ನ್ಯಾಯ ಒದಗಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ